<p><strong>ಮುಳಗುಂದ</strong>: ಇಲ್ಲಿನ ಸಿದ್ಧೇಶ್ವರ ದೇವಾಲಯವು ಐತಿಹಾಸಿಕ ಪರಂಪರೆಯನ್ನು ಹೊಂದಿದೆ. ಯುಗಾದಿ ದಿನ ಸೂರ್ಯಾಸ್ತದ ಸಮಯದಲ್ಲಿ ದೇವಾಲಯದ ಮೂರು ಮಂಟಪಗಳನ್ನು ಪ್ರವೇಶಿಸಿ ಗರ್ಭಗುಡಿಯಲ್ಲಿರುವ ಸಿದ್ಧೇಶ್ವರ ಲಿಂಗದ ಮೇಲೆ ನೇರವಾಗಿ ಸೂರ್ಯರಶ್ಮಿ ಸ್ಪರ್ಶಿಸುವುದು ಇಲ್ಲಿನ ವಿಶೇಷ.</p>.<p>ಬೆಳ್ವೊಲ 300 ಪ್ರದೇಶದ ವ್ಯಾಪ್ತಿಯ ಆಡಳಿತ ವಿಭಾಗದ ರಾಜಧಾನಿಯಾಗಿದ್ದ ಮುಳಗುಂದ, ಐತಿಹಾಸಿಕ ಪ್ರಸಿದ್ಧ ಶಿಲ್ಪ ಕಲೆಯ ಕೆತ್ತನೆಯಲ್ಲಿ ನಿರ್ಮಾಣವಾದ ದೇವಾಲಯಗಳನ್ನು ಒಳಗೊಂಡಿದ್ದು, ಊರಿನ ದಕ್ಷಿಣ ದಿಕ್ಕಿನ ಪ್ರವೇಶದ ಅಗಸಿ ಬಾಗಿಲಿನ ಹತ್ತಿರವಿರುವ ಅತ್ಯುತ್ತಮ ಕಲಾ ಕುಸುರಿಯ ಕೆತ್ತನೆಯ ಕಲೆಯನ್ನೊಳಗೊಂಡಿದೆ. ದೇವಾಲಯದ ಒಳಭಾಗದಲ್ಲಿ ಮೂರು ಗರ್ಭಗುಡಿಗಳಿವೆ. ಪ್ರತಿಯೊಂದರಲ್ಲೂ ಈಶ್ವರ ಲಿಂಗಗಳನ್ನು ಪ್ರತಿಷ್ಠಾಪಿಸಲಾಗಿದೆ. ಈ ದೇವಾಲಯವನ್ನು ಹೊಯ್ಸಳರ ಕಾಲದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಇತಿಹಾಸದ ಪುಟಗಳಲ್ಲಿ ಉಲ್ಲೇಖಿಸಲಾಗಿದೆ.</p>.<p>ಈ ಅಪರೂಪದ ದೇವಾಲಯವು ಕಪ್ಪು ಶಿಲೆಯಲ್ಲಿ ನಿರ್ಮಿತವಾಗಿದ್ದು, ಕಟ್ಟಡದ ಕೆಳ ಹಂತದಲ್ಲಿ ಸುಂದರ ಕಲಾಕೃತಿಗಳನ್ನು ಕೆತ್ತಲಾಗಿದೆ. ದ್ವಾರಗಳಲ್ಲಿ ಲತಾಸುರಳಿ, ರತ್ನಸ್ತಂಭ ಶಾಖೆಗಳಿವೆ. ಇತಿಹಾಸ ಸಾರುವ ರಾಜರ ಕಾಲದ ಶಿಲಾ ಶಾಸನಗಳನ್ನು ಇಲ್ಲಿ ಸಂರಕ್ಷಿಸಲಾಗಿದೆ. ಇಲ್ಲಿನ ಯುವ ಪಡೆ ದೇವಾಲಯದ ಆವರಣದಲ್ಲಿ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಿಸುವ ಕಾಯಕದಲ್ಲಿ ನಿರತವಾಗಿದೆ.</p>.<p><strong>ರತೋತ್ಸವ ಇಂದು</strong>: ‘ಏ.9ರಂದು ಸಂಜೆ 5 ಗಂಟೆಗೆ ವಾದ್ಯ ವೈಭವಗಳೊಂದಿಗೆ ಸಿದ್ಧೇಶ್ವರ ರಥೋತ್ಸವ ಜರುಗಲಿದೆ. ಸಂಜೆ 7ಕ್ಕೆ ಅನುಭಾವ ಗೋಷ್ಠಿ ನಡೆಯಲಿದೆ’ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಗಂಗಪ್ಪ ಸುಂಕಾಪೂರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಗುಂದ</strong>: ಇಲ್ಲಿನ ಸಿದ್ಧೇಶ್ವರ ದೇವಾಲಯವು ಐತಿಹಾಸಿಕ ಪರಂಪರೆಯನ್ನು ಹೊಂದಿದೆ. ಯುಗಾದಿ ದಿನ ಸೂರ್ಯಾಸ್ತದ ಸಮಯದಲ್ಲಿ ದೇವಾಲಯದ ಮೂರು ಮಂಟಪಗಳನ್ನು ಪ್ರವೇಶಿಸಿ ಗರ್ಭಗುಡಿಯಲ್ಲಿರುವ ಸಿದ್ಧೇಶ್ವರ ಲಿಂಗದ ಮೇಲೆ ನೇರವಾಗಿ ಸೂರ್ಯರಶ್ಮಿ ಸ್ಪರ್ಶಿಸುವುದು ಇಲ್ಲಿನ ವಿಶೇಷ.</p>.<p>ಬೆಳ್ವೊಲ 300 ಪ್ರದೇಶದ ವ್ಯಾಪ್ತಿಯ ಆಡಳಿತ ವಿಭಾಗದ ರಾಜಧಾನಿಯಾಗಿದ್ದ ಮುಳಗುಂದ, ಐತಿಹಾಸಿಕ ಪ್ರಸಿದ್ಧ ಶಿಲ್ಪ ಕಲೆಯ ಕೆತ್ತನೆಯಲ್ಲಿ ನಿರ್ಮಾಣವಾದ ದೇವಾಲಯಗಳನ್ನು ಒಳಗೊಂಡಿದ್ದು, ಊರಿನ ದಕ್ಷಿಣ ದಿಕ್ಕಿನ ಪ್ರವೇಶದ ಅಗಸಿ ಬಾಗಿಲಿನ ಹತ್ತಿರವಿರುವ ಅತ್ಯುತ್ತಮ ಕಲಾ ಕುಸುರಿಯ ಕೆತ್ತನೆಯ ಕಲೆಯನ್ನೊಳಗೊಂಡಿದೆ. ದೇವಾಲಯದ ಒಳಭಾಗದಲ್ಲಿ ಮೂರು ಗರ್ಭಗುಡಿಗಳಿವೆ. ಪ್ರತಿಯೊಂದರಲ್ಲೂ ಈಶ್ವರ ಲಿಂಗಗಳನ್ನು ಪ್ರತಿಷ್ಠಾಪಿಸಲಾಗಿದೆ. ಈ ದೇವಾಲಯವನ್ನು ಹೊಯ್ಸಳರ ಕಾಲದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಇತಿಹಾಸದ ಪುಟಗಳಲ್ಲಿ ಉಲ್ಲೇಖಿಸಲಾಗಿದೆ.</p>.<p>ಈ ಅಪರೂಪದ ದೇವಾಲಯವು ಕಪ್ಪು ಶಿಲೆಯಲ್ಲಿ ನಿರ್ಮಿತವಾಗಿದ್ದು, ಕಟ್ಟಡದ ಕೆಳ ಹಂತದಲ್ಲಿ ಸುಂದರ ಕಲಾಕೃತಿಗಳನ್ನು ಕೆತ್ತಲಾಗಿದೆ. ದ್ವಾರಗಳಲ್ಲಿ ಲತಾಸುರಳಿ, ರತ್ನಸ್ತಂಭ ಶಾಖೆಗಳಿವೆ. ಇತಿಹಾಸ ಸಾರುವ ರಾಜರ ಕಾಲದ ಶಿಲಾ ಶಾಸನಗಳನ್ನು ಇಲ್ಲಿ ಸಂರಕ್ಷಿಸಲಾಗಿದೆ. ಇಲ್ಲಿನ ಯುವ ಪಡೆ ದೇವಾಲಯದ ಆವರಣದಲ್ಲಿ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಿಸುವ ಕಾಯಕದಲ್ಲಿ ನಿರತವಾಗಿದೆ.</p>.<p><strong>ರತೋತ್ಸವ ಇಂದು</strong>: ‘ಏ.9ರಂದು ಸಂಜೆ 5 ಗಂಟೆಗೆ ವಾದ್ಯ ವೈಭವಗಳೊಂದಿಗೆ ಸಿದ್ಧೇಶ್ವರ ರಥೋತ್ಸವ ಜರುಗಲಿದೆ. ಸಂಜೆ 7ಕ್ಕೆ ಅನುಭಾವ ಗೋಷ್ಠಿ ನಡೆಯಲಿದೆ’ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಗಂಗಪ್ಪ ಸುಂಕಾಪೂರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>