<p><strong>ಮುಂಡರಗಿ:</strong> '70ರ ದಶಕದಲ್ಲಿ ವಿದೇಶಿಯರಿಂದ ಹಾವಾಡಿಗರ ದೇಶವೆಂದು ಕರೆಯಿಸಿಕೊಂಡಿದ್ದ ಭಾರತ ದೇಶ ಇಂದು ಜಗತ್ತಿನ ಅಭಿವೃದ್ಧಿಶೀಲ ಹಾಗೂ ಮುಂಚೂಣಿ ರಾಷ್ಟ್ರವಾಗಿದ್ದು, ಭಾರತೀಯರು ಇಂದು ಜಗತ್ತನ್ನು ಆಳುತ್ತಿದ್ದಾರೆ' ಎಂದು ಗದುಗಿನ ಕೆ.ಎಸ್.ಎಸ್. ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಿ.ಬಿ.ಗವಾನಿ ತಿಳಿಸಿದರು.</p>.<p>ಪಟ್ಟಣದ ಕ.ರಾ.ಬೆಲ್ಲದ ಪದವಿ ಹಾಗೂ ಅರ್ಥಶಾಸ್ತ್ರ ಸ್ನಾತಕೋತ್ತರ ಅದ್ಯಯನ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಸ್ತುತ ಶೈಕ್ಷಣಿಕ ವರ್ಷದ ಪಠ್ಯೇತರ ಚರುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಸುಧೀರ್ಘ ಇತಿಹಾಸವಿದ್ದು, ಅದನ್ನು ಅರ್ಥಮಾಡಿಕೊಳ್ಳುವಲ್ಲಿ ನಾವೆಲ್ಲ ವಿಫಲರಾಗಿದ್ದೇವೆ. ಕನ್ನಡವವು ಒಂದು ಶಾಸ್ತ್ರಿಯ ಭಾಷೆಯಾಗಿದ್ದು, ಈ ಕುರಿತು ಯಾವ ಕೆಲಸಗಳೂ ಇವರೆಗೂ ನಡೆಯದಿರುವುದು ತುಂಬಾ ದುರ್ದೈವದ ಸಂಗತಿಯಾಗಿದೆ ಎಂದು ವಿಷಾದಿಸಿದರು.</p>.<p>ಸಾನಿಧ್ಯ ವಹಿಸಿದ್ದ ಅನ್ನದಾನೀಶ್ವರ ಮಹಾಸ್ವಾಮಿಜಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನವನ್ನು ತಪ್ಪಸ್ಸಿನಂತೆ ಕಳೆಯಬೇಕು. ಕೇವಲ ಪಠ್ಯ ಪುಸ್ತಕಗಳಿಗೆ ಸಿಮೀತರಾಗದೆ ಒಳ್ಳೆಯದನ್ನೆಲ್ಲ ಓದಿ ಪರಿಪೂರ್ಣರಾಗಬೇಕು ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಆರ್.ಎಲ್.ಪೊಲೀಸಪಾಟೀಲ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಪಠ್ಯವನ್ನು ಬೋಧಿಸದೆ ಅವರ ಬದುಕಿಗೆ ಮಾರ್ಗದರ್ಶಿಯಾಗಬಲ್ಲ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳು ತಂದೆ, ತಾಯಿ ಹಾಗೂ ಗುರುವಿನ ಋಣ ತೀರಿಸಬೇಕು ಎಂದು ತಿಳಿಸಿದರು.</p>.<p>ಆಡಳಿತಾಧಿಕಾರಿ ಬಿ.ಜಿ.ಜವಳಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ಗಚ್ಚಣ್ಣವರ, ನಿವೃತ್ತ ಪ್ರಾಚಾರ್ಯ ಡಿ.ಸಿ.ಮಠದ ಮಾತನಾಡಿದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಉಪನ್ಯಾಸಕ ಆರ್.ಎಚ್.ಜಂಣವಾರಿ ಸ್ವಾಗತಿಸಿದರು. ಪ್ರಾಚಾರ್ಯ ಸಂತೋಷ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಹನುಮಂತಪ್ಪ.ಎಚ್. ವರದಿ ವಾಚಿಸಿದರು. ಲತಾ ಕಡ್ಡಿ ನಿರೂಪಿಸಿದರು. ಟಿ.ಬಿ.ದಂಡಿನ, ಮಮತಾ ಹಣಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> '70ರ ದಶಕದಲ್ಲಿ ವಿದೇಶಿಯರಿಂದ ಹಾವಾಡಿಗರ ದೇಶವೆಂದು ಕರೆಯಿಸಿಕೊಂಡಿದ್ದ ಭಾರತ ದೇಶ ಇಂದು ಜಗತ್ತಿನ ಅಭಿವೃದ್ಧಿಶೀಲ ಹಾಗೂ ಮುಂಚೂಣಿ ರಾಷ್ಟ್ರವಾಗಿದ್ದು, ಭಾರತೀಯರು ಇಂದು ಜಗತ್ತನ್ನು ಆಳುತ್ತಿದ್ದಾರೆ' ಎಂದು ಗದುಗಿನ ಕೆ.ಎಸ್.ಎಸ್. ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಿ.ಬಿ.ಗವಾನಿ ತಿಳಿಸಿದರು.</p>.<p>ಪಟ್ಟಣದ ಕ.ರಾ.ಬೆಲ್ಲದ ಪದವಿ ಹಾಗೂ ಅರ್ಥಶಾಸ್ತ್ರ ಸ್ನಾತಕೋತ್ತರ ಅದ್ಯಯನ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಸ್ತುತ ಶೈಕ್ಷಣಿಕ ವರ್ಷದ ಪಠ್ಯೇತರ ಚರುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಸುಧೀರ್ಘ ಇತಿಹಾಸವಿದ್ದು, ಅದನ್ನು ಅರ್ಥಮಾಡಿಕೊಳ್ಳುವಲ್ಲಿ ನಾವೆಲ್ಲ ವಿಫಲರಾಗಿದ್ದೇವೆ. ಕನ್ನಡವವು ಒಂದು ಶಾಸ್ತ್ರಿಯ ಭಾಷೆಯಾಗಿದ್ದು, ಈ ಕುರಿತು ಯಾವ ಕೆಲಸಗಳೂ ಇವರೆಗೂ ನಡೆಯದಿರುವುದು ತುಂಬಾ ದುರ್ದೈವದ ಸಂಗತಿಯಾಗಿದೆ ಎಂದು ವಿಷಾದಿಸಿದರು.</p>.<p>ಸಾನಿಧ್ಯ ವಹಿಸಿದ್ದ ಅನ್ನದಾನೀಶ್ವರ ಮಹಾಸ್ವಾಮಿಜಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನವನ್ನು ತಪ್ಪಸ್ಸಿನಂತೆ ಕಳೆಯಬೇಕು. ಕೇವಲ ಪಠ್ಯ ಪುಸ್ತಕಗಳಿಗೆ ಸಿಮೀತರಾಗದೆ ಒಳ್ಳೆಯದನ್ನೆಲ್ಲ ಓದಿ ಪರಿಪೂರ್ಣರಾಗಬೇಕು ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಆರ್.ಎಲ್.ಪೊಲೀಸಪಾಟೀಲ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಪಠ್ಯವನ್ನು ಬೋಧಿಸದೆ ಅವರ ಬದುಕಿಗೆ ಮಾರ್ಗದರ್ಶಿಯಾಗಬಲ್ಲ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳು ತಂದೆ, ತಾಯಿ ಹಾಗೂ ಗುರುವಿನ ಋಣ ತೀರಿಸಬೇಕು ಎಂದು ತಿಳಿಸಿದರು.</p>.<p>ಆಡಳಿತಾಧಿಕಾರಿ ಬಿ.ಜಿ.ಜವಳಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ಗಚ್ಚಣ್ಣವರ, ನಿವೃತ್ತ ಪ್ರಾಚಾರ್ಯ ಡಿ.ಸಿ.ಮಠದ ಮಾತನಾಡಿದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಉಪನ್ಯಾಸಕ ಆರ್.ಎಚ್.ಜಂಣವಾರಿ ಸ್ವಾಗತಿಸಿದರು. ಪ್ರಾಚಾರ್ಯ ಸಂತೋಷ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಹನುಮಂತಪ್ಪ.ಎಚ್. ವರದಿ ವಾಚಿಸಿದರು. ಲತಾ ಕಡ್ಡಿ ನಿರೂಪಿಸಿದರು. ಟಿ.ಬಿ.ದಂಡಿನ, ಮಮತಾ ಹಣಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>