‘ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನವಾಗಿದ್ದು, ಅ.9ರಂದು ನಾಮಪತ್ರ ಪರಿಶೀಲನೆ ನಡೆಯುವುದು. ನಾಮಪತ್ರ ಹಿಂಪಡೆ ಯಲು ಅ.12 ಕೊನೆಯ ದಿನವಾಗಿದೆ. ಅ.28ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ನ.2ರಂದು ಮತಎಣಿಕೆ ನಡೆಯಲಿದೆ. ನ.5ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಪಶ್ಚಿಮ ಪದವೀಧ ರರ ಕ್ಷೇತ್ರ ವ್ಯಾಪ್ತಿಯ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿ ಆಗಿರುತ್ತಾರೆ’ ಎಂದು ಅವರು ತಿಳಿಸಿದ್ದಾರೆ.