<p><strong>ಮುಳಗುಂದ</strong> : ಸಂಸ್ಕಾರ, ಸನ್ನಡತೆ ಇದ್ದಲ್ಲಿ ಗುರುವಿನ ಕೃಪೆ ಪ್ರಾಪ್ತಿಯಾಗುತ್ತದೆ. ಇಂತಹ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಶರಣರ ಹಿತ ನುಡಿ, ಪುರಾಣ, ಪ್ರವಚನಗಳನ್ನ ಆಲಿಸಿ ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಜೀವನ ಸಾರ್ಥಕ ಆಗುತ್ತದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಸಂಸ್ಥಾನ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p><p>ಇಲ್ಲಿಗೆ ಸಮೀಪದ ನೀಲಗುಂದ ಗ್ರಾಮದ ಜ್ಞಾನಗಿರಿ ಗುದ್ನೇಶ್ವರ ಮಠದಲ್ಲಿ ಶನಿವಾರ ನಡೆದ ಮಹಾ ಶಿವರಾತ್ರಿ ಉತ್ಸವದ ಸಂತವಾಣಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.</p><p>ಬೆಳಗಾವಿ ಬಸವ ಬೆಳವಿ ಚರಂತೇಶ್ವರ ವಿರಕ್ತಮಠದ ಶರಣಬಸವ ದೇವರು ಮಾತನಾಡಿ, ತ್ರಿಕಾಲ ಸತ್ಯವನ್ನ ಗುದ್ನೇಶ್ವರ ಶ್ರೀಗಳು ಹೇಳುತ್ತಿದ್ದರು. ಅಂತಹ ಜ್ಞಾನ, ಶಕ್ತಿ ಅವರಲ್ಲಿ ಇತ್ತು ಎಂದು ಹೇಳಿದರು.</p><p>ಹೊಸಹಳ್ಳಿ ಬೂದೀಶ್ವರ ಮಠದ ಬೂದೀಶ್ವರ ಸ್ವಾಮೀಜಿ, ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮಿಗಳು ಮಾತನಾಡಿದರು. ಮುಖಂಡರಾದ ರಾಮಣ್ಣ ಕಮಾಜಿ, ಡಾ. ಎಸ್.ಸಿ.ಚವಡಿ, ಸಂಜಯ ನೀಲಗುಂದ, ಎನ್.ಎಂ.ಅರಮನಿ ಮೊದಲಾದವರು ಇದ್ದರು. ದಿವ್ಯ ಚೇತನ ಶಾಲೆ ಮಕ್ಕಳಿಂದ ಮಲ್ಲಕಂಬ ಪ್ರದರ್ಶನ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಗುಂದ</strong> : ಸಂಸ್ಕಾರ, ಸನ್ನಡತೆ ಇದ್ದಲ್ಲಿ ಗುರುವಿನ ಕೃಪೆ ಪ್ರಾಪ್ತಿಯಾಗುತ್ತದೆ. ಇಂತಹ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಶರಣರ ಹಿತ ನುಡಿ, ಪುರಾಣ, ಪ್ರವಚನಗಳನ್ನ ಆಲಿಸಿ ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಜೀವನ ಸಾರ್ಥಕ ಆಗುತ್ತದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಸಂಸ್ಥಾನ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p><p>ಇಲ್ಲಿಗೆ ಸಮೀಪದ ನೀಲಗುಂದ ಗ್ರಾಮದ ಜ್ಞಾನಗಿರಿ ಗುದ್ನೇಶ್ವರ ಮಠದಲ್ಲಿ ಶನಿವಾರ ನಡೆದ ಮಹಾ ಶಿವರಾತ್ರಿ ಉತ್ಸವದ ಸಂತವಾಣಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.</p><p>ಬೆಳಗಾವಿ ಬಸವ ಬೆಳವಿ ಚರಂತೇಶ್ವರ ವಿರಕ್ತಮಠದ ಶರಣಬಸವ ದೇವರು ಮಾತನಾಡಿ, ತ್ರಿಕಾಲ ಸತ್ಯವನ್ನ ಗುದ್ನೇಶ್ವರ ಶ್ರೀಗಳು ಹೇಳುತ್ತಿದ್ದರು. ಅಂತಹ ಜ್ಞಾನ, ಶಕ್ತಿ ಅವರಲ್ಲಿ ಇತ್ತು ಎಂದು ಹೇಳಿದರು.</p><p>ಹೊಸಹಳ್ಳಿ ಬೂದೀಶ್ವರ ಮಠದ ಬೂದೀಶ್ವರ ಸ್ವಾಮೀಜಿ, ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮಿಗಳು ಮಾತನಾಡಿದರು. ಮುಖಂಡರಾದ ರಾಮಣ್ಣ ಕಮಾಜಿ, ಡಾ. ಎಸ್.ಸಿ.ಚವಡಿ, ಸಂಜಯ ನೀಲಗುಂದ, ಎನ್.ಎಂ.ಅರಮನಿ ಮೊದಲಾದವರು ಇದ್ದರು. ದಿವ್ಯ ಚೇತನ ಶಾಲೆ ಮಕ್ಕಳಿಂದ ಮಲ್ಲಕಂಬ ಪ್ರದರ್ಶನ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>