<p><strong>ಗದಗ:</strong> ‘ಆಧುನೀಕತೆಯ ಇಂದಿನ ದಿನಗಳಲ್ಲಿ ಒತ್ತಡದ ಬದುಕನ್ನು ಅನುಭವಿಸುವಂತಾಗಿದೆ. ಅವಸರದ ಜೀವನದಿಂದಾಗಿ ನೆಮ್ಮದಿ ಮರೆಯಾಗುತ್ತಿದೆ’ ಎಂದು ಗದಗ ಶಿವಾನಂದ ಮಠದ ಶಿವಶರಣೆ ಮುಕ್ತಾತಾಯಿ ಹೇಳಿದರು.</p>.<p>ಇಲ್ಲಿನ ವಿವೇಕಾನಂದ ನಗರದ ಕಾಶೀ ವಿಶ್ವನಾಥ ದೇವಸ್ಥಾನದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಭವನದಲ್ಲಿ ನಡೆದ ಜೀವನ ದರ್ಶನ 54ನೇ ಮಾಲಿಕೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಒತ್ತಡಗಳಿಂದ ಒಂದಿಷ್ಟು ನೆಮ್ಮದಿಯ ಬದುಕು ಸಾಗಿಸಲು ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಒಂದಿಷ್ಟು ಯೋಗ, ಧ್ಯಾನ, ಸತ್ಸಂಗದಲ್ಲಿ ಚಿಂತನೆ ನಡೆಸಬೇಕು ಎಂದರು.</p>.<p>ದಿನಕ್ಕೊಮ್ಮೆಯಾದರೂ ಭಗವಂತನ ನಾಮಸ್ಮರಣೆಗೆ ಸ್ವಲ್ಪ ಸಮಯ ಮಿಸಲಿಡಬೇಕು, ಮಹಾತ್ಮರ ಅನುಭಾವದ ನುಡಿಗಳನ್ನು ಆಲಿಸಬೇಕು. ಅಂತರಂಗ ಶುದ್ಧಿ ಬಹಿರಂಗವನ್ನು ಶುದ್ಧಿಯಾಗಿಟ್ಟುಕೊಂಡು ಮನೆ-ಮನವನ್ನು ಸ್ವಚ್ಚವಾಗಿಟ್ಟುಕೊಂಡಲ್ಲಿ ಬದುಕು ಸನ್ಮಾರ್ಗದಲ್ಲಿ ಮುನ್ನಡೆಯುವುದು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಎ.ಟಿ.ನರೇಗಲ್ಲ ಮಾತನಾಡಿ, ‘ಸಮಿತಿಯ ಹಿಂದಿನ ಪದಾಧಿಕಾರಿಗಳು ಮುನ್ನಡೆಸಿಕೊಂಡು ಬಂದಿರುವ ಜೀವನ ದರ್ಶನ ಮಾಲಿಕೆ ಈ ಭಾಗದ ಜನತೆಯ ಬದುಕಿನಲ್ಲಿ, ಜೀವನಶೈಲಿಯಲ್ಲಿ ಗುಣಾತ್ಮಕ ಬದಲಾವಣೆ ತಂದಿದೆ’ ಎಂದರು.</p>.<p>ಸಮಿತಿಯ ಗೌರವಾಧ್ಯಕ್ಷ ಜಿ.ಜಿ.ಕುಲಕರ್ಣಿ, ಉಪಾಧ್ಯಕ್ಷ ಆರ್.ಆರ್.ಕಾಶಪ್ಪನವರ ವೇದಿಕೆಯಲ್ಲಿದ್ದರು. ಸಮಿತಿಯ ಕಾರ್ಯದರ್ಶಿ ಕೆ.ಪಿ.ಗುಳಗೌಡ್ರ ಸ್ವಾಗತಿಸಿದರು. ಕೋಶಾಧ್ಯಕ್ಷ ಎಸ್.ಎಸ್.ಪಾಳೇಗಾರ ನಿರೂಪಿಸಿದರು.</p>.<p>ಸಮಿತಿಯ ನಿರ್ದೇಶಕರಾದ ಆರ್.ಬಿ.ಅಂದಪ್ಪನವರ, ವಿ.ಆರ್.ಗೊಬ್ಬರಗುಂಪಿ, ಸಾಗರ ಬಿಂಗಿ, ರೇಣುಕಾ ಕರಿಗೌಡರ, ಸಂಗೀತಾ ಕುರಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಆಧುನೀಕತೆಯ ಇಂದಿನ ದಿನಗಳಲ್ಲಿ ಒತ್ತಡದ ಬದುಕನ್ನು ಅನುಭವಿಸುವಂತಾಗಿದೆ. ಅವಸರದ ಜೀವನದಿಂದಾಗಿ ನೆಮ್ಮದಿ ಮರೆಯಾಗುತ್ತಿದೆ’ ಎಂದು ಗದಗ ಶಿವಾನಂದ ಮಠದ ಶಿವಶರಣೆ ಮುಕ್ತಾತಾಯಿ ಹೇಳಿದರು.</p>.<p>ಇಲ್ಲಿನ ವಿವೇಕಾನಂದ ನಗರದ ಕಾಶೀ ವಿಶ್ವನಾಥ ದೇವಸ್ಥಾನದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಭವನದಲ್ಲಿ ನಡೆದ ಜೀವನ ದರ್ಶನ 54ನೇ ಮಾಲಿಕೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಒತ್ತಡಗಳಿಂದ ಒಂದಿಷ್ಟು ನೆಮ್ಮದಿಯ ಬದುಕು ಸಾಗಿಸಲು ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಒಂದಿಷ್ಟು ಯೋಗ, ಧ್ಯಾನ, ಸತ್ಸಂಗದಲ್ಲಿ ಚಿಂತನೆ ನಡೆಸಬೇಕು ಎಂದರು.</p>.<p>ದಿನಕ್ಕೊಮ್ಮೆಯಾದರೂ ಭಗವಂತನ ನಾಮಸ್ಮರಣೆಗೆ ಸ್ವಲ್ಪ ಸಮಯ ಮಿಸಲಿಡಬೇಕು, ಮಹಾತ್ಮರ ಅನುಭಾವದ ನುಡಿಗಳನ್ನು ಆಲಿಸಬೇಕು. ಅಂತರಂಗ ಶುದ್ಧಿ ಬಹಿರಂಗವನ್ನು ಶುದ್ಧಿಯಾಗಿಟ್ಟುಕೊಂಡು ಮನೆ-ಮನವನ್ನು ಸ್ವಚ್ಚವಾಗಿಟ್ಟುಕೊಂಡಲ್ಲಿ ಬದುಕು ಸನ್ಮಾರ್ಗದಲ್ಲಿ ಮುನ್ನಡೆಯುವುದು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಎ.ಟಿ.ನರೇಗಲ್ಲ ಮಾತನಾಡಿ, ‘ಸಮಿತಿಯ ಹಿಂದಿನ ಪದಾಧಿಕಾರಿಗಳು ಮುನ್ನಡೆಸಿಕೊಂಡು ಬಂದಿರುವ ಜೀವನ ದರ್ಶನ ಮಾಲಿಕೆ ಈ ಭಾಗದ ಜನತೆಯ ಬದುಕಿನಲ್ಲಿ, ಜೀವನಶೈಲಿಯಲ್ಲಿ ಗುಣಾತ್ಮಕ ಬದಲಾವಣೆ ತಂದಿದೆ’ ಎಂದರು.</p>.<p>ಸಮಿತಿಯ ಗೌರವಾಧ್ಯಕ್ಷ ಜಿ.ಜಿ.ಕುಲಕರ್ಣಿ, ಉಪಾಧ್ಯಕ್ಷ ಆರ್.ಆರ್.ಕಾಶಪ್ಪನವರ ವೇದಿಕೆಯಲ್ಲಿದ್ದರು. ಸಮಿತಿಯ ಕಾರ್ಯದರ್ಶಿ ಕೆ.ಪಿ.ಗುಳಗೌಡ್ರ ಸ್ವಾಗತಿಸಿದರು. ಕೋಶಾಧ್ಯಕ್ಷ ಎಸ್.ಎಸ್.ಪಾಳೇಗಾರ ನಿರೂಪಿಸಿದರು.</p>.<p>ಸಮಿತಿಯ ನಿರ್ದೇಶಕರಾದ ಆರ್.ಬಿ.ಅಂದಪ್ಪನವರ, ವಿ.ಆರ್.ಗೊಬ್ಬರಗುಂಪಿ, ಸಾಗರ ಬಿಂಗಿ, ರೇಣುಕಾ ಕರಿಗೌಡರ, ಸಂಗೀತಾ ಕುರಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>