<p>ನರಗುಂದ: ‘ಪೀಠ, ಸಿಂಹಾಸನವನ್ನು ಧಿಕ್ಕರಿಸಿ ವೈಭವೀಕರಣದ ವ್ಯವಸ್ಥೆಗೆ ತಿಲಾಂಜಲಿ ಹಾಡಿದವರು ಗದಗ ತೋಂಟದಾರ್ಯ ಮಠದ ಲಿಂ.ಸಿದ್ಧಲಿಂಗ ಶ್ರೀಗಳ ತತ್ವಗಳು ಚಿರಂತನ’ ಎಂದು</p>.<p>ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಎಚ್.ತಿಗಡಿ ಹೇಳಿದರು.</p>.<p>ತಾಲ್ಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಬುಧವಾರ ನಡೆದ 351ನೇ ಮಾಸಿಕ ಶಿವಾನುಭವ ಹಾಗೂ ತೋಂಟದ ಸಿದ್ಧಲಿಂಗ ಶ್ರೀಗಳ 5ನೇ ಪುಣ್ಯಸ್ಮರಣೋತ್ಸವದಲ್ಲಿ ಮಾತನಾಡಿದರು.</p>.<p>‘ಅಭಿನವ ಬಸವಣ್ಣನಂತಿದ್ದ ಸಿದ್ಧಲಿಂಗ ಶ್ರೀಗಳು ಪ್ರಗತಿಪರ ಚಿಂತಕರು. ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಆ ಮೂಲಕ ಲಕ್ಷಾಂತರ ಬಡ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ತ್ರಿವಿಧ ದಾಸೋಹದ ಮೂಲಕ ಗದುಗಿನ ಹೆಸರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಸರಿಸಿದ ಕೀರ್ತಿ ಪೂಜ್ಯರಿಗೆ ಸಲ್ಲುತ್ತದೆ. ಅಪ್ಪಟ ಬಸವ ತತ್ವದ ದಂಡನಾಯಕರಾಗಿದ್ದ ಪೂಜ್ಯರು ಬಸವಾಚರಣೆಯನ್ನು ಅಕ್ಷರಶಃ ಪಾಲಿಸಿದವರು’ ಎಂದರು.</p>.<p>ಶಾಂತಲಿಂಗ ಶ್ರೀ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.</p>.<p>ಪ್ರಾಥಮಿಕ ವಿಭಾಗದಲ್ಲಿ ಉದ್ದಜಿಗಿತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಅಂಜಿತಾ ಚಲವಾದಿಯನ್ನು ಮಠದಿಂದ ಸತ್ಕರಿಸಲಾಯಿತು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅದ್ಯಕ್ಷ ಚೆನ್ನಬಸಪ್ಪ ಕಂಠಿ, ಜೆ.ಆರ್.ಕದಂ, ಸಂಗಪ್ಪ ಪೂಜಾರ, ಮುಖ್ಯಶಿಕ್ಷಕ ಜಿ.ಎಚ್ ಕಾಂಬಳೆ, ಪಿ.ಎಸ್.ಅಣ್ಣಿಗೇರಿ, ಆರ್.ಬಿ.ಚಿನಿವಾಲರ, ಮಹಾಂತೇಶ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಗುಂದ: ‘ಪೀಠ, ಸಿಂಹಾಸನವನ್ನು ಧಿಕ್ಕರಿಸಿ ವೈಭವೀಕರಣದ ವ್ಯವಸ್ಥೆಗೆ ತಿಲಾಂಜಲಿ ಹಾಡಿದವರು ಗದಗ ತೋಂಟದಾರ್ಯ ಮಠದ ಲಿಂ.ಸಿದ್ಧಲಿಂಗ ಶ್ರೀಗಳ ತತ್ವಗಳು ಚಿರಂತನ’ ಎಂದು</p>.<p>ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಎಚ್.ತಿಗಡಿ ಹೇಳಿದರು.</p>.<p>ತಾಲ್ಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಬುಧವಾರ ನಡೆದ 351ನೇ ಮಾಸಿಕ ಶಿವಾನುಭವ ಹಾಗೂ ತೋಂಟದ ಸಿದ್ಧಲಿಂಗ ಶ್ರೀಗಳ 5ನೇ ಪುಣ್ಯಸ್ಮರಣೋತ್ಸವದಲ್ಲಿ ಮಾತನಾಡಿದರು.</p>.<p>‘ಅಭಿನವ ಬಸವಣ್ಣನಂತಿದ್ದ ಸಿದ್ಧಲಿಂಗ ಶ್ರೀಗಳು ಪ್ರಗತಿಪರ ಚಿಂತಕರು. ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಆ ಮೂಲಕ ಲಕ್ಷಾಂತರ ಬಡ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ತ್ರಿವಿಧ ದಾಸೋಹದ ಮೂಲಕ ಗದುಗಿನ ಹೆಸರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಸರಿಸಿದ ಕೀರ್ತಿ ಪೂಜ್ಯರಿಗೆ ಸಲ್ಲುತ್ತದೆ. ಅಪ್ಪಟ ಬಸವ ತತ್ವದ ದಂಡನಾಯಕರಾಗಿದ್ದ ಪೂಜ್ಯರು ಬಸವಾಚರಣೆಯನ್ನು ಅಕ್ಷರಶಃ ಪಾಲಿಸಿದವರು’ ಎಂದರು.</p>.<p>ಶಾಂತಲಿಂಗ ಶ್ರೀ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.</p>.<p>ಪ್ರಾಥಮಿಕ ವಿಭಾಗದಲ್ಲಿ ಉದ್ದಜಿಗಿತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಅಂಜಿತಾ ಚಲವಾದಿಯನ್ನು ಮಠದಿಂದ ಸತ್ಕರಿಸಲಾಯಿತು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅದ್ಯಕ್ಷ ಚೆನ್ನಬಸಪ್ಪ ಕಂಠಿ, ಜೆ.ಆರ್.ಕದಂ, ಸಂಗಪ್ಪ ಪೂಜಾರ, ಮುಖ್ಯಶಿಕ್ಷಕ ಜಿ.ಎಚ್ ಕಾಂಬಳೆ, ಪಿ.ಎಸ್.ಅಣ್ಣಿಗೇರಿ, ಆರ್.ಬಿ.ಚಿನಿವಾಲರ, ಮಹಾಂತೇಶ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>