<p>ಗದಗ: ನಗರದ ಎಸ್ಪಿ ಕಚೇರಿಯಿಂದ ಎಪಿಎಂಸಿ ಮುಖ್ಯ ರಸ್ತೆವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಭೂಮಿಪೂಜೆ ನೆರವೇರಿಸಿದರು.</p>.<p>ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿರುವ ಹೂವು, ಹಣ್ಣು, ತರಕಾರಿ ಮಾರುಕಟ್ಟೆಗೆ ನಿತ್ಯ ನೂರಾರು ಮಂದಿ ರೈತರು ಬರುತ್ತಾರೆ. ಆದರೆ, ಗದಗ ಹೊಸ್ ಬಸ್ ನಿಲ್ದಾಣ, ಎಸ್ಪಿ ಕಚೇರಿ ಮುಂಭಾಗದಿಂದ ಎಪಿಎಂಸಿ ದಕ್ಷಿಣ ಭಾಗದಲ್ಲಿರುವ ಗೇಟ್ವರೆಗೆ ಹಾದು ಹೋಗಿರುವ ರಸ್ತೆ ತೀವ್ರ ಹದಗೆಟ್ಟಿತ್ತು.</p>.<p>ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಆಗಸ್ಟ್ 31ರಂದು ‘ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹ’ ವರದಿ ಪ್ರಕಟಗೊಂಡಿತ್ತು.</p>.<p>‘ಈ ದಾರಿಯಲ್ಲಿ ಶಾಲಾ ಮಕ್ಕಳು, ವೃದ್ಧರು ಸಾವಿರಾರು ಸಂಖ್ಯೆಯಲ್ಲಿ ಅಡ್ಡಾಡುತ್ತಾರೆ. ಜಿಲ್ಲಾಡಳಿತ, ಗದಗ– ಬೆಟಗೇರಿ ನಗರಸಭೆ ಅಧಿಕಾರಿಗಳು ಶೀಘ್ರ ಗಮನಹರಿಸಿ ರಸ್ತೆ ನಿರ್ಮಾಣ ಮಾಡಬೇಕು’ ಎಂದು ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸುರೇಶ ವಿ. ಕುಂಬಾರ ಆಗ್ರಹಿಸಿದ್ದರು.</p>.<p>ವರದಿಗೆ ಸ್ಪಂದಿಸಿ, ರಸ್ತೆ ನಿರ್ಮಾಣಕ್ಕೆ ಕ್ರಮವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರಿಗೆ ಸುರೇಶ ವಿ.ಕುಂಬಾರ ಅವರು ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ, ಗಿಡ ಕೊಟ್ಟು ಅಭಿನಂದಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ,ಬಿ ಬಿ ಅಸೂಟಿ,ಎಸ್ ಎನ್ ಬಳ್ಳಾರಿ, ಸಿದ್ದು ಪಾಟೀಲ, ಅಶೋಕ ಮಂದಾಲಿ ಇದ್ದರು.</p>.<p>Highlights - </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ನಗರದ ಎಸ್ಪಿ ಕಚೇರಿಯಿಂದ ಎಪಿಎಂಸಿ ಮುಖ್ಯ ರಸ್ತೆವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಭೂಮಿಪೂಜೆ ನೆರವೇರಿಸಿದರು.</p>.<p>ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿರುವ ಹೂವು, ಹಣ್ಣು, ತರಕಾರಿ ಮಾರುಕಟ್ಟೆಗೆ ನಿತ್ಯ ನೂರಾರು ಮಂದಿ ರೈತರು ಬರುತ್ತಾರೆ. ಆದರೆ, ಗದಗ ಹೊಸ್ ಬಸ್ ನಿಲ್ದಾಣ, ಎಸ್ಪಿ ಕಚೇರಿ ಮುಂಭಾಗದಿಂದ ಎಪಿಎಂಸಿ ದಕ್ಷಿಣ ಭಾಗದಲ್ಲಿರುವ ಗೇಟ್ವರೆಗೆ ಹಾದು ಹೋಗಿರುವ ರಸ್ತೆ ತೀವ್ರ ಹದಗೆಟ್ಟಿತ್ತು.</p>.<p>ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಆಗಸ್ಟ್ 31ರಂದು ‘ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹ’ ವರದಿ ಪ್ರಕಟಗೊಂಡಿತ್ತು.</p>.<p>‘ಈ ದಾರಿಯಲ್ಲಿ ಶಾಲಾ ಮಕ್ಕಳು, ವೃದ್ಧರು ಸಾವಿರಾರು ಸಂಖ್ಯೆಯಲ್ಲಿ ಅಡ್ಡಾಡುತ್ತಾರೆ. ಜಿಲ್ಲಾಡಳಿತ, ಗದಗ– ಬೆಟಗೇರಿ ನಗರಸಭೆ ಅಧಿಕಾರಿಗಳು ಶೀಘ್ರ ಗಮನಹರಿಸಿ ರಸ್ತೆ ನಿರ್ಮಾಣ ಮಾಡಬೇಕು’ ಎಂದು ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸುರೇಶ ವಿ. ಕುಂಬಾರ ಆಗ್ರಹಿಸಿದ್ದರು.</p>.<p>ವರದಿಗೆ ಸ್ಪಂದಿಸಿ, ರಸ್ತೆ ನಿರ್ಮಾಣಕ್ಕೆ ಕ್ರಮವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರಿಗೆ ಸುರೇಶ ವಿ.ಕುಂಬಾರ ಅವರು ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ, ಗಿಡ ಕೊಟ್ಟು ಅಭಿನಂದಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ,ಬಿ ಬಿ ಅಸೂಟಿ,ಎಸ್ ಎನ್ ಬಳ್ಳಾರಿ, ಸಿದ್ದು ಪಾಟೀಲ, ಅಶೋಕ ಮಂದಾಲಿ ಇದ್ದರು.</p>.<p>Highlights - </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>