<p><strong>ಗದಗ</strong>: ‘ಬಸವ ತತ್ವ ಒಪ್ಪದ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ಲಿಂಗಾಯತರಲ್ಲಿಯೇ ಒಡಕು ಮೂಡಿಸುವ ಹುನ್ನಾರ ನಡೆಸಿದ್ದಾರೆ. ಇದಕ್ಕೆ ‘ವಚನ ದರ್ಶನ’ ಕೃತಿ ಒಂದು ನಿರ್ದಶನ’ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಎಂ.ಜಾಮದಾರ ಆರೋಪಿಸಿದರು.</p>.<p>‘ಬಸವ ತತ್ವ ಒಪ್ಪದವರಿಂದ, ಮೂಲ ಆಶಯಕ್ಕೆ ಧಕ್ಕೆ ಬರುವಂತಿರುವ ‘ವಚನ ದರ್ಶನ’ ಬರೆಸುವ ಅಗತ್ಯ ಈಗೇನಿತ್ತು? ಇದು ಚುನಾವಣೆ ಕಾಲವಲ್ಲ, ಚಳವಳಿಯೂ ನಡೆಯುತ್ತಿಲ್ಲ. ಇದೆಲ್ಲವೂ ಲಿಂಗಾಯತರಲ್ಲಿ, ಬಸವನಿಷ್ಠರಲ್ಲಿ ಗೊಂದಲ ಮೂಡಿಸುವ, ಪ್ರಚೋದಿಸುವ ಕೆಲಸ’ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಗದುಗಿನವರೇ ಆದ ಸದಾಶಿವಾನಂದ ಸ್ವಾಮೀಜಿ ‘ವಚನ ದರ್ಶನ’ ಕೃತಿ ಸಂಪಾದಿಸಿದ್ದಾರೆ. ಆದರೆ, ಈ ಕೃತಿ ಶರಣರ ಮೂಲ ಆಶಯಕ್ಕೆ ಧಕ್ಕೆ ತರುವಂತಹದಾಗಿದ್ದು, ಅವರು ಲಿಂಗಾಯತ ತತ್ವದ ಇತಿಹಾಸದ ಬೇರನ್ನು ಅಲುಗಾಡಿಸುವ ಕೆಲಸ ಮಾಡಿದ್ದಾರೆ. ಹಿಂದುತ್ವ ಎಂಬುದು ರಾಷ್ಟ್ರದ ಸಂಕೇತವೇ ಹೊರತು; ಧರ್ಮದ ಸಂಕೇತವಲ್ಲ’ ಎಂದು ಹೇಳಿದರು.</p>.<p>‘ಈ ಪುಸ್ತಕವನ್ನು ಆರ್ಎಸ್ಎಸ್ ಪ್ರಕಾಶನ ಮಾಡಿದ್ದು ಏಕೆ? ಅಷ್ಟೇ ಅಲ್ಲ, ಈ ಪುಸ್ತಕ ಬೆಂಗಳೂರು, ವಿಜಯಪುರ, ಹಾವೇರಿ, ರಾಣೆಬೆನ್ನೂರು, ಕಲಬುರಗಿ, ಬೆಳಗಾವಿ ಸೇರಿ ಒಂಬತ್ತು ಸ್ಥಳಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಾಜ್ಯದವರೇ ಆದ ಹೊಸಬಾಳೆ ಸೇರಿ ನಾಗಪುರದಿಂದ ಮೂವರು ಬಂದಿದ್ದರು’ ಎಂದು ದೂರಿದರು.</p>.<p>‘ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಶಂಕರಾನಂದ ಭಾರತಿ ಸ್ವಾಮೀಜಿ ‘ವಚನಗಳನ್ನು ಯಾರೂ ಬರೆದಿಲ್ಲ, 237 ಶರಣರ ಅಸ್ತಿತ್ವವೇ ಇಲ್ಲ. ವಚನ ಚಳವಳಿ ನಡೆದಿಲ್ಲ, ಕಲ್ಯಾಣ ಕ್ರಾಂತಿ ಆಗಿಲ್ಲ ಎಂಬ ಹೇಳಿಕೆಯಿಂದ ನೋವಾಗಿದ್ದು, ಇದನ್ನು ಮಹಾಸಭಾ ತೀವ್ರವಾಗಿ ಖಂಡಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಬಸವ ತತ್ವ ಒಪ್ಪದ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ಲಿಂಗಾಯತರಲ್ಲಿಯೇ ಒಡಕು ಮೂಡಿಸುವ ಹುನ್ನಾರ ನಡೆಸಿದ್ದಾರೆ. ಇದಕ್ಕೆ ‘ವಚನ ದರ್ಶನ’ ಕೃತಿ ಒಂದು ನಿರ್ದಶನ’ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಎಂ.ಜಾಮದಾರ ಆರೋಪಿಸಿದರು.</p>.<p>‘ಬಸವ ತತ್ವ ಒಪ್ಪದವರಿಂದ, ಮೂಲ ಆಶಯಕ್ಕೆ ಧಕ್ಕೆ ಬರುವಂತಿರುವ ‘ವಚನ ದರ್ಶನ’ ಬರೆಸುವ ಅಗತ್ಯ ಈಗೇನಿತ್ತು? ಇದು ಚುನಾವಣೆ ಕಾಲವಲ್ಲ, ಚಳವಳಿಯೂ ನಡೆಯುತ್ತಿಲ್ಲ. ಇದೆಲ್ಲವೂ ಲಿಂಗಾಯತರಲ್ಲಿ, ಬಸವನಿಷ್ಠರಲ್ಲಿ ಗೊಂದಲ ಮೂಡಿಸುವ, ಪ್ರಚೋದಿಸುವ ಕೆಲಸ’ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಗದುಗಿನವರೇ ಆದ ಸದಾಶಿವಾನಂದ ಸ್ವಾಮೀಜಿ ‘ವಚನ ದರ್ಶನ’ ಕೃತಿ ಸಂಪಾದಿಸಿದ್ದಾರೆ. ಆದರೆ, ಈ ಕೃತಿ ಶರಣರ ಮೂಲ ಆಶಯಕ್ಕೆ ಧಕ್ಕೆ ತರುವಂತಹದಾಗಿದ್ದು, ಅವರು ಲಿಂಗಾಯತ ತತ್ವದ ಇತಿಹಾಸದ ಬೇರನ್ನು ಅಲುಗಾಡಿಸುವ ಕೆಲಸ ಮಾಡಿದ್ದಾರೆ. ಹಿಂದುತ್ವ ಎಂಬುದು ರಾಷ್ಟ್ರದ ಸಂಕೇತವೇ ಹೊರತು; ಧರ್ಮದ ಸಂಕೇತವಲ್ಲ’ ಎಂದು ಹೇಳಿದರು.</p>.<p>‘ಈ ಪುಸ್ತಕವನ್ನು ಆರ್ಎಸ್ಎಸ್ ಪ್ರಕಾಶನ ಮಾಡಿದ್ದು ಏಕೆ? ಅಷ್ಟೇ ಅಲ್ಲ, ಈ ಪುಸ್ತಕ ಬೆಂಗಳೂರು, ವಿಜಯಪುರ, ಹಾವೇರಿ, ರಾಣೆಬೆನ್ನೂರು, ಕಲಬುರಗಿ, ಬೆಳಗಾವಿ ಸೇರಿ ಒಂಬತ್ತು ಸ್ಥಳಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಾಜ್ಯದವರೇ ಆದ ಹೊಸಬಾಳೆ ಸೇರಿ ನಾಗಪುರದಿಂದ ಮೂವರು ಬಂದಿದ್ದರು’ ಎಂದು ದೂರಿದರು.</p>.<p>‘ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಶಂಕರಾನಂದ ಭಾರತಿ ಸ್ವಾಮೀಜಿ ‘ವಚನಗಳನ್ನು ಯಾರೂ ಬರೆದಿಲ್ಲ, 237 ಶರಣರ ಅಸ್ತಿತ್ವವೇ ಇಲ್ಲ. ವಚನ ಚಳವಳಿ ನಡೆದಿಲ್ಲ, ಕಲ್ಯಾಣ ಕ್ರಾಂತಿ ಆಗಿಲ್ಲ ಎಂಬ ಹೇಳಿಕೆಯಿಂದ ನೋವಾಗಿದ್ದು, ಇದನ್ನು ಮಹಾಸಭಾ ತೀವ್ರವಾಗಿ ಖಂಡಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>