<p>ಮುಂಡರಗಿ: ‘ಕೇಂದ್ರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗಳ ಮೂಲಕ ಹಲವಾರು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳ ಕುರಿತು ಅಗತ್ಯ ಮಾಹಿತಿ ಹಾಗೂ ಜಾಗೃತಿ ನೀಡುವ ಉದ್ದೇಶದಿಂದ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನವನ್ನು ಕೈಗೊಳ್ಳಲಾಗಿದೆ' ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ನಂದಾ ಹಣಬರಟ್ಟಿ ತಿಳಿಸಿದರು.</p>.<p>ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದ ಅಡಿಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯು ಗುರುವಾರ ತಾಲ್ಲೂಕಿನ ಹೆಸರೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನ ಭಾಗೀಧಾರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವಿವಿಧ ಇಲಾಖೆಗಳ ಯೋಜನೆಗಳನ್ನು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಈ ಕುರಿತು ಅಧಿಕಾರಿಗಳು ಜನತೆಗೆ ಸಕಾಲದಲ್ಲಿ ಸಮಗ್ರ ಮಾಹಿತಿ ನೀಡಬೇಕು. ಸಾರ್ವಜನಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ ಮಾತನಾಡಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಗಳು ಪರಿಶಿಷ್ಟ ಪಂಗಡದ ಜನತೆಯ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಶಿಕ್ಷಣವು ಮೂಲಭೂತ ಹಕ್ಕಾಗಿದ್ದು, ಎರಡೂ ಇಲಾಖೆಗಳು ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಲಿವೆ. ಪಾಲಕರು ತಮ್ಮ ಮಕ್ಕಳನ್ನು ವಸತಿ ನಿಲಯಕ್ಕೆ ಸೇರಿಸಿ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.</p>.<p>ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿ ಕುಬೇರರಡ್ಡಿ ನೀಲಮ್ಮನವರ ಮಾತನಾಡಿ, ಸಾಂಪ್ರದಾಯಿಕ ಬೆಳೆಗಳಿಗಿಂತ ತೋಟಗಾರಿಕೆ ಬೆಳೆಗಳು ದೀರ್ಘಾವಧಿ ಫಸಲು ನೀಡುತ್ತವೆ. ತೋಟಗಾರಿಕೆ ಬೆಳೆ ಬೆಳೆಯಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಪರಿಶಿಷ್ಟ ಪಂಗಡಗಳ ರೈತರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು. ಯಲ್ಲಪ್ಪ ನಾಗಮ್ಮನವರ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಕಾಂತ ಅರಹುಣಿಸಿ ಕೊನೆಯಲ್ಲಿ ವಂದಿಸಿದರು.</p>.<p>ಗ್ರಾಮದ ಹಿರಿಯರಾದ ವೆಂಕಪ್ಪ ಜಂತ್ಲಿ, ಮಲ್ಲಪ್ಪ ಆರೇರ, ಗರುಡಪ್ಪ ಜಂತ್ಲಿ, ಕೊಟ್ರಪ್ಪ ಮೇಸ್ತ್ರಿ, ಮಂಜುಳಾ ಸೋಮಕ್ಕನವರ, ಗೋಪಲ ಲಮಾಣಿ, ಎಲ್.ಎಂ.ಗಚ್ಚಿನಮನಿ, ಕುಬೇರನಾಯ್ಕ ಲಮಾಣಿ, ಯಲ್ಲಪ್ಪ ನಾಗಮ್ಮನವರ, ಶಂಕ್ರಪ್ಪ ಗೋಣೆಪ್ಪನವರ, ಸೂಫಿಯಾಬೇಗಂ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-23-721340479</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡರಗಿ: ‘ಕೇಂದ್ರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗಳ ಮೂಲಕ ಹಲವಾರು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳ ಕುರಿತು ಅಗತ್ಯ ಮಾಹಿತಿ ಹಾಗೂ ಜಾಗೃತಿ ನೀಡುವ ಉದ್ದೇಶದಿಂದ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನವನ್ನು ಕೈಗೊಳ್ಳಲಾಗಿದೆ' ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ನಂದಾ ಹಣಬರಟ್ಟಿ ತಿಳಿಸಿದರು.</p>.<p>ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದ ಅಡಿಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯು ಗುರುವಾರ ತಾಲ್ಲೂಕಿನ ಹೆಸರೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನ ಭಾಗೀಧಾರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವಿವಿಧ ಇಲಾಖೆಗಳ ಯೋಜನೆಗಳನ್ನು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಈ ಕುರಿತು ಅಧಿಕಾರಿಗಳು ಜನತೆಗೆ ಸಕಾಲದಲ್ಲಿ ಸಮಗ್ರ ಮಾಹಿತಿ ನೀಡಬೇಕು. ಸಾರ್ವಜನಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ ಮಾತನಾಡಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಗಳು ಪರಿಶಿಷ್ಟ ಪಂಗಡದ ಜನತೆಯ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಶಿಕ್ಷಣವು ಮೂಲಭೂತ ಹಕ್ಕಾಗಿದ್ದು, ಎರಡೂ ಇಲಾಖೆಗಳು ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಲಿವೆ. ಪಾಲಕರು ತಮ್ಮ ಮಕ್ಕಳನ್ನು ವಸತಿ ನಿಲಯಕ್ಕೆ ಸೇರಿಸಿ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.</p>.<p>ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿ ಕುಬೇರರಡ್ಡಿ ನೀಲಮ್ಮನವರ ಮಾತನಾಡಿ, ಸಾಂಪ್ರದಾಯಿಕ ಬೆಳೆಗಳಿಗಿಂತ ತೋಟಗಾರಿಕೆ ಬೆಳೆಗಳು ದೀರ್ಘಾವಧಿ ಫಸಲು ನೀಡುತ್ತವೆ. ತೋಟಗಾರಿಕೆ ಬೆಳೆ ಬೆಳೆಯಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಪರಿಶಿಷ್ಟ ಪಂಗಡಗಳ ರೈತರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು. ಯಲ್ಲಪ್ಪ ನಾಗಮ್ಮನವರ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಕಾಂತ ಅರಹುಣಿಸಿ ಕೊನೆಯಲ್ಲಿ ವಂದಿಸಿದರು.</p>.<p>ಗ್ರಾಮದ ಹಿರಿಯರಾದ ವೆಂಕಪ್ಪ ಜಂತ್ಲಿ, ಮಲ್ಲಪ್ಪ ಆರೇರ, ಗರುಡಪ್ಪ ಜಂತ್ಲಿ, ಕೊಟ್ರಪ್ಪ ಮೇಸ್ತ್ರಿ, ಮಂಜುಳಾ ಸೋಮಕ್ಕನವರ, ಗೋಪಲ ಲಮಾಣಿ, ಎಲ್.ಎಂ.ಗಚ್ಚಿನಮನಿ, ಕುಬೇರನಾಯ್ಕ ಲಮಾಣಿ, ಯಲ್ಲಪ್ಪ ನಾಗಮ್ಮನವರ, ಶಂಕ್ರಪ್ಪ ಗೋಣೆಪ್ಪನವರ, ಸೂಫಿಯಾಬೇಗಂ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-23-721340479</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>