ನಗರದ ಖಾಸಗಿ ಹೋಟೆಲ್ನಲ್ಲಿ ಭಾನುವಾರ ನಡೆದ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದ 31 ಜಿಲ್ಲೆಗಳ ಪೈಕಿ ಕುರುಬ ಸಮಾಜ ಈಶ್ವರಪ್ಪನವರ ಪರವಾಗಿ ಗಟ್ಟಿಧ್ವನಿ ಎತ್ತಿದ್ದು ಹಾವೇರಿ-ಗದಗ ಕ್ಷೇತ್ರದಲ್ಲಿ ಮಾತ್ರ. ರಾಜ್ಯದ ಹಲವು ಕ್ಷೇತ್ರದಲ್ಲಿ ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಟಿಕೆಟ್ ಕೊಡಿಸಿದ್ದಾರೆ. ಆದರೆ, ಈಶ್ವರಪ್ಪನವರ ಮಗನಿಗೆ ಯಾಕೆ ಟಿಕೆಟ್ ನೀಡಲಿಲ್ಲ’ ಎಂದು ಪ್ರಶ್ನಿಸಿದರು.