<p><strong>ಮುಂಡರಗಿ</strong>: ‘ರಾಜ್ಯದ ಮುಖ್ಯಮಂತ್ರಿಯಾಗಿ ಸುದೀರ್ಘ ಕಾಲ ಆಡಳಿತ ನಡೆಸಿ ದಾಖಲೆ ನಿರ್ಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಗೊಂಡರು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಡಿ. ಮೋರನಾಳ ಹರ್ಷ ವ್ಯಕ್ತಪಡಿಸಿದರು.</p>.<p>ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ಕಾರ್ಯಕರ್ತರು ಮಂಗಳವಾರ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ಅಭಿನಂದನಾ ಸಮಾರಂಭ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಮು ಕಲಾಲ ಮಾತನಾಡಿ, ‘ರಾಜ್ಯದ ಮುಖ್ಯಮಂತ್ರಿಯಾಗಿ ಅಭಿವೃದ್ಧಿ ಹಾಗೂ ಪಾರದರ್ಶಕ ಆಡಳಿತ ನಡೆಸಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ’ ಎಂದರು.</p>.<p>ಮುಖಂಡರಾದ ಚಂದ್ರಕಾಂತ ಉಳ್ಳಾಗಡ್ಡಿ, ಡಾ.ಬಿ.ಎಸ್. ಮೇಟಿ ಮಾತನಾಡಿದರು. ನಬಿಸಾಬ್ ಕೆಲೂರ, ಯಲ್ಲಪ್ಪ ಹೊಂಬಳಗಟ್ಟಿ, ಮುದಿಯಪ್ಪ ಕುಂಬಾರ, ದಶರಥ ಕುರಿ, ಗೋಣೇಶ ಮೇವುಂಡಿ, ದುದ್ದುಸಾಬ್ ಕಾತರಕಿ, ರಾಜಾಭಕ್ಷಿ ಬೆಟಗೇರಿ, ಲಕ್ಷ್ಯಪ್ಪ ಮಲ್ಲಾರ್ಜಿ, ರಾಮು ಭಜಂತ್ರಿ, ಪೀರವಾಲೆ, ಮುತ್ತು ಬಳ್ಳಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ‘ರಾಜ್ಯದ ಮುಖ್ಯಮಂತ್ರಿಯಾಗಿ ಸುದೀರ್ಘ ಕಾಲ ಆಡಳಿತ ನಡೆಸಿ ದಾಖಲೆ ನಿರ್ಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಗೊಂಡರು’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಡಿ. ಮೋರನಾಳ ಹರ್ಷ ವ್ಯಕ್ತಪಡಿಸಿದರು.</p>.<p>ಪಟ್ಟಣದ ಕೋಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ಕಾರ್ಯಕರ್ತರು ಮಂಗಳವಾರ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ಅಭಿನಂದನಾ ಸಮಾರಂಭ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಮು ಕಲಾಲ ಮಾತನಾಡಿ, ‘ರಾಜ್ಯದ ಮುಖ್ಯಮಂತ್ರಿಯಾಗಿ ಅಭಿವೃದ್ಧಿ ಹಾಗೂ ಪಾರದರ್ಶಕ ಆಡಳಿತ ನಡೆಸಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ’ ಎಂದರು.</p>.<p>ಮುಖಂಡರಾದ ಚಂದ್ರಕಾಂತ ಉಳ್ಳಾಗಡ್ಡಿ, ಡಾ.ಬಿ.ಎಸ್. ಮೇಟಿ ಮಾತನಾಡಿದರು. ನಬಿಸಾಬ್ ಕೆಲೂರ, ಯಲ್ಲಪ್ಪ ಹೊಂಬಳಗಟ್ಟಿ, ಮುದಿಯಪ್ಪ ಕುಂಬಾರ, ದಶರಥ ಕುರಿ, ಗೋಣೇಶ ಮೇವುಂಡಿ, ದುದ್ದುಸಾಬ್ ಕಾತರಕಿ, ರಾಜಾಭಕ್ಷಿ ಬೆಟಗೇರಿ, ಲಕ್ಷ್ಯಪ್ಪ ಮಲ್ಲಾರ್ಜಿ, ರಾಮು ಭಜಂತ್ರಿ, ಪೀರವಾಲೆ, ಮುತ್ತು ಬಳ್ಳಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>