ಈ ಮಾರ್ಗವು ಶಿರಹಟ್ಟಿ, ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ನಿತ್ಯ ನೂರಾರು ವಾಹನ ಸವಾರರು ಇದೇ ಮಾರ್ಗವನ್ನು ಬಳಸುತ್ತಾರೆ. ತಿರುವಿನಲ್ಲಿ ವೇಗವಾಗಿ ಬಂದ ವಾಹನಗಳು ಉರುಳಿ ಬಿದ್ದು, ಸರಣಿ ಅಪಘಾತಗಳು ಸಂಭವಿಸಿದ್ದೂ ಇದೆ. ಹೀಗಾಗಿ, ಲೋಕೋಪಯೋಗಿ ಇಲಾಖೆ ಎಚ್ಚೆತ್ತು ಕೂಡಲೇ ಸೂಚನಾ ಫಲಕ ಅಳವಡಿಸಬೇಕು.
ಸಂಜೀವ ಹಳ್ಯಾಳ, ಚಿಂಚಲಿ ಗ್ರಾಮ