<p><strong>ರೋಣ</strong>: ‘ದಿನನಿತ್ಯ ಪಟ್ಟಣವನ್ನು ಶುಚಿಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರು ಅಪರಿಮಿತ ಸೇವೆ ನೀಡುತ್ತಿರುವ ಕಾರ್ಯ ಶ್ಲಾಘನೀಯ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.<br><br>ಪಟ್ಟಣದ ಪುರಸಭೆಯ ಆವರಣದಲ್ಲಿ ಮಂಗಳವಾರ ನಡೆದ ಪೌರಕಾರ್ಮಿಕರ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು, ‘ಪಟ್ಟಣ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಯೋಜಿಸಲಾಗಿದ್ದು, ಒಳಚರಂಡಿ ನಿರ್ಮಾಣ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಒಳಚರಂಡಿ ನಿರ್ಮಿಸುವ ಮೂಲಕ ಪೌರ ಕಾರ್ಮಿಕರ ಹೊರೆ ತಪ್ಪಿಸಲಾಗುವುದು’ ಎಂದರು.</p>.<p>ಪೌರ ಕಾರ್ಮಿಕರ ಮಕ್ಕಳಿಗೂ ಉತ್ತಮ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<p>ಪುರಸಭೆ ಉಪಾಧ್ಯಕ್ಷ ಹನುಮಂತ ತಳ್ಳಿಕೇರಿ ಮಾತನಾಡಿ, ‘ಪೌರಕಾರ್ಮಿಕರಿಗೆ ಆರೋಗ್ಯ ವಿಮೆ ನೀಡಲಾಗಿದ್ದು, ಮೊತ್ತವನ್ನು ಸರಕಾರ ಹೆಚ್ಚಿಸಬೇಕು. ದಿನಗೂಲಿ ಹಾಗೂ ತಾತ್ಕಾಲಿಕ ಸೇವೆಯಲ್ಲಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಪೌರ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸರ್ಕಾರಗಳು ಮತ್ತಷ್ಟು ಯೋಜನೆ ರೂಪಿಸಬೇಕು’ ಎಂದರು.</p>.<p>ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಪುರಸಭೆ ಅಧ್ಯಕ್ಷೆ ಬಸಮ್ಮ ಕೊಪ್ಪದ, ರೋಣ ತಹಶೀಲ್ದಾರ್ ನಾಗರಾಜ.ಕೆ, ಸದಸ್ಯರಾದ ಮುತ್ತಣ್ಣ ಗಡಗಿ, ಮಲ್ಲಯ್ಯ ಮಹಾಪುರುಷಮಠ, ಸಂತೋಷ ಕಡಿವಾಲ, ಮೌನೇಶ ಹಾದಿಮನಿ, ಮುಖಂಡರಾದ ಯೂಸುಫ್ ಇಟಗಿ, ಶಫೀಕ್ ಮೂಗನೂರ, ಸಂಗಪ್ಪ ಜಿಡ್ಡಿಬಾಗಿಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ</strong>: ‘ದಿನನಿತ್ಯ ಪಟ್ಟಣವನ್ನು ಶುಚಿಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರು ಅಪರಿಮಿತ ಸೇವೆ ನೀಡುತ್ತಿರುವ ಕಾರ್ಯ ಶ್ಲಾಘನೀಯ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.<br><br>ಪಟ್ಟಣದ ಪುರಸಭೆಯ ಆವರಣದಲ್ಲಿ ಮಂಗಳವಾರ ನಡೆದ ಪೌರಕಾರ್ಮಿಕರ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು, ‘ಪಟ್ಟಣ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಯೋಜಿಸಲಾಗಿದ್ದು, ಒಳಚರಂಡಿ ನಿರ್ಮಾಣ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಒಳಚರಂಡಿ ನಿರ್ಮಿಸುವ ಮೂಲಕ ಪೌರ ಕಾರ್ಮಿಕರ ಹೊರೆ ತಪ್ಪಿಸಲಾಗುವುದು’ ಎಂದರು.</p>.<p>ಪೌರ ಕಾರ್ಮಿಕರ ಮಕ್ಕಳಿಗೂ ಉತ್ತಮ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<p>ಪುರಸಭೆ ಉಪಾಧ್ಯಕ್ಷ ಹನುಮಂತ ತಳ್ಳಿಕೇರಿ ಮಾತನಾಡಿ, ‘ಪೌರಕಾರ್ಮಿಕರಿಗೆ ಆರೋಗ್ಯ ವಿಮೆ ನೀಡಲಾಗಿದ್ದು, ಮೊತ್ತವನ್ನು ಸರಕಾರ ಹೆಚ್ಚಿಸಬೇಕು. ದಿನಗೂಲಿ ಹಾಗೂ ತಾತ್ಕಾಲಿಕ ಸೇವೆಯಲ್ಲಿರುವ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಪೌರ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸರ್ಕಾರಗಳು ಮತ್ತಷ್ಟು ಯೋಜನೆ ರೂಪಿಸಬೇಕು’ ಎಂದರು.</p>.<p>ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಪುರಸಭೆ ಅಧ್ಯಕ್ಷೆ ಬಸಮ್ಮ ಕೊಪ್ಪದ, ರೋಣ ತಹಶೀಲ್ದಾರ್ ನಾಗರಾಜ.ಕೆ, ಸದಸ್ಯರಾದ ಮುತ್ತಣ್ಣ ಗಡಗಿ, ಮಲ್ಲಯ್ಯ ಮಹಾಪುರುಷಮಠ, ಸಂತೋಷ ಕಡಿವಾಲ, ಮೌನೇಶ ಹಾದಿಮನಿ, ಮುಖಂಡರಾದ ಯೂಸುಫ್ ಇಟಗಿ, ಶಫೀಕ್ ಮೂಗನೂರ, ಸಂಗಪ್ಪ ಜಿಡ್ಡಿಬಾಗಿಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>