ಸವಡಿ–ರೋಣ ರಸ್ತೆ ಪಕ್ಕದಲ್ಲಿರುವ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹೂಳೆತ್ತುವ ಕಾಮಗಾರಿ ನಡೆಯುತ್ತಿತ್ತು. ಮಲ್ಲವ್ವ ಈ ಕೆಲಸದಲ್ಲಿ ತೊಡಗಿದ್ದರು. ಮಧ್ಯಾಹ್ನದ ವೇಳೆಗೆ ಬಿಸಿಲಿನ ಝಳಕ್ಕೆ ಸುಸ್ತಾದ ಅವರು ಕುಸಿದು ಬಿದ್ದರು. ತಕ್ಷಣ ಸಹ ಕೆಲಸಗಾರರು ಅವರಿಗೆ ನೀರು ಕುಡಿಸಿ, ಗ್ರಾಮದ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋದರು. ಆದರೆ, ಆಸ್ಪತ್ರೆಗೆ ತರುವ ಮಾರ್ಗ ಮಧ್ಯದಲ್ಲಿಯೇ ಅವರು ಮೃತಪಟ್ಟಿದ್ದರು.