ಭಾನುವಾರ, 21 ಡಿಸೆಂಬರ್ 2025
×
ADVERTISEMENT
ADVERTISEMENT

ಮಕ್ಕಳಲ್ಲಿ ಕನ್ನಡ ಸಾಹಿತ್ಯದ ಅಭಿರುಚಿ ಬೆಳೆಸಿ: ಶಾಂತಲಿಂಗ ಸ್ವಾಮೀಜಿ

Published : 21 ಡಿಸೆಂಬರ್ 2025, 4:49 IST
Last Updated : 21 ಡಿಸೆಂಬರ್ 2025, 4:49 IST
ಫಾಲೋ ಮಾಡಿ
Comments
ಜಿಲ್ಲೆಯು ಶರಣ ಪರಂಪರೆಗೆ ಹಿರಿದಾದ ಕೊಡುಗೆ ನೀಡಿದೆ. ಮಕ್ಕಳನ್ನು ಸಂವೇದನಾಶೀಲ ವ್ಯಕ್ತಿಗಳನ್ನಾಗಿ ಮಾಡುವ ಶಕ್ತಿ ವಚನ ಸಾಹಿತ್ಯಕ್ಕೆ ಇದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಇವು ಮಾರ್ಗದರ್ಶಿಯಾಗಿವೆ.
-ಪ್ರಣತಿ ಗಡಾದ ಜಿಲ್ಲಾ ಮಕ್ಕಳ ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ
‘ಮಕ್ಕಳಿಗೆ ವಚನಗಳ ಸಾರ ತಿಳಿಸಿಕೊಡಿ’
ಮಕ್ಕಳಿಗೆ ಬಾಲ್ಯದಲ್ಲಿಯೇ ವಚನಗಳ ಸಾರ ತಿಳಿಸಿಕೊಟ್ಟರೆ; ಭವಿಷ್ಯದಲ್ಲಿ ಅವರು ಸುಸಂಸ್ಕೃತ ವ್ಯಕ್ತಿಗಳಾಗಿ ರೂಪಗೊಳ್ಳುವರು  ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿ.ಸೋಮಶೇಖರ್ ಹೇಳಿದರು. ಮಕ್ಕಳಿಗೆ ಬಾಲ್ಯದಲ್ಲಿ ಒಳ್ಳೆಯ ಸಂಸ್ಕಾರ ಸಿಗದಿದ್ದರೆ ಅದು ಅನರ್ಥಕ್ಕೆ ಕಾರಣವಾಗುತ್ತದೆ. ಹಾಗಾಗಿ ಶರಣರ ವಚನ ಸಾಹಿತ್ಯದ ಸಹಚರ್ಯ ಮಕ್ಕಳಿಗೆ ಅವಶ್ಯವಾಗಿ ಬೇಕೇ ಬೇಕು. ಮಕ್ಕಳನ್ನು ಸಂವೇದನಾಶೀಲ ವ್ಯಕ್ತಿಗಳನ್ನಾಗಿ ಮಾಡುವ ಶಕ್ತಿ ವಚನಗಳಿಗೆ ಇದೆ. ಹೀಗಾಗಿ ಇಂತಹ ಶರಣ ಸಾಹಿತ್ಯ ಸಮ್ಮೇಳನಗಳು ಮೇಲಿಂದ ಮೇಲೆ ನಡೆಯಬೇಕಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT