<p><strong>ಗದಗ:</strong> ಗ್ರಾಮೀಣ ಸಬಲೀಕರಣ ಮತ್ತು ಶಾಶ್ವತ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಉದ್ದೇಶದಿಂದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯ ಹಾಗೂ ಸರ್ವೋದಯ ಇಂಟಿಗ್ರೇಟೆಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿ ನಡುವೆ ಪರಸ್ಪರ ಸಹಯೋಗ ಒಪ್ಪಂದಕ್ಕೆ (ಎಂಒಯು) ಸಹಿ ಮಾಡಲಾಯಿತು.</p>.<p>ಗ್ರಾಮೀಣಾಭಿವೃದ್ಧಿ ವಿ.ವಿಯ ಪ್ರಭಾರ ಕುಲಪತಿ ಪ್ರೊ.ಸುರೇಶ ವಿ.ನಾಡಗೌಡರ ಮಾತನಾಡಿ, ‘ವಿದ್ಯಾರ್ಥಿಗಳು ಗ್ರಾಮೀಣ ಭಾಗದ ವಾಸ್ತವ್ಯ ಅರಿತು, ಸಮಾಜಮುಖಿ ಸಂಶೋಧನೆ ಮತ್ತು ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಈ ಸಹಯೋಗ ಪ್ರೇರಕವಾಗಲಿದೆ’ ಎಂದು ಹೇಳಿದರು.</p>.<p>‘ಶೈಕ್ಷಣಿಕ, ತರಬೇತಿ, ಸಂಶೋಧನೆ, ನವೀನತೆ, ಉದ್ಯಮಶೀಲತೆ, ಸಾರ್ವಜನಿಕ ನೀತಿ, ಸಮುದಾಯ ಅಭಿವೃದ್ಧಿ ಹಾಗೂ ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜಂಟಿ ಸಹಯೋಗದ ಮೂಲಕ ಜ್ಞಾನ ವಿಸ್ತರಣೆ ಮತ್ತು ಕೌಶಲಾಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು’ ಎಂದರು.</p>.<p>‘ಜತೆಗೆ ಜಂಟಿ ಸಮ್ಮೇಳನಗಳು, ಕಾರ್ಯಾಗಾರಗಳು, ವಿದ್ಯಾರ್ಥಿ–ಅಧ್ಯಾಪಕರ ವಿನಿಮಯ ಕಾರ್ಯಕ್ರಮ, ಮಾನವ ಸಂಪನ್ಮೂಲ ವೃದ್ಧಿ, ಜ್ಞಾನ ಸಂಪನ್ಮೂಲ ಹಂಚಿಕೆ ಹಾಗೂ ಸರ್ಕಾರದ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಈ ಒಪ್ಪಂದದ ಪ್ರಮುಖ ಉದ್ದೇಶಗಳಾಗಿವೆ. ಈ ಮೂಲಕ ಗ್ರಾಮೀಣ ಸಮಾಜದ ಸರ್ವತೋಮುಖ ಪ್ರಗತಿಗೆ ಪೂರಕವಾದ ಮಾನವ ಸಂಪನ್ಮೂಲ ಸೃಷ್ಟಿಯಾಗಲಿದೆ’ ಎಂದು ತಿಳಿಸಿದರು. </p>.<p>ಸರ್ವೋದಯ ಇಂಟಿಗ್ರೇಟೆಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿಯ ನಾಗರಾಜ್ ದೇಸಾಯಿ ಮತ್ತು ದೀಪಾ ಸುನಿಲ್ ಮಾತನಾಡಿ, ‘ವಿಶ್ವವಿದ್ಯಾಲಯ ಮತ್ತು ಎನ್ಜಿಒ ಸಹಯೋಗ ಗ್ರಾಮೀಣ ಪರಿವರ್ತನೆಗೆ ದಾರಿತೋರುತ್ತದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಸಂಶೋಧನೆ ಮತ್ತು ಅನ್ವೇಷಣಾ ವಿಭಾಗದ ಸಹಾಯಕ ನಿರ್ದೇಶಕ ಪ್ರೊ. ಗಿರೀಶ್ ದೀಕ್ಷಿತ್, ಆಡಳಿತಾಧಿಕಾರಿ ಶಶಿಭೂಷಣ ದೇವೂರ, ಮೃತ್ಯುಂಜಯ ಮೆಣಸಿನಕಾಯಿ, ವಿಶ್ವವಿದ್ಯಾಲಯದ ಅಧ್ಯಾಪಕರು ಮತ್ತು ಸರ್ವೋದಯ ಇಂಟಿಗ್ರೇಟೆಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಗ್ರಾಮೀಣ ಸಬಲೀಕರಣ ಮತ್ತು ಶಾಶ್ವತ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಉದ್ದೇಶದಿಂದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯ ಹಾಗೂ ಸರ್ವೋದಯ ಇಂಟಿಗ್ರೇಟೆಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿ ನಡುವೆ ಪರಸ್ಪರ ಸಹಯೋಗ ಒಪ್ಪಂದಕ್ಕೆ (ಎಂಒಯು) ಸಹಿ ಮಾಡಲಾಯಿತು.</p>.<p>ಗ್ರಾಮೀಣಾಭಿವೃದ್ಧಿ ವಿ.ವಿಯ ಪ್ರಭಾರ ಕುಲಪತಿ ಪ್ರೊ.ಸುರೇಶ ವಿ.ನಾಡಗೌಡರ ಮಾತನಾಡಿ, ‘ವಿದ್ಯಾರ್ಥಿಗಳು ಗ್ರಾಮೀಣ ಭಾಗದ ವಾಸ್ತವ್ಯ ಅರಿತು, ಸಮಾಜಮುಖಿ ಸಂಶೋಧನೆ ಮತ್ತು ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಈ ಸಹಯೋಗ ಪ್ರೇರಕವಾಗಲಿದೆ’ ಎಂದು ಹೇಳಿದರು.</p>.<p>‘ಶೈಕ್ಷಣಿಕ, ತರಬೇತಿ, ಸಂಶೋಧನೆ, ನವೀನತೆ, ಉದ್ಯಮಶೀಲತೆ, ಸಾರ್ವಜನಿಕ ನೀತಿ, ಸಮುದಾಯ ಅಭಿವೃದ್ಧಿ ಹಾಗೂ ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜಂಟಿ ಸಹಯೋಗದ ಮೂಲಕ ಜ್ಞಾನ ವಿಸ್ತರಣೆ ಮತ್ತು ಕೌಶಲಾಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು’ ಎಂದರು.</p>.<p>‘ಜತೆಗೆ ಜಂಟಿ ಸಮ್ಮೇಳನಗಳು, ಕಾರ್ಯಾಗಾರಗಳು, ವಿದ್ಯಾರ್ಥಿ–ಅಧ್ಯಾಪಕರ ವಿನಿಮಯ ಕಾರ್ಯಕ್ರಮ, ಮಾನವ ಸಂಪನ್ಮೂಲ ವೃದ್ಧಿ, ಜ್ಞಾನ ಸಂಪನ್ಮೂಲ ಹಂಚಿಕೆ ಹಾಗೂ ಸರ್ಕಾರದ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಈ ಒಪ್ಪಂದದ ಪ್ರಮುಖ ಉದ್ದೇಶಗಳಾಗಿವೆ. ಈ ಮೂಲಕ ಗ್ರಾಮೀಣ ಸಮಾಜದ ಸರ್ವತೋಮುಖ ಪ್ರಗತಿಗೆ ಪೂರಕವಾದ ಮಾನವ ಸಂಪನ್ಮೂಲ ಸೃಷ್ಟಿಯಾಗಲಿದೆ’ ಎಂದು ತಿಳಿಸಿದರು. </p>.<p>ಸರ್ವೋದಯ ಇಂಟಿಗ್ರೇಟೆಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿಯ ನಾಗರಾಜ್ ದೇಸಾಯಿ ಮತ್ತು ದೀಪಾ ಸುನಿಲ್ ಮಾತನಾಡಿ, ‘ವಿಶ್ವವಿದ್ಯಾಲಯ ಮತ್ತು ಎನ್ಜಿಒ ಸಹಯೋಗ ಗ್ರಾಮೀಣ ಪರಿವರ್ತನೆಗೆ ದಾರಿತೋರುತ್ತದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಸಂಶೋಧನೆ ಮತ್ತು ಅನ್ವೇಷಣಾ ವಿಭಾಗದ ಸಹಾಯಕ ನಿರ್ದೇಶಕ ಪ್ರೊ. ಗಿರೀಶ್ ದೀಕ್ಷಿತ್, ಆಡಳಿತಾಧಿಕಾರಿ ಶಶಿಭೂಷಣ ದೇವೂರ, ಮೃತ್ಯುಂಜಯ ಮೆಣಸಿನಕಾಯಿ, ವಿಶ್ವವಿದ್ಯಾಲಯದ ಅಧ್ಯಾಪಕರು ಮತ್ತು ಸರ್ವೋದಯ ಇಂಟಿಗ್ರೇಟೆಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>