‘ಗದಗ ಸಾಹಿತ್ಯ, ಸಂಸ್ಕೃತಿ, ಪರಂಪರೆ ಹಾಗೂ ಪ್ರಾಕೃತಿಕವಾಗಿ ಶ್ರೀಮಂತ ಜಿಲ್ಲೆ. ಆದರೆ, ಅವುಗಳನ್ನು ಬ್ರ್ಯಾಂಡಿಂಗ್ ಮಾಡುವಲ್ಲಿ ಜನಪ್ರತಿನಿಧಿಗಳು ಸೋತಿದ್ದಾರೆ. ಗದಗ ಜಿಲ್ಲೆಯಾಗಿದ್ದರ ಪರಿಣಾಮ
ಜಿಲ್ಲಾಧಿಕಾರಿ ಕಚೇರಿ, ಎಸ್ಪಿ ಕಚೇರಿಗಳು ಬಂದವಷ್ಟೇ. ತದನಂತರ, ಶಿಕ್ಷಣ ಸಂಸ್ಥೆಗಳು ಬಂದವು. ಇವುಗಳನ್ನು ಹೊರತು ಪಡಿಸಿದರೆ ಇಡೀ ಜಿಲ್ಲೆ ಇಂದಿಗೂ ಮೂಲಸೌಕರ್ಯಗಳಿಗಾಗಿ ಎದುರು ನೋಡುತ್ತಿದೆ. ಮುಂದುವರಿದ ಜಿಲ್ಲೆಗಳಿಗೆ ಹೋಲಿಕೆ ಮಾಡಿ ನೋಡಿದರೆ ಹೋರಾಟದ ಹಿಂದಿನ ಕನಸಿಗೆ ತಣ್ಣೀರು ಎರಚಿದಂತೆ ಆಗುತ್ತದೆ’ ಎನ್ನುತ್ತಾರೆ ಪ್ರತ್ಯೇಕ ಜಿಲ್ಲೆ ಹೋರಾಟದಲ್ಲಿ ಭಾಗವಹಿಸಿದ್ದ ಅಂಬರೀಷ್ ಹಿರೇಮಠ.