‘ಗ್ರಾಮದಲ್ಲಿ ಸ್ಮಶಾನ ಅಭಿವೃದ್ಧಿಪಡಿಸುವಂತೆ 7 ವರ್ಷಗಳಿಂದ ನಿರಂತರ ಪಟ್ಟಣ ಪಂಚಾಯ್ತಿ ಮತ್ತು ತಹಶೀಲ್ದಾರ್ಗೆ ಮನವಿ ಸಲ್ಲಿಸುತ್ತಾ ಬರಲಾಗಿದೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ, ಅಕ್ಕಪಕ್ಕದ ಜಮೀನಿನ ಮಾಲೀಕರ ಕೈ, ಕಾಲು ಹಿಡಿದು, ಅಲ್ಲಿ ಅಂತ್ಯಸಂಸ್ಕಾರ ಮಾಡಬೇಕಾದ ದಯನೀಯ ಸ್ಥಿತಿ ಇದೆ’ ಎಂದು ಪಟ್ಟಣ ಪಂಚಾಯ್ತಿ ಸದಸ್ಯ ಎಂ.ಎಂ. ಗಾಣಿಗೇರ ಹೇಳಿದರು.