ಜಿಲ್ಲೆಯಾದ್ಯಂತ ರಾಷ್ಟ್ರೀಕೃತ ಬ್ಯಾಂಕುಗಳ 148 ಶಾಖೆಗಳಲ್ಲಿ ಡಿ.15ರಿಂದ ನೋಂದಣಿ ಕಾರ್ಯ ನಡೆಯುತ್ತಿದೆ. ರೈತರ ನೋಂದಣಿಗಾಗಿಯೇ ವಿಶೇಷ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ರೈತರು ನೋಂದಣಿ ಸಂದರ್ಭದಲ್ಲಿ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯ ಅಸಲು ಪ್ರತಿಗಳನ್ನು ಹಾಜರುಪಡಿಸಬೇಕು. ಈ ಎರಡೂ ದಾಖಲೆಗಳ ನಕಲು ಪ್ರತಿಯೊಂದಿಗೆ, ಸಾಲ ಪಡೆದ ಜಮೀನಿನ ಸರ್ವೆ ನಂಬರ್ ಮಾಹಿತಿ ನಮೂದಿಸಿ, ಹೆಸರು ನೋಂದಣಿ ಮಾಡಿಕೊಳ್ಳಬಹುದು.