ಗದಗ ಜಿಲ್ಲಾ ಪಂಚಾಯಯ್ತಿ ಸಭಾ ಭವನದಲ್ಲಿ ಅಧಿಕಾರಿಗಳು ಹಾಗೂ ಸಫಾಯಿ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ‘ಬಹುಮಹಡಿ ಅಥವಾ ಗುಂಪು ಮನೆಗಳಿಂದ ಅವಿಭಕ್ತ ಕುಟುಂಬ ವ್ಯವಸ್ಥೆ ಇರುವ ಸಫಾಯಿ ಕರ್ಮಚಾರಿ ಕುಟುಂಬಗಳಿಗೆ ಅನಾನುಕೂಲವೇ ಜಾಸ್ತಿ. ಆದ್ದರಿಂದ ಅವರಿಗೆ ಸ್ವಂತ ನಿವೇಶನ ನೀಡಲು ಕ್ರಮ ವಹಿಸಬೇಕು. ಅವರ ಅವಲಂಬಿತರಿಗೆ ಕೈಗಾರಿಕೆ ಸೇರಿ ವಿವಿಧ ಇಲಾಖೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ ನೀಡಬೇಕು. ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆ ಕ್ಷೇತ್ರಗಳ ಕುರಿತು ಜಾಗೃತಿ ಮೂಡಿಸಿ ಅವರಿಗೆ ಹೊಸ ಬದುಕು ಕಟ್ಟಿಕೊಡಲು ಅಧಿಕಾರಿಗಳು ಪ್ರಯತ್ನಿಸಬೇಕು’ ಎಂದು ಅವರು ಹೇಳಿದರು.