<p><strong>ಗದಗ: </strong>‘ಸಫಾಯಿ ಕಾರ್ಮಿಕರಿಗೆ ಮನೆ ಬದಲು ಸ್ವಂತ ನಿವೇಶನಗಳನ್ನು ನೀಡಲು, ಸೂಕ್ತ ಮಾರ್ಪಾಡು ಮಾಡಿ ರಾಜ್ಯ ಸರ್ಕಾರಕ್ಕೆ ಅನುಮತಿಗಾಗಿ ಹೊಸ ಪ್ರಸ್ತಾವ ಸಲ್ಲಿಸಬೇಕು’ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗದಗ ಜಿಲ್ಲಾ ಪಂಚಾಯಯ್ತಿ ಸಭಾ ಭವನದಲ್ಲಿ ಅಧಿಕಾರಿಗಳು ಹಾಗೂ ಸಫಾಯಿ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ‘ಬಹುಮಹಡಿ ಅಥವಾ ಗುಂಪು ಮನೆಗಳಿಂದ ಅವಿಭಕ್ತ ಕುಟುಂಬ ವ್ಯವಸ್ಥೆ ಇರುವ ಸಫಾಯಿ ಕರ್ಮಚಾರಿ ಕುಟುಂಬಗಳಿಗೆ ಅನಾನುಕೂಲವೇ ಜಾಸ್ತಿ. ಆದ್ದರಿಂದ ಅವರಿಗೆ ಸ್ವಂತ ನಿವೇಶನ ನೀಡಲು ಕ್ರಮ ವಹಿಸಬೇಕು. ಅವರ ಅವಲಂಬಿತರಿಗೆ ಕೈಗಾರಿಕೆ ಸೇರಿ ವಿವಿಧ ಇಲಾಖೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ ನೀಡಬೇಕು. ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆ ಕ್ಷೇತ್ರಗಳ ಕುರಿತು ಜಾಗೃತಿ ಮೂಡಿಸಿ ಅವರಿಗೆ ಹೊಸ ಬದುಕು ಕಟ್ಟಿಕೊಡಲು ಅಧಿಕಾರಿಗಳು ಪ್ರಯತ್ನಿಸಬೇಕು’ ಎಂದು ಅವರು ಹೇಳಿದರು.</p>.<p>ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ನೇಮಕಾತಿ ಕುರಿತು ದೇಶದ ಸುಪ್ರೀಂಕೋರ್ಟ್ 2007ರಲ್ಲಿ ನೀಡಿದ ತೀರ್ಪಿನ ಅನ್ವಯ ಬಾಕಿ ಉಳಿದ ನೇಮಕಾತಿ ಅವಧಿ ವಿಸ್ತರಣೆ ಅಗತ್ಯ. ಕ್ಷೇಮಾಭಿವೃದ್ಧಿ ಯೋಜನೆಯಡಿ ಆದ ನೇಮಕಾತಿ ಹಾಗೂ 2017ರ ಹೊಸ ನಿಯಮಗಳಡಿ ಆಗಿರುವ ಸಫಾಯಿ ಕಾರ್ಮಿಕರ ನೇಮಕಾತಿ ಕುರಿತು ತಮಗೆ ಮಾಹಿತಿ ನೀಡಬೇಕು ಎಂದು ಅವರು ಸೂಚಿಸಿದರು.</p>.<p>‘ಗದಗ ನಗರದಲ್ಲಿ ವಕಾರಸಾಲು ತೆರವುಗೊಳಿಸುವ ಸಂದರ್ಭದಲ್ಲಿ ಪೌರಕಾರ್ಮಿಕರು, ಒಗ್ಗಟ್ಟಿನಿಂದ ಪ್ರಶಂಸನೀಯ ಕಾರ್ಯ ಮಾಡಿದ್ದಾರೆ’ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.</p>.<p>ಸಿಇಒ ಡಾ.ಆನಂದ್ ಕೆ., ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಖಾಜಾ ಹುಸೇನ್ ಮುಧೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>‘ಸಫಾಯಿ ಕಾರ್ಮಿಕರಿಗೆ ಮನೆ ಬದಲು ಸ್ವಂತ ನಿವೇಶನಗಳನ್ನು ನೀಡಲು, ಸೂಕ್ತ ಮಾರ್ಪಾಡು ಮಾಡಿ ರಾಜ್ಯ ಸರ್ಕಾರಕ್ಕೆ ಅನುಮತಿಗಾಗಿ ಹೊಸ ಪ್ರಸ್ತಾವ ಸಲ್ಲಿಸಬೇಕು’ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗದಗ ಜಿಲ್ಲಾ ಪಂಚಾಯಯ್ತಿ ಸಭಾ ಭವನದಲ್ಲಿ ಅಧಿಕಾರಿಗಳು ಹಾಗೂ ಸಫಾಯಿ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ‘ಬಹುಮಹಡಿ ಅಥವಾ ಗುಂಪು ಮನೆಗಳಿಂದ ಅವಿಭಕ್ತ ಕುಟುಂಬ ವ್ಯವಸ್ಥೆ ಇರುವ ಸಫಾಯಿ ಕರ್ಮಚಾರಿ ಕುಟುಂಬಗಳಿಗೆ ಅನಾನುಕೂಲವೇ ಜಾಸ್ತಿ. ಆದ್ದರಿಂದ ಅವರಿಗೆ ಸ್ವಂತ ನಿವೇಶನ ನೀಡಲು ಕ್ರಮ ವಹಿಸಬೇಕು. ಅವರ ಅವಲಂಬಿತರಿಗೆ ಕೈಗಾರಿಕೆ ಸೇರಿ ವಿವಿಧ ಇಲಾಖೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹ ನೀಡಬೇಕು. ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆ ಕ್ಷೇತ್ರಗಳ ಕುರಿತು ಜಾಗೃತಿ ಮೂಡಿಸಿ ಅವರಿಗೆ ಹೊಸ ಬದುಕು ಕಟ್ಟಿಕೊಡಲು ಅಧಿಕಾರಿಗಳು ಪ್ರಯತ್ನಿಸಬೇಕು’ ಎಂದು ಅವರು ಹೇಳಿದರು.</p>.<p>ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ನೇಮಕಾತಿ ಕುರಿತು ದೇಶದ ಸುಪ್ರೀಂಕೋರ್ಟ್ 2007ರಲ್ಲಿ ನೀಡಿದ ತೀರ್ಪಿನ ಅನ್ವಯ ಬಾಕಿ ಉಳಿದ ನೇಮಕಾತಿ ಅವಧಿ ವಿಸ್ತರಣೆ ಅಗತ್ಯ. ಕ್ಷೇಮಾಭಿವೃದ್ಧಿ ಯೋಜನೆಯಡಿ ಆದ ನೇಮಕಾತಿ ಹಾಗೂ 2017ರ ಹೊಸ ನಿಯಮಗಳಡಿ ಆಗಿರುವ ಸಫಾಯಿ ಕಾರ್ಮಿಕರ ನೇಮಕಾತಿ ಕುರಿತು ತಮಗೆ ಮಾಹಿತಿ ನೀಡಬೇಕು ಎಂದು ಅವರು ಸೂಚಿಸಿದರು.</p>.<p>‘ಗದಗ ನಗರದಲ್ಲಿ ವಕಾರಸಾಲು ತೆರವುಗೊಳಿಸುವ ಸಂದರ್ಭದಲ್ಲಿ ಪೌರಕಾರ್ಮಿಕರು, ಒಗ್ಗಟ್ಟಿನಿಂದ ಪ್ರಶಂಸನೀಯ ಕಾರ್ಯ ಮಾಡಿದ್ದಾರೆ’ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.</p>.<p>ಸಿಇಒ ಡಾ.ಆನಂದ್ ಕೆ., ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಖಾಜಾ ಹುಸೇನ್ ಮುಧೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>