<p><strong>ರೋಣ</strong>: ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ ಹೆಸರು ಬಿತ್ತನೆ ಕಾರ್ಯ ಚುರುಕುಗೊಂಡಿದ್ದು ಮಾರಾಟಗಾರರು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ರೋಣ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸೋಮವಾರ ರೈತರು ಮನವಿ ಸಲ್ಲಿಸಿದರು.</p>.<p>ಡೀಸೆಲ್ ದರ ಏರಿಕೆ, ಕಳಪೆ ಗುಣಮಟ್ಟದ ಹೆಸರು ಬಿತ್ತನೆ ಬೀಜ, ಕೃಷಿ ಯಂತ್ರೋಪಕರಣಗಳ ಬಾಡಿಗೆ ಹೆಚ್ಚಳ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಒಳಗಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ. 2 ಚೀಲ ಗೊಬ್ಬರಕ್ಕೆ ಲಿಂಕ್ ಗೊಬ್ಬರವಾಗಿ ನ್ಯಾನೋ ಯೂರಿಯಾವನ್ನು ಬೇಡವೆಂದರೂ ನೀಡುತ್ತಿದ್ದಾರೆ. ಗೊಬ್ಬರ ಖರೀದಿಯ ರಸೀದಿ ಕೊಡದೆ ಮೋಸ ಮಾಡುತ್ತಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<p>ಎಸ್.ಜಿ.ಕರಲಿಂಗಣ್ಣವರ, ಎಂ.ಬಿ.ಬ್ಯಾಳಿ, ಕೆ.ಸಿ.ಲಿಂಗನಗೌಡ್ರ, ಎಂ.ಎನ್.ಕಳಸಣ್ಣವರ, ಎಂ.ಎ.ಗಾಣಿಗೇರ, ಶಿವನಗೌಡ ಹಾವನಗೌಡ್ರ, ಎನ್.ಎಂ.ದೇಶಣ್ಣವರ, ಮಲ್ಲಪ್ಪ ಬ್ಯಾಳಿ, ಬಸಪ್ಪ ಚವಡಿ, ಎಸ್.ಎಸ್.ಚನ್ನಪ್ಪಗೌಡ್ರ, ಬಿ.ಎಸ್.ಗದಗೀನ, ಎಸ್.ಎಸ್.ಮಾಮನಿ, ಆರ್.ಪಿ.ರೊಟ್ಟಿ ಸೇರಿದಂತೆ ಅನೇಕ ರೈತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-23-1163623689</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ</strong>: ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ ಹೆಸರು ಬಿತ್ತನೆ ಕಾರ್ಯ ಚುರುಕುಗೊಂಡಿದ್ದು ಮಾರಾಟಗಾರರು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ರೋಣ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸೋಮವಾರ ರೈತರು ಮನವಿ ಸಲ್ಲಿಸಿದರು.</p>.<p>ಡೀಸೆಲ್ ದರ ಏರಿಕೆ, ಕಳಪೆ ಗುಣಮಟ್ಟದ ಹೆಸರು ಬಿತ್ತನೆ ಬೀಜ, ಕೃಷಿ ಯಂತ್ರೋಪಕರಣಗಳ ಬಾಡಿಗೆ ಹೆಚ್ಚಳ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಒಳಗಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ. 2 ಚೀಲ ಗೊಬ್ಬರಕ್ಕೆ ಲಿಂಕ್ ಗೊಬ್ಬರವಾಗಿ ನ್ಯಾನೋ ಯೂರಿಯಾವನ್ನು ಬೇಡವೆಂದರೂ ನೀಡುತ್ತಿದ್ದಾರೆ. ಗೊಬ್ಬರ ಖರೀದಿಯ ರಸೀದಿ ಕೊಡದೆ ಮೋಸ ಮಾಡುತ್ತಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.</p>.<p>ಎಸ್.ಜಿ.ಕರಲಿಂಗಣ್ಣವರ, ಎಂ.ಬಿ.ಬ್ಯಾಳಿ, ಕೆ.ಸಿ.ಲಿಂಗನಗೌಡ್ರ, ಎಂ.ಎನ್.ಕಳಸಣ್ಣವರ, ಎಂ.ಎ.ಗಾಣಿಗೇರ, ಶಿವನಗೌಡ ಹಾವನಗೌಡ್ರ, ಎನ್.ಎಂ.ದೇಶಣ್ಣವರ, ಮಲ್ಲಪ್ಪ ಬ್ಯಾಳಿ, ಬಸಪ್ಪ ಚವಡಿ, ಎಸ್.ಎಸ್.ಚನ್ನಪ್ಪಗೌಡ್ರ, ಬಿ.ಎಸ್.ಗದಗೀನ, ಎಸ್.ಎಸ್.ಮಾಮನಿ, ಆರ್.ಪಿ.ರೊಟ್ಟಿ ಸೇರಿದಂತೆ ಅನೇಕ ರೈತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-23-1163623689</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>