<p><strong>ಶಿರಹಟ್ಟಿ (ಗದಗ ಜಿಲ್ಲೆ):</strong> ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಮತ್ತು ಅವರ ಮೂವರು ಬೆಂಬಲಿಗರು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಚನ್ನಪಟ್ಟಣ ಗ್ರಾಮದ ನಿವಾಸಿ ನಾಮದೇವ ಮಾಂಡ್ರೆ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. </p>.<p>‘ಡಿ.7ರಂದು ದೂರವಾಣಿ ಮೂಲಕ ಕರೆ ಮಾಡಿದ್ದ ಶಾಸಕರು, ‘ನಿನ್ನ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು ಮಾಡುತ್ತೇನೆ’ ಎಂದು ಹೆದರಿಸಿದ್ದಾರೆ. ತಪ್ಪಾಗಿದೆ ಎಂದು ಕೇಳಿಕೊಂಡರೂ ಕೇಳದೆ; ಪದೇ ಪದೇ ಕರೆ ಮಾಡಿ ಹೆದರಿಸುತ್ತಿದ್ದಾರೆ. ಬೆಂಬಲಿಗರಾದ ರಾಜು ಖಾನಪ್ಪನವರ, ಸಂತೋಷ ಕುರಿ, ಫಕೀರೇಶ ರಟ್ಟಿಹಳ್ಳಿ ಅವರಿಂದ ನನ್ನ ಜೀವಕ್ಕೆ ಅಪಾಯವಿದೆ’ ಎಂದು ನಾಮದೇವ ಮಾಂಡ್ರೆ ದೂರು ನೀಡಿದ್ದಾರೆ.</p>.<p>ಪ್ರತಿದೂರು ದಾಖಲು: ಇದೇ ವಿಷಯಕ್ಕೆ ಸಂಬಂಧಿಸಿದಂತೆ ಜಾನು ಗುರಪ್ಪ ಲಮಾಣಿ ಎಂಬುವರು ನಾಮದೇವ ಮಾಂಡ್ರೆ ವಿರುದ್ಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ.</p>.<p>‘ಶಿರಹಟ್ಟಿ ಪ್ರವಾಸಿ ಮಂದಿರದಲ್ಲಿ ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಸ್ನೇಹಿತರೊಂದಿಗೆ ಚರ್ಚೆ ಮಾಡುತ್ತಿದ್ದಾಗ ನಾಮದೇವ ಮಾಂಡ್ರೆ ಲಮಾಣಿ ಸಮಾಜದ ಬಗ್ಗೆ ಕೀಳಾಗಿ ಮಾತನಾಡಿ, ಹಲ್ಲೆ ನಡೆಸಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಹಟ್ಟಿ (ಗದಗ ಜಿಲ್ಲೆ):</strong> ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಮತ್ತು ಅವರ ಮೂವರು ಬೆಂಬಲಿಗರು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಚನ್ನಪಟ್ಟಣ ಗ್ರಾಮದ ನಿವಾಸಿ ನಾಮದೇವ ಮಾಂಡ್ರೆ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. </p>.<p>‘ಡಿ.7ರಂದು ದೂರವಾಣಿ ಮೂಲಕ ಕರೆ ಮಾಡಿದ್ದ ಶಾಸಕರು, ‘ನಿನ್ನ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು ಮಾಡುತ್ತೇನೆ’ ಎಂದು ಹೆದರಿಸಿದ್ದಾರೆ. ತಪ್ಪಾಗಿದೆ ಎಂದು ಕೇಳಿಕೊಂಡರೂ ಕೇಳದೆ; ಪದೇ ಪದೇ ಕರೆ ಮಾಡಿ ಹೆದರಿಸುತ್ತಿದ್ದಾರೆ. ಬೆಂಬಲಿಗರಾದ ರಾಜು ಖಾನಪ್ಪನವರ, ಸಂತೋಷ ಕುರಿ, ಫಕೀರೇಶ ರಟ್ಟಿಹಳ್ಳಿ ಅವರಿಂದ ನನ್ನ ಜೀವಕ್ಕೆ ಅಪಾಯವಿದೆ’ ಎಂದು ನಾಮದೇವ ಮಾಂಡ್ರೆ ದೂರು ನೀಡಿದ್ದಾರೆ.</p>.<p>ಪ್ರತಿದೂರು ದಾಖಲು: ಇದೇ ವಿಷಯಕ್ಕೆ ಸಂಬಂಧಿಸಿದಂತೆ ಜಾನು ಗುರಪ್ಪ ಲಮಾಣಿ ಎಂಬುವರು ನಾಮದೇವ ಮಾಂಡ್ರೆ ವಿರುದ್ಧ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ.</p>.<p>‘ಶಿರಹಟ್ಟಿ ಪ್ರವಾಸಿ ಮಂದಿರದಲ್ಲಿ ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಸ್ನೇಹಿತರೊಂದಿಗೆ ಚರ್ಚೆ ಮಾಡುತ್ತಿದ್ದಾಗ ನಾಮದೇವ ಮಾಂಡ್ರೆ ಲಮಾಣಿ ಸಮಾಜದ ಬಗ್ಗೆ ಕೀಳಾಗಿ ಮಾತನಾಡಿ, ಹಲ್ಲೆ ನಡೆಸಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>