<p><strong>ರೋಣ: </strong>ಸಮೀಪದ ಸವಡಿ ಗ್ರಾಮದಲ್ಲಿ ಸೋಮವಾರ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾಗ, ಮಹಿಳೆಯೊಬ್ಬರು ಬಿಸಿಲಿನ ತೀವ್ರ ತಾಪದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.</p>.<p>ಸವಡಿ ಗ್ರಾಮದ ನಿವಾಸಿ ಮಲ್ಲವ್ವ ಶರಣಪ್ಪ ಪವಾಡಶೆಟ್ಟಿ (49) ಮೃತ ಮಹಿಳೆ.</p>.<p>ಸವಡಿ–ರೋಣ ರಸ್ತೆ ಪಕ್ಕದಲ್ಲಿರುವ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹೂಳೆತ್ತುವ ಕಾಮಗಾರಿ ನಡೆಯುತ್ತಿತ್ತು. ಮಲ್ಲವ್ವ ಈ ಕೆಲಸದಲ್ಲಿ ತೊಡಗಿದ್ದರು. ಮಧ್ಯಾಹ್ನದ ವೇಳೆಗೆ ಬಿಸಿಲಿನ ಝಳಕ್ಕೆ ಸುಸ್ತಾದ ಅವರು ಕುಸಿದು ಬಿದ್ದರು. ತಕ್ಷಣ ಸಹ ಕೆಲಸಗಾರರು ಅವರಿಗೆ ನೀರು ಕುಡಿಸಿ, ಗ್ರಾಮದ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋದರು. ಆದರೆ, ಆಸ್ಪತ್ರೆಗೆ ತರುವ ಮಾರ್ಗ ಮಧ್ಯದಲ್ಲಿಯೇ ಅವರು ಮೃತಪಟ್ಟಿದ್ದರು.</p>.<p>‘ಉದ್ಯೊಗ ಖಾತ್ರಿ ಯೋಜನೆಯಡಿ ನನ್ನ ತಾಯಿ ಕೆಲಸ ಮಾಡುತ್ತಿದ್ದರು. ಬಿಸಿಲಿನ ತಾಪ ಮತ್ತು ಉಸಿರಾಟದ ತೊಂದರೆಯಿಂದ ಅವರು ಮೃತಪಟ್ಟಿದ್ದಾರೆ ಎಂದು ಅವರನ್ನು ಪರೀಕ್ಷಿಸಿದ ವೈದ್ಯಾಧಿಕಾರಿ ತಿಳಿಸಿದ್ದಾರೆ’ ಎಂದು ಮೃತ ಮಲ್ಲವ್ವ ಅವರ ಪುತ್ರ ಮಹಾದೇವಪ್ಪ ಪವಾಡಶೆಟ್ಟಿ ತಿಳಿಸಿದರು.</p>.<p>ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.</p>.<p>ಪ್ರತಿಕ್ರಿಯೆಗಾಗಿ ಸಂಬಂಧಿಸಿದ ಗ್ರಾಮ ಪಂಚಾಯ್ತಿ ಪಿಡಿಇ, ತಾಲ್ಲೂಕು ಪಂಚಾಯ್ತಿ ಇಒ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಮತ್ತು ಸಿಇಒ ಅವರನ್ನು ಸಂಪರ್ಕಿಸಲಾಯಿತಾದರೂ, ಯಾರೂ ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ: </strong>ಸಮೀಪದ ಸವಡಿ ಗ್ರಾಮದಲ್ಲಿ ಸೋಮವಾರ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾಗ, ಮಹಿಳೆಯೊಬ್ಬರು ಬಿಸಿಲಿನ ತೀವ್ರ ತಾಪದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.</p>.<p>ಸವಡಿ ಗ್ರಾಮದ ನಿವಾಸಿ ಮಲ್ಲವ್ವ ಶರಣಪ್ಪ ಪವಾಡಶೆಟ್ಟಿ (49) ಮೃತ ಮಹಿಳೆ.</p>.<p>ಸವಡಿ–ರೋಣ ರಸ್ತೆ ಪಕ್ಕದಲ್ಲಿರುವ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹೂಳೆತ್ತುವ ಕಾಮಗಾರಿ ನಡೆಯುತ್ತಿತ್ತು. ಮಲ್ಲವ್ವ ಈ ಕೆಲಸದಲ್ಲಿ ತೊಡಗಿದ್ದರು. ಮಧ್ಯಾಹ್ನದ ವೇಳೆಗೆ ಬಿಸಿಲಿನ ಝಳಕ್ಕೆ ಸುಸ್ತಾದ ಅವರು ಕುಸಿದು ಬಿದ್ದರು. ತಕ್ಷಣ ಸಹ ಕೆಲಸಗಾರರು ಅವರಿಗೆ ನೀರು ಕುಡಿಸಿ, ಗ್ರಾಮದ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋದರು. ಆದರೆ, ಆಸ್ಪತ್ರೆಗೆ ತರುವ ಮಾರ್ಗ ಮಧ್ಯದಲ್ಲಿಯೇ ಅವರು ಮೃತಪಟ್ಟಿದ್ದರು.</p>.<p>‘ಉದ್ಯೊಗ ಖಾತ್ರಿ ಯೋಜನೆಯಡಿ ನನ್ನ ತಾಯಿ ಕೆಲಸ ಮಾಡುತ್ತಿದ್ದರು. ಬಿಸಿಲಿನ ತಾಪ ಮತ್ತು ಉಸಿರಾಟದ ತೊಂದರೆಯಿಂದ ಅವರು ಮೃತಪಟ್ಟಿದ್ದಾರೆ ಎಂದು ಅವರನ್ನು ಪರೀಕ್ಷಿಸಿದ ವೈದ್ಯಾಧಿಕಾರಿ ತಿಳಿಸಿದ್ದಾರೆ’ ಎಂದು ಮೃತ ಮಲ್ಲವ್ವ ಅವರ ಪುತ್ರ ಮಹಾದೇವಪ್ಪ ಪವಾಡಶೆಟ್ಟಿ ತಿಳಿಸಿದರು.</p>.<p>ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.</p>.<p>ಪ್ರತಿಕ್ರಿಯೆಗಾಗಿ ಸಂಬಂಧಿಸಿದ ಗ್ರಾಮ ಪಂಚಾಯ್ತಿ ಪಿಡಿಇ, ತಾಲ್ಲೂಕು ಪಂಚಾಯ್ತಿ ಇಒ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಮತ್ತು ಸಿಇಒ ಅವರನ್ನು ಸಂಪರ್ಕಿಸಲಾಯಿತಾದರೂ, ಯಾರೂ ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>