<p><strong>ಗದಗ</strong>: ‘ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಆದರೂ, ಯಾವ ಕಾರಣಕ್ಕಾಗಿ ಸಾಧನಾ ಸಮಾವೇಶ ಮಾಡಿದ್ದಾರೋ ಗೊತ್ತಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಟೀಕಿಸಿದರು.</p>.<p>‘ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದ್ದೇ ದೊಡ್ಡ ಸಾಧನೆಯೇ? ಅದನ್ನು ಹೊರತು ಪಡಿಸಿ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಅಭಿವೃದ್ಧಿಗಾಗಿ ಯಾವ ಕೆಲಸಗಳನ್ನು ಮಾಡಿದ್ದಾರೆ’ ಎಂದು ಮಂಗಳವಾರ ಪ್ರಶ್ನಿಸಿದರು.</p>.<p>‘ರಾಜ್ಯದಲ್ಲಿ ಈ ಹಿಂದೆ ಮುಖ್ಯಮಂತ್ರಿ ಆಗಿರುವ ಯಾರೊಬ್ಬ ಸಿ.ಎಂ ಕೂಡ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಾಲ ಮಾಡಿರಲಿಲ್ಲ. ಸಿ.ಎಂ ಸಿದ್ದರಾಮಯ್ಯ ಅವರು ₹2.30 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದು ಅವರ ಸಾಧನೆಯೇ’ ಎಂದು ಟೀಕಿಸಿದರು.</p>.<p>‘ಈ ಹಿಂದಿನ ಮುಖ್ಯಮಂತ್ರಿಗಳಾರೂ ಕೊರತೆ ಬಜೆಟ್ ಮಂಡಿಸಿಲ್ಲ. ಸಿದ್ದರಾಮಯ್ಯ ಅದನ್ನು ಮಾಡಿದ್ದಾರೆ. ಅಲ್ಲದೇ ಒಟ್ಟು ಬಜೆಟ್ನಲ್ಲಿ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಶೇ 25 ಹಣ ಮೀಸಲಿಡಬೇಕು. ಆದರೆ, ಕಾಂಗ್ರೆಸ್ನವರು ಶೇ 10ರಷ್ಟು ಮಾತ್ರ ಇಟ್ಟಿದ್ದಾರೆ. ಇದು ಸಾಧನೆಯೇ’ ಎಂದು ದೂರಿದರು.</p>.<p>‘ಕಾಂಗ್ರೆಸ್ ಪಕ್ಷದ ಶಾಸಕರೇ ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಬಹಿರಂಗ ಹೇಳಿಕೆ ನೀಡುತ್ತಾರೆ. ಎಲ್ಲ ಹುದ್ದೆಗಳಿಗೂ ರೇಟ್ ಕಾರ್ಡ್ ನಿಗದಿ ಮಾಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿದ್ದ ₹39 ಸಾವಿರ ಕೋಟಿ ಹಣವನ್ನು ಅನ್ಯ ಕಾರ್ಯಕ್ಕೆ ಬಳಕೆ ಮಾಡಿಕೊಂಡಿದ್ದಾರೆ. 46 ದಿನಬಳಕೆ ವಸ್ತು, ಸೇವೆಗಳ ದರ ದುಪ್ಪಟ್ಟಾಗಿದೆ. ಜನರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಇವೇ ಅವರ ಸಾಧನೆ’ ಎಂದು ಹರಿಹಾಯ್ದರು.</p>.<p>‘ಜಾತಿ ಜನಗಣತಿ ಬಿಡುಗಡೆ ಮಾಡದಂತೆ ಎಲ್ಲ ಪಕ್ಷಗಳವರು ಒತ್ತಾಯಿಸಿದ್ದರು. ಅವರ ವಿರೋಧದ ನಡುವೆಯೂ ಬಿಡುಗಡೆ ಮಾಡಿ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದು ಕಾಂಗ್ರೆಸ್ನ ಸಾಧನೆಯಾಗಿದೆ’ ಎಂದು ಆರೋಪ ಮಾಡಿದರು.</p>.<p>‘ಇಡೀ ದೇಶದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ನಮ್ಮ ರಾಜ್ಯ ಕೊನೆ ಸ್ಥಾನದಲ್ಲಿದೆ. ಶಿಕ್ಷಕರ ಹುದ್ದೆಗಳು ಶೇ 50ಕ್ಕಿಂತಲೂ ಹೆಚ್ಚು ಖಾಲಿ ಉಳಿದಿವೆ. ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರೇ ಇಲ್ಲ. ನಮ್ಮ ರಾಜ್ಯದ ಶೈಕ್ಷಣಿಕ ವ್ಯವಸ್ಥೆ ಹಾಳು ಮಾಡಿದ್ದಕ್ಕಾಗಿ ಸಮಾವೇಶ ಮಾಡುತ್ತಿದ್ದಾರೆಯೇ’ ಎಂದು ನಿಂದಿಸಿದರು.</p>.<p>‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಾವಿರಾರು ಮಂದಿ ರೌಡಿಶೀಟರ್ಗಳು ಬಿಡುಗಡೆ ಆಗಿದ್ದಾರೆ. ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಕನಸಾಗಿದೆ. ಜನರಿಗೆ ಕಾಂಗ್ರೆಸ್ನ ಹಣೆಬರಹ ಗೊತ್ತಾಗಿದೆ. ಹಾಗಾಗಿ, ಇವರಿಗೆ ಜನರೇ ಮುಂದೆ ತಕ್ಕ ಪಾಠ ಕಲಿಸುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಆದರೂ, ಯಾವ ಕಾರಣಕ್ಕಾಗಿ ಸಾಧನಾ ಸಮಾವೇಶ ಮಾಡಿದ್ದಾರೋ ಗೊತ್ತಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಟೀಕಿಸಿದರು.</p>.<p>‘ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದ್ದೇ ದೊಡ್ಡ ಸಾಧನೆಯೇ? ಅದನ್ನು ಹೊರತು ಪಡಿಸಿ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಅಭಿವೃದ್ಧಿಗಾಗಿ ಯಾವ ಕೆಲಸಗಳನ್ನು ಮಾಡಿದ್ದಾರೆ’ ಎಂದು ಮಂಗಳವಾರ ಪ್ರಶ್ನಿಸಿದರು.</p>.<p>‘ರಾಜ್ಯದಲ್ಲಿ ಈ ಹಿಂದೆ ಮುಖ್ಯಮಂತ್ರಿ ಆಗಿರುವ ಯಾರೊಬ್ಬ ಸಿ.ಎಂ ಕೂಡ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಾಲ ಮಾಡಿರಲಿಲ್ಲ. ಸಿ.ಎಂ ಸಿದ್ದರಾಮಯ್ಯ ಅವರು ₹2.30 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದು ಅವರ ಸಾಧನೆಯೇ’ ಎಂದು ಟೀಕಿಸಿದರು.</p>.<p>‘ಈ ಹಿಂದಿನ ಮುಖ್ಯಮಂತ್ರಿಗಳಾರೂ ಕೊರತೆ ಬಜೆಟ್ ಮಂಡಿಸಿಲ್ಲ. ಸಿದ್ದರಾಮಯ್ಯ ಅದನ್ನು ಮಾಡಿದ್ದಾರೆ. ಅಲ್ಲದೇ ಒಟ್ಟು ಬಜೆಟ್ನಲ್ಲಿ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಶೇ 25 ಹಣ ಮೀಸಲಿಡಬೇಕು. ಆದರೆ, ಕಾಂಗ್ರೆಸ್ನವರು ಶೇ 10ರಷ್ಟು ಮಾತ್ರ ಇಟ್ಟಿದ್ದಾರೆ. ಇದು ಸಾಧನೆಯೇ’ ಎಂದು ದೂರಿದರು.</p>.<p>‘ಕಾಂಗ್ರೆಸ್ ಪಕ್ಷದ ಶಾಸಕರೇ ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಬಹಿರಂಗ ಹೇಳಿಕೆ ನೀಡುತ್ತಾರೆ. ಎಲ್ಲ ಹುದ್ದೆಗಳಿಗೂ ರೇಟ್ ಕಾರ್ಡ್ ನಿಗದಿ ಮಾಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿದ್ದ ₹39 ಸಾವಿರ ಕೋಟಿ ಹಣವನ್ನು ಅನ್ಯ ಕಾರ್ಯಕ್ಕೆ ಬಳಕೆ ಮಾಡಿಕೊಂಡಿದ್ದಾರೆ. 46 ದಿನಬಳಕೆ ವಸ್ತು, ಸೇವೆಗಳ ದರ ದುಪ್ಪಟ್ಟಾಗಿದೆ. ಜನರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಇವೇ ಅವರ ಸಾಧನೆ’ ಎಂದು ಹರಿಹಾಯ್ದರು.</p>.<p>‘ಜಾತಿ ಜನಗಣತಿ ಬಿಡುಗಡೆ ಮಾಡದಂತೆ ಎಲ್ಲ ಪಕ್ಷಗಳವರು ಒತ್ತಾಯಿಸಿದ್ದರು. ಅವರ ವಿರೋಧದ ನಡುವೆಯೂ ಬಿಡುಗಡೆ ಮಾಡಿ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದು ಕಾಂಗ್ರೆಸ್ನ ಸಾಧನೆಯಾಗಿದೆ’ ಎಂದು ಆರೋಪ ಮಾಡಿದರು.</p>.<p>‘ಇಡೀ ದೇಶದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ನಮ್ಮ ರಾಜ್ಯ ಕೊನೆ ಸ್ಥಾನದಲ್ಲಿದೆ. ಶಿಕ್ಷಕರ ಹುದ್ದೆಗಳು ಶೇ 50ಕ್ಕಿಂತಲೂ ಹೆಚ್ಚು ಖಾಲಿ ಉಳಿದಿವೆ. ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರೇ ಇಲ್ಲ. ನಮ್ಮ ರಾಜ್ಯದ ಶೈಕ್ಷಣಿಕ ವ್ಯವಸ್ಥೆ ಹಾಳು ಮಾಡಿದ್ದಕ್ಕಾಗಿ ಸಮಾವೇಶ ಮಾಡುತ್ತಿದ್ದಾರೆಯೇ’ ಎಂದು ನಿಂದಿಸಿದರು.</p>.<p>‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಾವಿರಾರು ಮಂದಿ ರೌಡಿಶೀಟರ್ಗಳು ಬಿಡುಗಡೆ ಆಗಿದ್ದಾರೆ. ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಕನಸಾಗಿದೆ. ಜನರಿಗೆ ಕಾಂಗ್ರೆಸ್ನ ಹಣೆಬರಹ ಗೊತ್ತಾಗಿದೆ. ಹಾಗಾಗಿ, ಇವರಿಗೆ ಜನರೇ ಮುಂದೆ ತಕ್ಕ ಪಾಠ ಕಲಿಸುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>