<p><strong>ರೋಣ:</strong> ‘ವೀರಶೈವ ಧರ್ಮ ವಿಶಾಲ ಮನೋಭಾವ ಹೊಂದಿದ್ದು, ಸಮಗ್ರತೆ, ಮಾನವಕುಲದ ಹಿತಕ್ಕೆ ಶ್ರಮಿಸಿದ ಶ್ರೇಯಸ್ಸು ಪಂಚಪೀಠದ ಪೂರ್ವಾಚಾರ್ಯರು ಹಾಗೂ ಶರಣರಿಗೆ ಸಲ್ಲುತ್ತದೆ’ ಎಂದು ಬಾಳೆಹೊನ್ನೂರ ರಂಭಾಪುರಿ ವೀರ ಸೋಮೇಶ್ವರ ಸ್ವಾಮೀಜಿ ಅಭಿಪ್ರಾಯ ಪಟ್ಟರು.</p>.<p>ತಾಲ್ಲೂಕಿನ ಹಿರೇಹಾಳ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹಿರೇಮಠದ ಲೋಕಾರ್ಪಣೆ, ಜಗದ್ಗುರು ರೇಣುಕಾಚಾರ್ಯರ ಮೂರ್ತಿ ಪ್ರತಿಷ್ಠಾಪನೆ, ರಂಭಾಪೂರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಜಗದ್ಗುರು ರೇಣುಕಾಚಾರ್ಯರಿಂದ ಸಂಸ್ಥಾಪಿಸಲ್ಪಟ್ಟ ವೀರಶೈವ ಧರ್ಮ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ. ಜ್ಞಾನದೊಂದಿಗೆ ಕಾಯಕದ ಪರಿಕಲ್ಪನೆ ನೀಡಿದೆ. ಪ್ರಾಚಿನ ಕಾಲದಿಂದಲೂ ಪಂಚಪೀಠಗಳು ನಾಡಿಗೆ ಅಪಾರ ಕೊಡುಗೆ ನೀಡಿವೆ’ ಎಂದರು.</p>.<p>ಸಿದ್ದಾಂತ ಶಿಖಾಮಣಿ ಗ್ರಂಥದಲ್ಲಿ ಜೀವನ ವಿಕಾಸದ ಶಿವಾದ್ವೈತ ಸಿದ್ದಾಂತ ಬೋಧಿಸಲಾಗಿದ್ದು, ಜೀವನದಲ್ಲಿ ಆದರ್ಶ ವ್ಯಕ್ತಿಯಾಗಿ ಬಾಳಲು ಗುರುವಿನ ಭೋದನೆ, ಉತ್ತಮ ಪರಿಸರ, ಧರ್ಮದ ಆದರ್ಶ ಪರಿಪಾಲನೆಯಿಂದ ಜೀವನ ಉಜ್ವಲಗೊಳ್ಳುತ್ತದೆ’ ಎಂದು ಹೇಳಿದರು.</p>.<p>ಈ ವೇಳೆ ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಅಡ್ಡ ಪಲ್ಲಕ್ಕಿ ಮಹೊತ್ಸವ ಅದ್ದೂರಿಯಾಗಿ ನಡೆಯಿತು.</p>.<p>ಬೆನಹಾಳ ಸದಾಶಿವ ಶಿವಾಚಾರ್ಯರು, ಚಳಗೇರಿಯ ವೀರಸಂಗಮೇಶ್ವರ ಶಿವಾಚಾರ್ಯರು, ಗದಗ ವೀರೇಶ್ವರ ಆಶ್ರಮದ ಕಲ್ಲಯ್ಯಜ್ಜನವರು, ಲಿಂಗಸುಗೂರ ಮಾತಾ ನಂದೀಕೇಶ್ವರಿ ಅಮ್ಮನವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ:</strong> ‘ವೀರಶೈವ ಧರ್ಮ ವಿಶಾಲ ಮನೋಭಾವ ಹೊಂದಿದ್ದು, ಸಮಗ್ರತೆ, ಮಾನವಕುಲದ ಹಿತಕ್ಕೆ ಶ್ರಮಿಸಿದ ಶ್ರೇಯಸ್ಸು ಪಂಚಪೀಠದ ಪೂರ್ವಾಚಾರ್ಯರು ಹಾಗೂ ಶರಣರಿಗೆ ಸಲ್ಲುತ್ತದೆ’ ಎಂದು ಬಾಳೆಹೊನ್ನೂರ ರಂಭಾಪುರಿ ವೀರ ಸೋಮೇಶ್ವರ ಸ್ವಾಮೀಜಿ ಅಭಿಪ್ರಾಯ ಪಟ್ಟರು.</p>.<p>ತಾಲ್ಲೂಕಿನ ಹಿರೇಹಾಳ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹಿರೇಮಠದ ಲೋಕಾರ್ಪಣೆ, ಜಗದ್ಗುರು ರೇಣುಕಾಚಾರ್ಯರ ಮೂರ್ತಿ ಪ್ರತಿಷ್ಠಾಪನೆ, ರಂಭಾಪೂರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಜಗದ್ಗುರು ರೇಣುಕಾಚಾರ್ಯರಿಂದ ಸಂಸ್ಥಾಪಿಸಲ್ಪಟ್ಟ ವೀರಶೈವ ಧರ್ಮ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ. ಜ್ಞಾನದೊಂದಿಗೆ ಕಾಯಕದ ಪರಿಕಲ್ಪನೆ ನೀಡಿದೆ. ಪ್ರಾಚಿನ ಕಾಲದಿಂದಲೂ ಪಂಚಪೀಠಗಳು ನಾಡಿಗೆ ಅಪಾರ ಕೊಡುಗೆ ನೀಡಿವೆ’ ಎಂದರು.</p>.<p>ಸಿದ್ದಾಂತ ಶಿಖಾಮಣಿ ಗ್ರಂಥದಲ್ಲಿ ಜೀವನ ವಿಕಾಸದ ಶಿವಾದ್ವೈತ ಸಿದ್ದಾಂತ ಬೋಧಿಸಲಾಗಿದ್ದು, ಜೀವನದಲ್ಲಿ ಆದರ್ಶ ವ್ಯಕ್ತಿಯಾಗಿ ಬಾಳಲು ಗುರುವಿನ ಭೋದನೆ, ಉತ್ತಮ ಪರಿಸರ, ಧರ್ಮದ ಆದರ್ಶ ಪರಿಪಾಲನೆಯಿಂದ ಜೀವನ ಉಜ್ವಲಗೊಳ್ಳುತ್ತದೆ’ ಎಂದು ಹೇಳಿದರು.</p>.<p>ಈ ವೇಳೆ ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಅಡ್ಡ ಪಲ್ಲಕ್ಕಿ ಮಹೊತ್ಸವ ಅದ್ದೂರಿಯಾಗಿ ನಡೆಯಿತು.</p>.<p>ಬೆನಹಾಳ ಸದಾಶಿವ ಶಿವಾಚಾರ್ಯರು, ಚಳಗೇರಿಯ ವೀರಸಂಗಮೇಶ್ವರ ಶಿವಾಚಾರ್ಯರು, ಗದಗ ವೀರೇಶ್ವರ ಆಶ್ರಮದ ಕಲ್ಲಯ್ಯಜ್ಜನವರು, ಲಿಂಗಸುಗೂರ ಮಾತಾ ನಂದೀಕೇಶ್ವರಿ ಅಮ್ಮನವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>