<p><strong>ರೋಣ</strong>: ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಗದಗ–ಬಾದಾಮಿ ಪ್ರಮುಖ ರಸ್ತೆಯ ಪಕ್ಕದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಪುರಸಭೆ 19ನೇ ವಾರ್ಡ್ ಸದಸ್ಯ ಬಾವಾಸಾಬ್ ಬೆಟಗೇರಿ ಮತ್ತು ಅಂಗಡಿಗಳ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದರು. </p>.<p>ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಚರಂಡಿ ಸಂಪೂರ್ಣ ಹೂಳು ತುಂಬಿದ್ದರಿಂದ ಪುರಸಭೆ ಸಿಬ್ಬಂದಿ ಸ್ವಚ್ಛಗೊಳಿಸಲು ಚರಂಡಿ ಮೇಲ್ಬಾಗದಲ್ಲಿರುವ ಹಲವು ಅಂಗಡಿಗಳನ್ನು ತೆರವುಗೊಳಿಸಲು ಮುಂದಾದರು.</p>.<p>ಈ ವೇಳೆ ಮಧ್ಯೆ ಪ್ರವೇಶಿಸಿದ ಈ ವೇಳೆ ಮಧ್ಯೆ ಪ್ರವೇಶಿಸಿದ ಪುರಸಭೆಯ 19ನೇ ವಾರ್ಡ್ ಸದಸ್ಯ ಬಾವಾಸಾಬ್ ಬೆಟಗೇರಿ ಅವರು, ಅಂಗಡಿ ಮಾಲೀಕರ ಹಾಗೂ ವಾರ್ಡ್ ಸದಸ್ಯರ ಗಮನಕ್ಕೆ ತರದೆ ಅಂಗಡಿಗಳ ತೆರವಿಗೆ ಸೂಚಿಸಿದವರು ಯಾರು? ಕೂಡಲೇ ತೆರವು ಕಾರ್ಯಾಚರಣೆ ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಕ್ರಿಸಿದ ಸ್ವಚ್ಛತಾ ಸಿಬ್ಬಂದಿ ‘ಅಂಗಡಿ ಮಾಲೀಕರಿಗೆ ತಳ್ಳುಗಾಡಿಯ ಮೂಲಕ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ’ ಎಂದರು.</p>.<p>ಈ ವೇಳೆ ಮಾಲೀಕರು ಮತ್ತು ಸಿಬ್ಬಂದಿ ಮಧ್ಯೆ ಪರಸ್ಪರ ತಳ್ಳಾಟ ನಡೆಯಿತು. ಮಧ್ಯೆ ಪ್ರವೇಶಿಸಿದ ಪುರಸಭೆ ಉಪಾಧ್ಯಕ್ಷ ಹನುಮಂತ ತಳ್ಳಿಕೇರಿ ಮತ್ತು ಸದಸ್ಯ ಬಾವಾಸಾಬ್ ಬೆಟಗೇರಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಅಂಗಡಿ ತೆರವುಗೊಳಿಸಿ ಚರಂಡಿ ಸ್ವಚ್ಛಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ</strong>: ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಗದಗ–ಬಾದಾಮಿ ಪ್ರಮುಖ ರಸ್ತೆಯ ಪಕ್ಕದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಪುರಸಭೆ 19ನೇ ವಾರ್ಡ್ ಸದಸ್ಯ ಬಾವಾಸಾಬ್ ಬೆಟಗೇರಿ ಮತ್ತು ಅಂಗಡಿಗಳ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದರು. </p>.<p>ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಚರಂಡಿ ಸಂಪೂರ್ಣ ಹೂಳು ತುಂಬಿದ್ದರಿಂದ ಪುರಸಭೆ ಸಿಬ್ಬಂದಿ ಸ್ವಚ್ಛಗೊಳಿಸಲು ಚರಂಡಿ ಮೇಲ್ಬಾಗದಲ್ಲಿರುವ ಹಲವು ಅಂಗಡಿಗಳನ್ನು ತೆರವುಗೊಳಿಸಲು ಮುಂದಾದರು.</p>.<p>ಈ ವೇಳೆ ಮಧ್ಯೆ ಪ್ರವೇಶಿಸಿದ ಈ ವೇಳೆ ಮಧ್ಯೆ ಪ್ರವೇಶಿಸಿದ ಪುರಸಭೆಯ 19ನೇ ವಾರ್ಡ್ ಸದಸ್ಯ ಬಾವಾಸಾಬ್ ಬೆಟಗೇರಿ ಅವರು, ಅಂಗಡಿ ಮಾಲೀಕರ ಹಾಗೂ ವಾರ್ಡ್ ಸದಸ್ಯರ ಗಮನಕ್ಕೆ ತರದೆ ಅಂಗಡಿಗಳ ತೆರವಿಗೆ ಸೂಚಿಸಿದವರು ಯಾರು? ಕೂಡಲೇ ತೆರವು ಕಾರ್ಯಾಚರಣೆ ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಕ್ರಿಸಿದ ಸ್ವಚ್ಛತಾ ಸಿಬ್ಬಂದಿ ‘ಅಂಗಡಿ ಮಾಲೀಕರಿಗೆ ತಳ್ಳುಗಾಡಿಯ ಮೂಲಕ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ’ ಎಂದರು.</p>.<p>ಈ ವೇಳೆ ಮಾಲೀಕರು ಮತ್ತು ಸಿಬ್ಬಂದಿ ಮಧ್ಯೆ ಪರಸ್ಪರ ತಳ್ಳಾಟ ನಡೆಯಿತು. ಮಧ್ಯೆ ಪ್ರವೇಶಿಸಿದ ಪುರಸಭೆ ಉಪಾಧ್ಯಕ್ಷ ಹನುಮಂತ ತಳ್ಳಿಕೇರಿ ಮತ್ತು ಸದಸ್ಯ ಬಾವಾಸಾಬ್ ಬೆಟಗೇರಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಅಂಗಡಿ ತೆರವುಗೊಳಿಸಿ ಚರಂಡಿ ಸ್ವಚ್ಛಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>