<p><strong>ಗದಗ:</strong> ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇಲೆ ಇಲ್ಲಿನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಏಳು ಕಡೆಗಳಲ್ಲಿ ಏಕಕಾಲಕ್ಕೆ ಶನಿವಾರ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ₹3.49 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ.</p>.<p>ದಾಳಿ ಸಂದರ್ಭದಲ್ಲಿ ₹25.50 ಲಕ್ಷ ಮೌಲ್ಯದ ನಾಲ್ಕು ನಿವೇಶನಗಳು, ಎರಡು ಸ್ವಂತ ಹೆಸರಿನಲ್ಲಿ ಹಾಗೂ ಐದು ಬೇನಾಮಿ ಹೆಸರಿನಲ್ಲಿ ನಿರ್ಮಿಸಿದ ₹2.30 ಕೋಟಿ ಮೌಲ್ಯದ ಒಟ್ಟು ಏಳು ಮನೆಗಳು, 3.39 ಎಕರೆ ಕೃಷಿ ಭೂಮಿ, ₹21.50 ಲಕ್ಷ ನಗದು, ₹23.83 ಲಕ್ಷದ 307 ಗ್ರಾಂ ಚಿನ್ನಾಭರಣ, ₹3.70 ಲಕ್ಷ ಮೌಲ್ಯದ ಬೆಳ್ಳಿ, ಒಂದು ಇನ್ನೋವಾ ಕಾರು, ಎರಡು ಬೈಕ್ ಸೇರಿದಂತೆ ಒಟ್ಟು ₹3.49 ಕೋಟಿ ಮೌಲ್ಯದ ಸ್ಥಿರ ಹಾಗೂ ಚರಾಸ್ತಿ ಪತ್ತೆಯಾಗಿದೆ.</p>.<p>ವಶಪಡಿಸಿಕೊಂಡ ಆಸ್ತಿ ಮೌಲ್ಯ ನೌಕರನ ಆದಾಯಕ್ಕಿಂತ ಶೇ 186.92ರಷ್ಟು ಅಧಿಕ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ರಾಯಚೂರು, ಕೊಪ್ಪಳ, ಹೊಸಪೇಟೆಯ ಲೋಕಾಯುಕ್ತ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು ಎಂದು ಗದಗ ಲೋಕಾಯುಕ್ತ ಡಿವೈಎಸ್ಪಿ ವಿಜಯ್ ಬಿರಾದಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇಲೆ ಇಲ್ಲಿನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಏಳು ಕಡೆಗಳಲ್ಲಿ ಏಕಕಾಲಕ್ಕೆ ಶನಿವಾರ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ₹3.49 ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ.</p>.<p>ದಾಳಿ ಸಂದರ್ಭದಲ್ಲಿ ₹25.50 ಲಕ್ಷ ಮೌಲ್ಯದ ನಾಲ್ಕು ನಿವೇಶನಗಳು, ಎರಡು ಸ್ವಂತ ಹೆಸರಿನಲ್ಲಿ ಹಾಗೂ ಐದು ಬೇನಾಮಿ ಹೆಸರಿನಲ್ಲಿ ನಿರ್ಮಿಸಿದ ₹2.30 ಕೋಟಿ ಮೌಲ್ಯದ ಒಟ್ಟು ಏಳು ಮನೆಗಳು, 3.39 ಎಕರೆ ಕೃಷಿ ಭೂಮಿ, ₹21.50 ಲಕ್ಷ ನಗದು, ₹23.83 ಲಕ್ಷದ 307 ಗ್ರಾಂ ಚಿನ್ನಾಭರಣ, ₹3.70 ಲಕ್ಷ ಮೌಲ್ಯದ ಬೆಳ್ಳಿ, ಒಂದು ಇನ್ನೋವಾ ಕಾರು, ಎರಡು ಬೈಕ್ ಸೇರಿದಂತೆ ಒಟ್ಟು ₹3.49 ಕೋಟಿ ಮೌಲ್ಯದ ಸ್ಥಿರ ಹಾಗೂ ಚರಾಸ್ತಿ ಪತ್ತೆಯಾಗಿದೆ.</p>.<p>ವಶಪಡಿಸಿಕೊಂಡ ಆಸ್ತಿ ಮೌಲ್ಯ ನೌಕರನ ಆದಾಯಕ್ಕಿಂತ ಶೇ 186.92ರಷ್ಟು ಅಧಿಕ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಲೋಕಾಯುಕ್ತ ಎಸ್ಪಿ ಹನುಮಂತರಾಯ ನೇತೃತ್ವದಲ್ಲಿ ರಾಯಚೂರು, ಕೊಪ್ಪಳ, ಹೊಸಪೇಟೆಯ ಲೋಕಾಯುಕ್ತ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು ಎಂದು ಗದಗ ಲೋಕಾಯುಕ್ತ ಡಿವೈಎಸ್ಪಿ ವಿಜಯ್ ಬಿರಾದಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>