<p><strong>ಮುಂಡರಗಿ</strong>: ‘ಸಮಾಜದ ಒಳಿತಿಗೆ ಅಪಾರ ಆಸ್ತಿ ದಾನ ಮಾಡಿದ ಮಹಾದಾನಿ ಸಿರಸಂಗಿ ಲಿಂಗರಾಜ ಅವರು ಸಂತರಿಗೆ ಸಮನಾಗಿ ಬದುಕಿದರು. ಅವರ ದಾನಗುಣ, ಪರೋಪಕಾರ ಪ್ರವೃತ್ತಿ ಹಾಗೂ ತತ್ವಾದರ್ಶಗಳು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು’ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹೈತಾಪುರ ಗ್ರಾಮದಲ್ಲಿ ತ್ಯಾಗವೀರ ಶಿರಸಂಗಿ ಲಿಂಗರಾಜ ಸೇವಾ ಸಂಸ್ಥೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಿರಸಂಗಿ ಲಿಂಗರಾಜರ ಜಯಂತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ ಮಾತನಾಡಿದರು. ತ್ಯಾಗವೀರ ಶಿರಸಂಗಿ ಲಿಂಗರಾಜ ಸೇವಾ ಸಂಸ್ಥೆ ಅಧ್ಯಕ್ಷ ಈರಪ್ಪ ಬಿಸ್ನಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.</p>.<p>ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ತಾಲ್ಲೂಕಿನ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲಾಯಿತು.</p>.<p>ಎಂ.ಜಿ. ಗಚ್ಚಣ್ಣವರ ಪ್ರಾಸ್ತಾವಿಕ ಮಾತನಾಡಿದರು. ವಿ.ಎಸ್. ಪಾಟೀಲ ಸ್ವಾಗತಿಸಿದರು. ಎಂ.ಎಸ್. ಪಾಟೀಲ ನಿರೂಪಿಸಿದರು. ಎ. ಮಂಜುನಾಥ ವಂದಿಸಿದರು. ಮಲ್ಲಪ್ಪ ಪೂಜಾರ, ಹನುಮವ್ವ ಬೂದಿಹಾಳ, ಮಲ್ಲಮ್ಮ ಪಾಟೀಲ, ಶಂಕರಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ‘ಸಮಾಜದ ಒಳಿತಿಗೆ ಅಪಾರ ಆಸ್ತಿ ದಾನ ಮಾಡಿದ ಮಹಾದಾನಿ ಸಿರಸಂಗಿ ಲಿಂಗರಾಜ ಅವರು ಸಂತರಿಗೆ ಸಮನಾಗಿ ಬದುಕಿದರು. ಅವರ ದಾನಗುಣ, ಪರೋಪಕಾರ ಪ್ರವೃತ್ತಿ ಹಾಗೂ ತತ್ವಾದರ್ಶಗಳು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು’ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹೈತಾಪುರ ಗ್ರಾಮದಲ್ಲಿ ತ್ಯಾಗವೀರ ಶಿರಸಂಗಿ ಲಿಂಗರಾಜ ಸೇವಾ ಸಂಸ್ಥೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಿರಸಂಗಿ ಲಿಂಗರಾಜರ ಜಯಂತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ ಮಾತನಾಡಿದರು. ತ್ಯಾಗವೀರ ಶಿರಸಂಗಿ ಲಿಂಗರಾಜ ಸೇವಾ ಸಂಸ್ಥೆ ಅಧ್ಯಕ್ಷ ಈರಪ್ಪ ಬಿಸ್ನಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.</p>.<p>ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ತಾಲ್ಲೂಕಿನ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲಾಯಿತು.</p>.<p>ಎಂ.ಜಿ. ಗಚ್ಚಣ್ಣವರ ಪ್ರಾಸ್ತಾವಿಕ ಮಾತನಾಡಿದರು. ವಿ.ಎಸ್. ಪಾಟೀಲ ಸ್ವಾಗತಿಸಿದರು. ಎಂ.ಎಸ್. ಪಾಟೀಲ ನಿರೂಪಿಸಿದರು. ಎ. ಮಂಜುನಾಥ ವಂದಿಸಿದರು. ಮಲ್ಲಪ್ಪ ಪೂಜಾರ, ಹನುಮವ್ವ ಬೂದಿಹಾಳ, ಮಲ್ಲಮ್ಮ ಪಾಟೀಲ, ಶಂಕರಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>