‘17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ, 2019ರಲ್ಲಿ ನಿವೃತ್ತನಾಗಿದ್ದೇನೆ. ಹುಟ್ಟೂರಾದ ಬಾಲೇಹೊಸೂರಿನಲ್ಲಿ ಸ್ವಂತ ಮನೆ ಇಲ್ಲದ ಕಾರಣ ಈ ಹಿಂದೆ ಲಕ್ಷ್ಮೇಶ್ವರದಲ್ಲಿ ಖರೀದಿಸಿದ ನಿವೇಶನದಲ್ಲಿ ಮನೆ ಕಟ್ಟಲು ಆರಂಭಿಸಿದ್ದೆ. ಆದರೆ, ಕೆಲವರು ದುರದ್ದೇಶದಿಂದ ಕಟ್ಟಡ ಕಾಮಗಾರಿ ನಡೆಸಲು ಅಡ್ಡಿಪಡಿಸುತ್ತಿದ್ದಾರೆ’ ಎಂದು ಅವರು ದೂರಿದ್ದಾರೆ.