<p><strong>ನರಗುಂದ:</strong> ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ ತಾಲ್ಲೂಕು ಘಟಕ ಸದಸ್ಯರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದರು.</p>.<p>ಪಟ್ಟಣದ ಶಿವಾಜಿ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಮಿನಿ ವಿಧಾನ ಸೌಧಕ್ಕೆ ತಲುಪಿತು. ಗ್ರೇಡ್ 2 ತಹಶೀಲ್ದಾರ್ ಪಿ.ಸಿ. ಕಲಾಲರಿಗೆ ಮನವಿ ಸಲ್ಲಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಂ.ಅಳಗವಾಡಿ ಮಾತನಾಡಿ, ಹಿರಿಯ ನಾಗರಿಕರ ಬೇಡಿಕೆಗಳಾದ ಮಾಸಿಕ ₹10 ಸಾವಿರ ವೃದ್ಧಾಪ್ಯವೇತನ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ, ರಾಜ್ಯ ಎಲ್ಲ ಪೊಲೀಸ್ ಠಾಣೆಯಲ್ಲಿ ಸಮಿತಿ ರಚನೆ, ಸರ್ಕಾರಿ ಆಸ್ಪತ್ರೆ ಹಾಗೂ ಬ್ಯಾಂಕ್ಗಳಲ್ಲಿ ಪ್ರತ್ಯೇಕ ವಿಭಾಗ ರಚನೆ ಒಳಗೊಂಡಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಬಿ.ಎಂ.ಬೆಳಹಾರ, ಉಪಾಧ್ಯಕ್ಷ ಬಿ.ಆರ್. ಬ್ಯಾಹಟ್ಟಿ, ಗೌರವಾಧ್ಯಕ್ಷ ಎಸ್.ಆರ್. ಹಿರೇಮಠ, ಸದಸ್ಯ ಟಿ.ಆರ್.ಉಳ್ಳಾಗಡ್ಡಿ, ಯಲಿಗಾರ, ಎಚ್.ಎಸ್.ಆದೇಪ್ಪನವರ, ಎಸ್.ಬಿ. ಗೌಡಪ್ಪಗೌಡ, ಬಿ.ಎಸ್. ದೇಶಪಾಂಡೆ, ಎಚ್.ಎ. ಕಣವಿ, ವಿ.ವಿ. ಬಡಿಗೇರ, ಎಂ.ಎಂ. ಕಲ್ಲನಗೌಡ್ರ, ಕೆ.ಎಸ್. ದೊಡಮನಿ, ಎಸ್.ವೈ. ಹುಂಬಿ, ತಳವಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ ತಾಲ್ಲೂಕು ಘಟಕ ಸದಸ್ಯರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದರು.</p>.<p>ಪಟ್ಟಣದ ಶಿವಾಜಿ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಮಿನಿ ವಿಧಾನ ಸೌಧಕ್ಕೆ ತಲುಪಿತು. ಗ್ರೇಡ್ 2 ತಹಶೀಲ್ದಾರ್ ಪಿ.ಸಿ. ಕಲಾಲರಿಗೆ ಮನವಿ ಸಲ್ಲಿಸಿದರು.</p>.<p>ಸಂಘದ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಂ.ಅಳಗವಾಡಿ ಮಾತನಾಡಿ, ಹಿರಿಯ ನಾಗರಿಕರ ಬೇಡಿಕೆಗಳಾದ ಮಾಸಿಕ ₹10 ಸಾವಿರ ವೃದ್ಧಾಪ್ಯವೇತನ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ, ರಾಜ್ಯ ಎಲ್ಲ ಪೊಲೀಸ್ ಠಾಣೆಯಲ್ಲಿ ಸಮಿತಿ ರಚನೆ, ಸರ್ಕಾರಿ ಆಸ್ಪತ್ರೆ ಹಾಗೂ ಬ್ಯಾಂಕ್ಗಳಲ್ಲಿ ಪ್ರತ್ಯೇಕ ವಿಭಾಗ ರಚನೆ ಒಳಗೊಂಡಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಬಿ.ಎಂ.ಬೆಳಹಾರ, ಉಪಾಧ್ಯಕ್ಷ ಬಿ.ಆರ್. ಬ್ಯಾಹಟ್ಟಿ, ಗೌರವಾಧ್ಯಕ್ಷ ಎಸ್.ಆರ್. ಹಿರೇಮಠ, ಸದಸ್ಯ ಟಿ.ಆರ್.ಉಳ್ಳಾಗಡ್ಡಿ, ಯಲಿಗಾರ, ಎಚ್.ಎಸ್.ಆದೇಪ್ಪನವರ, ಎಸ್.ಬಿ. ಗೌಡಪ್ಪಗೌಡ, ಬಿ.ಎಸ್. ದೇಶಪಾಂಡೆ, ಎಚ್.ಎ. ಕಣವಿ, ವಿ.ವಿ. ಬಡಿಗೇರ, ಎಂ.ಎಂ. ಕಲ್ಲನಗೌಡ್ರ, ಕೆ.ಎಸ್. ದೊಡಮನಿ, ಎಸ್.ವೈ. ಹುಂಬಿ, ತಳವಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>