<p><strong>ಗದಗ: </strong>ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಆಕ್ರೋಶಗೊಂಡ ಕೆಲವು ಕಿಡಿಗೇಡಿಗಳು, ಸ್ಥಳದಲ್ಲಿದ್ದ ಉಪ ವಿಭಾಗಾಧಿಕಾರಿ ಹಾಗೂ ಡಿವೈಎಸ್ಪಿ ವಾಹನಕ್ಕೆ ಕಲ್ಲು ತೂರಿದ ಘಟನೆ ತಾಲ್ಲೂಕಿನ ಬಳಗಾನೂರಲ್ಲಿ ಶನಿವಾರ ನಡೆದಿದೆ.</p>.<p>ಬಳಗಾನೂರಿನ ಬಸ್ ನಿಲ್ದಾಣ ಬಳಿ ರಾಯಣ್ಣ ಮೂರ್ತಿ ಸ್ಥಾಪನೆಗೆ ಅವರ ಅಭಿಮಾನಿಗಳು ಕೆಲವು ತಿಂಗಳ ಹಿಂದೆ ನಿರ್ಣಯಿಸಿದ್ದರು. ಆದರೆ, ಅದಕ್ಕೆ ಸ್ಥಳೀಯ ಗ್ರಾಮ ಪಂಚಾಯ್ತಿ ಅನುಮತಿ ನೀಡಿರಲಿಲ್ಲ. ಈ ಮಧ್ಯೆ ರಾಯಣ್ಣ ಅಭಿಮಾನಿಗಳು ತಾವು ಗುರುತಿಸಿದ್ದ ಸ್ಥಳದಲ್ಲಿ ಮೂರ್ತಿ ಸ್ಥಾಪನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಇದೇ ವೇಳೆ ಮತ್ತೊಂದು ಗುಂಪು ಕಿತ್ತೂರ ಚನ್ನಮ್ಮ ಫಲಕ ಹಾಕಿತ್ತು. ಯಾವ ಮೂರ್ತಿಗೂ ಅವಕಾಶ ಬೇಡ ಎಂದು ಫಲಕ ತೆರವು ಮತ್ತು ಪ್ರತಿಮೆ ಸ್ಥಾಪನೆಗೆ ತಡೆ ಒಡ್ಡಲಾಗಿತ್ತು.</p>.<p>ಆದರೆ, ಶುಕ್ರವಾರ ರಾತ್ರಿ ರಾಯಣ್ಣ ಅಭಿಮಾನಿಗಳು, ನಿಗದಿತ ಜಾಗದಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ್ದರು ಎನ್ನಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಕೆಲವರು ಪೊಲೀಸರು ಹಾಗೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದು, ಗ್ರಾಮಕ್ಕೆ ಉಪ ವಿಭಾಗಾಧಿಕಾರಿ ಹಾಗೂ ಡಿವೈಎಸ್ಪಿ ನೇತೃತ್ವದ ತಂಡ ಬಂದಿದೆ.</p>.<p>ಈ ವೇಳೆ ಅಧಿಕಾರಿಗಳು ಗ್ರಾಮದ ದೇವಸ್ಥಾನವೊಂದರಲ್ಲಿ ಸಂಧಾನ ಸಭೆ, ಮೂರ್ತಿ ಸ್ಥಾಪನೆಗೆ ಅವಕಾಶ ಇಲ್ಲದಿರುವ ಬಗ್ಗೆ ತಿಳಿವಳಿಕೆ ಹೇಳುತ್ತಿದ್ದ ವೇಳೆಯೇ ಇತ್ತ ಪೊಲೀಸರು ಮೂರ್ತಿ ತೆರವುಗೊಳಿಸಿದ್ದಾರೆ ಎನ್ನಲಾಗಿದೆ.</p>.<p>ಸ್ಥಳದಲ್ಲಿದ್ದ ರಾಯಣ್ಣ ಅಭಿಮಾನಿಗಳು ತೆರವಿಗೆ ಅಡ್ಡಿಪಡಿಸುತ್ತಿದ್ದಂತೆ ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಕೆಲವು ಕಿಡಿಗೇಡಿಗಳು ಉಪ ವಿಭಾಗಾಧಿಕಾರಿ ಹಾಗೂ ಡಿವೈಎಸ್ಪಿ ವಾಹನಕ್ಕೆ ಕಲ್ಲು ತೂರಿದ್ದಾರೆ. ಇದರಿಂದಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿದ್ದಾರೆ.</p>.<p>‘ಸಂಧಾನ ಸಭೆ ನಡೆಯುತ್ತಿದ್ದಾಗಲೇ ಕೆಲವರು ಪ್ರಚೋದನೆಗೆ ಒಳಗಾಗಿ ಗಲಾಟೆ ಮಾಡಿ, ಗಾಡಿಗೆ ಕಲ್ಲು ತೂರಿದ್ದಾರೆ. ಹೆಚ್ಚುವರಿ ಸಿಬ್ಬಂದಿ ಕರೆಸಲಾಗಿದ್ದು, ಗ್ರಾಮದಲ್ಲಿ ಇದೀಗ ಪರಿಸ್ಥಿತಿ ತಿಳಿಯಾಗಿದೆ’ ಎಂದು ಉಪ ವಿಭಾಗಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.</p>.<p>‘ಸರ್ಕಾರಿ ಜಾಗಯಲ್ಲಿ ಅನುಮತಿ ಇಲ್ಲದೇ ಮೂರ್ತಿ ಪ್ರತಿಷ್ಠಾಪಿಸಿದ್ದ ಬಗ್ಗೆ ಪಂಚಾಯ್ತಿಯವರು ಹೇಳಿದ್ದರು. ತೆರವುಗೊಳಿಸಲು ಮುಂದಾದಾಗ ಪೊಲೀಸ್ ಹಾಗೂ ಉಪ ವಿಭಾಗಾಧಿಕಾರಿ ಗಾಡಿಗೆ ಕಲ್ಲು ತೂರಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ’ ಎಂದು ಡಿಎಸ್ಪಿ ಪ್ರಹ್ಲಾದ ಎಸ್.ಕೆ. ತಿಳಿಸಿದ್ದಾರೆ.</p>.<p>ರಾಯಣ್ಣ ಪ್ರತಿಮೆ ತೆರವಿನ ಬಳಿಕ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ವರು ಸಿಪಿಐ, 10 ಮಂದಿ ಪಿಎಸ್ಐ, 4 ಡಿಎಆರ್ ತುಕುಡಿ, ಸಿವಿಲ್ ಪೊಲೀಸರು ಸೇರಿದಂತೆ ನೂರಾರು ಪೊಲೀಸರು ಬೀಡು ಬಿಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಆಕ್ರೋಶಗೊಂಡ ಕೆಲವು ಕಿಡಿಗೇಡಿಗಳು, ಸ್ಥಳದಲ್ಲಿದ್ದ ಉಪ ವಿಭಾಗಾಧಿಕಾರಿ ಹಾಗೂ ಡಿವೈಎಸ್ಪಿ ವಾಹನಕ್ಕೆ ಕಲ್ಲು ತೂರಿದ ಘಟನೆ ತಾಲ್ಲೂಕಿನ ಬಳಗಾನೂರಲ್ಲಿ ಶನಿವಾರ ನಡೆದಿದೆ.</p>.<p>ಬಳಗಾನೂರಿನ ಬಸ್ ನಿಲ್ದಾಣ ಬಳಿ ರಾಯಣ್ಣ ಮೂರ್ತಿ ಸ್ಥಾಪನೆಗೆ ಅವರ ಅಭಿಮಾನಿಗಳು ಕೆಲವು ತಿಂಗಳ ಹಿಂದೆ ನಿರ್ಣಯಿಸಿದ್ದರು. ಆದರೆ, ಅದಕ್ಕೆ ಸ್ಥಳೀಯ ಗ್ರಾಮ ಪಂಚಾಯ್ತಿ ಅನುಮತಿ ನೀಡಿರಲಿಲ್ಲ. ಈ ಮಧ್ಯೆ ರಾಯಣ್ಣ ಅಭಿಮಾನಿಗಳು ತಾವು ಗುರುತಿಸಿದ್ದ ಸ್ಥಳದಲ್ಲಿ ಮೂರ್ತಿ ಸ್ಥಾಪನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಇದೇ ವೇಳೆ ಮತ್ತೊಂದು ಗುಂಪು ಕಿತ್ತೂರ ಚನ್ನಮ್ಮ ಫಲಕ ಹಾಕಿತ್ತು. ಯಾವ ಮೂರ್ತಿಗೂ ಅವಕಾಶ ಬೇಡ ಎಂದು ಫಲಕ ತೆರವು ಮತ್ತು ಪ್ರತಿಮೆ ಸ್ಥಾಪನೆಗೆ ತಡೆ ಒಡ್ಡಲಾಗಿತ್ತು.</p>.<p>ಆದರೆ, ಶುಕ್ರವಾರ ರಾತ್ರಿ ರಾಯಣ್ಣ ಅಭಿಮಾನಿಗಳು, ನಿಗದಿತ ಜಾಗದಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ್ದರು ಎನ್ನಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಕೆಲವರು ಪೊಲೀಸರು ಹಾಗೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದು, ಗ್ರಾಮಕ್ಕೆ ಉಪ ವಿಭಾಗಾಧಿಕಾರಿ ಹಾಗೂ ಡಿವೈಎಸ್ಪಿ ನೇತೃತ್ವದ ತಂಡ ಬಂದಿದೆ.</p>.<p>ಈ ವೇಳೆ ಅಧಿಕಾರಿಗಳು ಗ್ರಾಮದ ದೇವಸ್ಥಾನವೊಂದರಲ್ಲಿ ಸಂಧಾನ ಸಭೆ, ಮೂರ್ತಿ ಸ್ಥಾಪನೆಗೆ ಅವಕಾಶ ಇಲ್ಲದಿರುವ ಬಗ್ಗೆ ತಿಳಿವಳಿಕೆ ಹೇಳುತ್ತಿದ್ದ ವೇಳೆಯೇ ಇತ್ತ ಪೊಲೀಸರು ಮೂರ್ತಿ ತೆರವುಗೊಳಿಸಿದ್ದಾರೆ ಎನ್ನಲಾಗಿದೆ.</p>.<p>ಸ್ಥಳದಲ್ಲಿದ್ದ ರಾಯಣ್ಣ ಅಭಿಮಾನಿಗಳು ತೆರವಿಗೆ ಅಡ್ಡಿಪಡಿಸುತ್ತಿದ್ದಂತೆ ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಕೆಲವು ಕಿಡಿಗೇಡಿಗಳು ಉಪ ವಿಭಾಗಾಧಿಕಾರಿ ಹಾಗೂ ಡಿವೈಎಸ್ಪಿ ವಾಹನಕ್ಕೆ ಕಲ್ಲು ತೂರಿದ್ದಾರೆ. ಇದರಿಂದಾಗಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿದ್ದಾರೆ.</p>.<p>‘ಸಂಧಾನ ಸಭೆ ನಡೆಯುತ್ತಿದ್ದಾಗಲೇ ಕೆಲವರು ಪ್ರಚೋದನೆಗೆ ಒಳಗಾಗಿ ಗಲಾಟೆ ಮಾಡಿ, ಗಾಡಿಗೆ ಕಲ್ಲು ತೂರಿದ್ದಾರೆ. ಹೆಚ್ಚುವರಿ ಸಿಬ್ಬಂದಿ ಕರೆಸಲಾಗಿದ್ದು, ಗ್ರಾಮದಲ್ಲಿ ಇದೀಗ ಪರಿಸ್ಥಿತಿ ತಿಳಿಯಾಗಿದೆ’ ಎಂದು ಉಪ ವಿಭಾಗಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.</p>.<p>‘ಸರ್ಕಾರಿ ಜಾಗಯಲ್ಲಿ ಅನುಮತಿ ಇಲ್ಲದೇ ಮೂರ್ತಿ ಪ್ರತಿಷ್ಠಾಪಿಸಿದ್ದ ಬಗ್ಗೆ ಪಂಚಾಯ್ತಿಯವರು ಹೇಳಿದ್ದರು. ತೆರವುಗೊಳಿಸಲು ಮುಂದಾದಾಗ ಪೊಲೀಸ್ ಹಾಗೂ ಉಪ ವಿಭಾಗಾಧಿಕಾರಿ ಗಾಡಿಗೆ ಕಲ್ಲು ತೂರಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ’ ಎಂದು ಡಿಎಸ್ಪಿ ಪ್ರಹ್ಲಾದ ಎಸ್.ಕೆ. ತಿಳಿಸಿದ್ದಾರೆ.</p>.<p>ರಾಯಣ್ಣ ಪ್ರತಿಮೆ ತೆರವಿನ ಬಳಿಕ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ವರು ಸಿಪಿಐ, 10 ಮಂದಿ ಪಿಎಸ್ಐ, 4 ಡಿಎಆರ್ ತುಕುಡಿ, ಸಿವಿಲ್ ಪೊಲೀಸರು ಸೇರಿದಂತೆ ನೂರಾರು ಪೊಲೀಸರು ಬೀಡು ಬಿಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>