ರಸ್ತೆಗಳ ಇಕ್ಕೆಲಗಳಲ್ಲಿ ಬೇವು, ಆಲ, ಅರಳಿ, ಸಿಹಿಹುಣಸೆ, ತಪಸಿ, ಹೊಂಗೆ ಸೇರಿದಂತೆ ಅಂದಾಜು ಸಾವಿರಾರು ಸಂಖ್ಯೆಯಲ್ಲಿ ಗಿಡಗಳನ್ನು ಹಚ್ಚಲಾಗಿದೆ. ಆದರೆ, ತೇವಾಂಶದ ಕೊರತೆಯಿಂದಾಗಿ ಗಿಡಗಳು ಬಾಡುತ್ತಿದ್ದವು. ಇದನ್ನು ಮನಗಂಡ ಇಲಾಖೆ ಅವುಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಟ್ಯಾಂಕರ್ ಮೂಲಕ ನೀರು ಹಾಕುತ್ತಿದೆ.