<p><strong>ಗಜೇಂದ್ರಗಡ:</strong> ‘ವಿಜ್ಞಾನ ವಸ್ತು ಪ್ರದರ್ಶನ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ, ಪ್ರಾಯೋಗಿಕ ಜ್ಞಾನ ಉತ್ತೇಜಿಸುವ ಪ್ರಮುಖ ವೇದಿಕೆಯಾಗಿದ್ದು, ವಿದ್ಯಾರ್ಥಿಗಳಿಗೆ ವಿಜ್ಞಾನ ತತ್ವಗಳನ್ನು ಅರ್ಥ ಮಾಡಿಕೊಳ್ಳಲು ಸಹಕಾರಿಯಾಗಿದೆ’ ಎಂದು ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ಉಪಾಧ್ಯಕ್ಷೆ ಉಮಾ ಮ್ಯಾಕಲ್ ಹೇಳಿದರು.</p>.<p>ಪಟ್ಟಣದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಸ್ತು ಪ್ರದರ್ಶನಗಳಲ್ಲಿ ವಿದ್ಯಾರ್ಥಿಗಳ ಸೂಪ್ತ ಪ್ರತಿಭೆ ಅನಾವರಣಗೊಳ್ಳುತ್ತದೆ’ ಎಂದರು.</p>.<p>ವಿದ್ಯಾರ್ಥಿಗಳು ವಿಜ್ಞಾನ ಮಾದರಿ ತಯಾರಿಸುವುದರಿಂದ ಆತ್ಮವಿಶ್ವಾಸ ವೃದ್ಧಿಸುವುದರ ಜೊತೆಗೆ ಸಂವಹನ ಕೌಶಲ ಬೆಳೆಯುತ್ತದೆ. ವಿಜ್ಞಾನ ವಸ್ತು ಪ್ರದರ್ಶನದ ಹಿಂದೆ ಶಿಕ್ಷಕರ ಶ್ರಮ ಹೆಚ್ಚಿದೆ’ ಎಂದರು.</p>.<p>ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸೌರವ್ಯೂಹ, ವಾಯು ಮಾಲಿನ್ಯ, ಜಲ ಮಾಲಿನ್ಯ, ಹಸಿರು ಮನೆ ಪರಿಣಾಮ, ಸೂರ್ಯ ಗ್ರಹಣ, ಪರಿಸರ ಸಂರಕ್ಷಣೆ, ಮಾನವನ ಅಂಗಾರ ರಚನೆ ಸೇರಿದಂತೆ 115 ವಿವಿಧ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿ, ಅವುಗಳ ಕಾರ್ಯ ವಿಧಾನ ವಿವರಿಸಿದರು.</p>.<p>ಶಾಲೆಯ ಅಧ್ಯಕ್ಷ ಕಳಕಪ್ಪ ಮ್ಯಾಗೇರಿ ಮಾತನಾಡಿದರು. ಶಾಲೆಯ ಕಾರ್ಯದರ್ಶಿ ರಾಜೇಂದ್ರ ಚಳಮರದ, ಶಿಕ್ಷಕರಾದ ಎಸ್.ಆರ್. ಚಳಮರದ, ಆರ್.ಎಂ. ತಟಗಾರ, ಎನ್.ಎಸ್. ದಿಂಡವಾಡ, ಬಿ.ಪಿ. ಹೊರಪೇಟೆ, ಸಿ.ಆರ್. ಕಾನಾಪುರ, ಎ.ಎ. ಕೊಳ್ಳಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ:</strong> ‘ವಿಜ್ಞಾನ ವಸ್ತು ಪ್ರದರ್ಶನ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ, ಪ್ರಾಯೋಗಿಕ ಜ್ಞಾನ ಉತ್ತೇಜಿಸುವ ಪ್ರಮುಖ ವೇದಿಕೆಯಾಗಿದ್ದು, ವಿದ್ಯಾರ್ಥಿಗಳಿಗೆ ವಿಜ್ಞಾನ ತತ್ವಗಳನ್ನು ಅರ್ಥ ಮಾಡಿಕೊಳ್ಳಲು ಸಹಕಾರಿಯಾಗಿದೆ’ ಎಂದು ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ಉಪಾಧ್ಯಕ್ಷೆ ಉಮಾ ಮ್ಯಾಕಲ್ ಹೇಳಿದರು.</p>.<p>ಪಟ್ಟಣದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಸ್ತು ಪ್ರದರ್ಶನಗಳಲ್ಲಿ ವಿದ್ಯಾರ್ಥಿಗಳ ಸೂಪ್ತ ಪ್ರತಿಭೆ ಅನಾವರಣಗೊಳ್ಳುತ್ತದೆ’ ಎಂದರು.</p>.<p>ವಿದ್ಯಾರ್ಥಿಗಳು ವಿಜ್ಞಾನ ಮಾದರಿ ತಯಾರಿಸುವುದರಿಂದ ಆತ್ಮವಿಶ್ವಾಸ ವೃದ್ಧಿಸುವುದರ ಜೊತೆಗೆ ಸಂವಹನ ಕೌಶಲ ಬೆಳೆಯುತ್ತದೆ. ವಿಜ್ಞಾನ ವಸ್ತು ಪ್ರದರ್ಶನದ ಹಿಂದೆ ಶಿಕ್ಷಕರ ಶ್ರಮ ಹೆಚ್ಚಿದೆ’ ಎಂದರು.</p>.<p>ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸೌರವ್ಯೂಹ, ವಾಯು ಮಾಲಿನ್ಯ, ಜಲ ಮಾಲಿನ್ಯ, ಹಸಿರು ಮನೆ ಪರಿಣಾಮ, ಸೂರ್ಯ ಗ್ರಹಣ, ಪರಿಸರ ಸಂರಕ್ಷಣೆ, ಮಾನವನ ಅಂಗಾರ ರಚನೆ ಸೇರಿದಂತೆ 115 ವಿವಿಧ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿ, ಅವುಗಳ ಕಾರ್ಯ ವಿಧಾನ ವಿವರಿಸಿದರು.</p>.<p>ಶಾಲೆಯ ಅಧ್ಯಕ್ಷ ಕಳಕಪ್ಪ ಮ್ಯಾಗೇರಿ ಮಾತನಾಡಿದರು. ಶಾಲೆಯ ಕಾರ್ಯದರ್ಶಿ ರಾಜೇಂದ್ರ ಚಳಮರದ, ಶಿಕ್ಷಕರಾದ ಎಸ್.ಆರ್. ಚಳಮರದ, ಆರ್.ಎಂ. ತಟಗಾರ, ಎನ್.ಎಸ್. ದಿಂಡವಾಡ, ಬಿ.ಪಿ. ಹೊರಪೇಟೆ, ಸಿ.ಆರ್. ಕಾನಾಪುರ, ಎ.ಎ. ಕೊಳ್ಳಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>