<p><strong>ಗಜೇಂದ್ರಗಡ</strong>: ಪಟ್ಟಣದ ತಹಶೀಲ್ದಾರ್ ಕಚೇರಿ ಕಾಂಪೌಂಡ್ಗೆ ಹೊಂದಿಕೊಂಡು ಇಟ್ಟಿದ್ದ ಅನಧಿಕೃತ ಗೂಡಂಗಡಿಗಳನ್ನು ಪುರಸಭೆ ಅಧಿಕಾರಿಗಳು ಭಾನುವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.</p>.<p>ತಹಶೀಲ್ದಾರರ ಕಾರ್ಯಾಲಯದ ಸುತ್ತಮುತ್ತ 30ಕ್ಕೂ ಹೆಚ್ಚು ಅನಧಿಕೃತ ಗೂಡಂಗಡಿಗಳಿದ್ದು, ಪೊಲೀಸರ ಭಧ್ರತೆಯಲ್ಲಿ ತೆರವು ಕಾರ್ಯ ನಡೆಸಿದರು. ಕೆಲ ಅಂಗಡಿ ಮಾಲೀಕರು ಸ್ವಯಂಪ್ರೇರಣೆಯಿಂದ ಅಂಗಡಿ ತೆರವು ಮಾಡಿದರು. ಇನ್ನೂ ಕೆಲ ಅಂಗಡಿಗಳನ್ನು ಪುರಸಭೆ ಜೆಸಿಬಿ ಮೂಲಕ ತೆರವು ಮಾಡಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧಿಕಾರಿಗಳು ಹಾಗೂ ಕೆಲ ವ್ಯಾಪಾರಸ್ಥರ ನಡುವೆ ವಾಗ್ವಾದ ನಡೆಯಿತು.</p>.<p>ತಹಶೀಲ್ದಾರ್ ಕಚೇರಿ ಕಾಂಪೌಂಡ್ ಸುತ್ತ ಸುಮಾರು 30ಕ್ಕೂ ಹೆಚ್ಚು ಅನಧಿಕೃತ ಗೂಡಂಗಡಿಗಳಿವೆ. ತಹಶೀಲ್ದಾರ್ ಕಚೇರಿಗೆ ಹಳ್ಳಿಗಳಿಂದ ನಿತ್ಯ ನೂರಾರು ಜನರು ಬರುತ್ತಾರೆ. ಗೂಡಂಗಡಿಗಳಿಂದ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಹಾಗೂ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕಾರಣ ಈಗಾಗಲೇ 17 ಅನಧಿಕೃತ ಗೂಡಂಗಡಿ, 6 ತಳ್ಳು ಗಾಡಿಗಳನ್ನು ತೆರವುಗೊಳಿಸಲಾಗಿದೆ. ಉಳಿದ ಅಂಗಡಿಕಾರರು ಒಂದು ದಿನ ಕಾಲಾವಕಾಶ ಕೇಳಿದ್ದಾರೆ. ಅಲ್ಲದೇ ಕಾಲಕಾಲೇಶ್ವರ ವೃತ್ತದಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತಿರುವ ಎಲ್ಲ ಅನಧಿಕೃತ ಅಂಗಡಿಗಳನ್ನು ತೆರವು ಕಾರ್ಯಾಚರಣೆ ಮುಂದುವರಿಯಲಿದೆʼ ಎಂದು ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಹೇಳಿದರು.</p>.<p>ಕಾರ್ಯಾಚರಣೆ ಸಂದರ್ಭದಲ್ಲಿ ಪುರಸಭೆ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ</strong>: ಪಟ್ಟಣದ ತಹಶೀಲ್ದಾರ್ ಕಚೇರಿ ಕಾಂಪೌಂಡ್ಗೆ ಹೊಂದಿಕೊಂಡು ಇಟ್ಟಿದ್ದ ಅನಧಿಕೃತ ಗೂಡಂಗಡಿಗಳನ್ನು ಪುರಸಭೆ ಅಧಿಕಾರಿಗಳು ಭಾನುವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.</p>.<p>ತಹಶೀಲ್ದಾರರ ಕಾರ್ಯಾಲಯದ ಸುತ್ತಮುತ್ತ 30ಕ್ಕೂ ಹೆಚ್ಚು ಅನಧಿಕೃತ ಗೂಡಂಗಡಿಗಳಿದ್ದು, ಪೊಲೀಸರ ಭಧ್ರತೆಯಲ್ಲಿ ತೆರವು ಕಾರ್ಯ ನಡೆಸಿದರು. ಕೆಲ ಅಂಗಡಿ ಮಾಲೀಕರು ಸ್ವಯಂಪ್ರೇರಣೆಯಿಂದ ಅಂಗಡಿ ತೆರವು ಮಾಡಿದರು. ಇನ್ನೂ ಕೆಲ ಅಂಗಡಿಗಳನ್ನು ಪುರಸಭೆ ಜೆಸಿಬಿ ಮೂಲಕ ತೆರವು ಮಾಡಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧಿಕಾರಿಗಳು ಹಾಗೂ ಕೆಲ ವ್ಯಾಪಾರಸ್ಥರ ನಡುವೆ ವಾಗ್ವಾದ ನಡೆಯಿತು.</p>.<p>ತಹಶೀಲ್ದಾರ್ ಕಚೇರಿ ಕಾಂಪೌಂಡ್ ಸುತ್ತ ಸುಮಾರು 30ಕ್ಕೂ ಹೆಚ್ಚು ಅನಧಿಕೃತ ಗೂಡಂಗಡಿಗಳಿವೆ. ತಹಶೀಲ್ದಾರ್ ಕಚೇರಿಗೆ ಹಳ್ಳಿಗಳಿಂದ ನಿತ್ಯ ನೂರಾರು ಜನರು ಬರುತ್ತಾರೆ. ಗೂಡಂಗಡಿಗಳಿಂದ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಹಾಗೂ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕಾರಣ ಈಗಾಗಲೇ 17 ಅನಧಿಕೃತ ಗೂಡಂಗಡಿ, 6 ತಳ್ಳು ಗಾಡಿಗಳನ್ನು ತೆರವುಗೊಳಿಸಲಾಗಿದೆ. ಉಳಿದ ಅಂಗಡಿಕಾರರು ಒಂದು ದಿನ ಕಾಲಾವಕಾಶ ಕೇಳಿದ್ದಾರೆ. ಅಲ್ಲದೇ ಕಾಲಕಾಲೇಶ್ವರ ವೃತ್ತದಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತಿರುವ ಎಲ್ಲ ಅನಧಿಕೃತ ಅಂಗಡಿಗಳನ್ನು ತೆರವು ಕಾರ್ಯಾಚರಣೆ ಮುಂದುವರಿಯಲಿದೆʼ ಎಂದು ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಹೇಳಿದರು.</p>.<p>ಕಾರ್ಯಾಚರಣೆ ಸಂದರ್ಭದಲ್ಲಿ ಪುರಸಭೆ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>