‘ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ನಿರುದ್ಯೋಗಿ ಪದವೀಧರರ ವಯೋಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಗೆ ವಿಧಿಸಿದ ಆರ್ಥಿಕ ಮಿತವ್ಯಯ ಮಾರಕವಾಗಿದ್ದು, ಸಾಕಷ್ಟು ಪದವೀಧರರಿಗೆ ಅನ್ಯಾಯವಾಗಲಿದೆ. ಸರ್ಕಾರಕ್ಕೆ ತೊಂದರೆ ಆಗಲಾರದ ಹಾಗೆ ಕೆಲವೊಂದು ಕರಾರುಗಳನ್ನು ವಿಧಿಸಿ ತಡೆಹಿಡಿದ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನೀಡಬೇಕು. ಈಗಾಗಲೇ ನೇಮಕಾತಿಗಳಾದ ಹುದ್ದೆಗಳನ್ನು ಅನುಮೋದನೆ ಮಾಡುವಂತೆ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.