<p><strong>ಗದಗ:</strong> ಐತಿಹಾಸಿಕ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದಿರುವ ಉತ್ಖನನದಲ್ಲಿ ಭಾನುವಾರ ಸರ್ಪದ ಚಿತ್ರವಿರುವ ಪ್ರಾಚ್ಯಾವಶೇಷ, ತಾಮ್ರದ ಘಂಟೆ, ಮಣ್ಣಿನ ಧೂಪದಾರತಿ ಗೋಚರಿಸಿದೆ.</p>.<p>ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ರಾಜ್ಯ ಪುರಾತತ್ವ ಇಲಾಖೆ ಅಧಿಕಾರಿ ಎ. ದೇವರಾಜ್., ಉಪವಿಭಾಗಾಧಿಕಾರಿ ಎಂ. ಗಂಗಪ್ಪ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.</p>.<p>ಭಾನುವಾರ 38 ಮಂದಿ ಕಾರ್ಮಿಕರು ಉತ್ಖನನದಲ್ಲಿ ಭಾಗವಹಿಸಿದ್ದರು. ಉತ್ಖನನ ನಡೆಯುವ ಸ್ಥಳದಲ್ಲಿ, 'ಈ ಸ್ಥಳದಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಲಾಗಿದೆ' ಎಂಬ ನಾಮಫಲಕವನ್ನು ಭಾನುವಾರ ಹಾಕಲಾಗಿತ್ತು. ಇದರಿಂದ ಆತಂಕಗೊಂಡ ಕೋಟೆ ವೀರಭದ್ರೇಶ್ವರ ಜಾತ್ರಾ ಕಮಿಟಿಯ ಸದಸ್ಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ವೀರಭದ್ರೇಶ್ವರ ಜಾತ್ರೆಗೆ ಅಡ್ಡಿಯಾದರೆ ನಾವು ಉತ್ಖನನ ಕಾರ್ಯಕ್ಕೆ ವಿರೋಧ ಮಾಡುವೆವು ಎಂದು ಜಾತ್ರೆ ಕಮಿಟಿಯ ಅಶೋಕ ಬೂದಿಹಾಳ, ಕೊಟ್ರಯ್ಯ ಎಚ್ಚರಿಸಿದರು.</p>.<p>ಐತಿಹಾಸಿಕ ಕೋಟೆ ವೀರಭದ್ರೇಶ್ವರ ಜಾತ್ರೆಗೆ ಯಾವುದೇ ಅಡ್ಡಿಯಾಗದಂತೆ ಉತ್ಖನನ ಕಾರ್ಯ ನಡೆಯುತ್ತಿದೆ. ಜಾತ್ರೆಯ ಎರಡನೇ ದಿನದ ಅಗ್ನಿಕುಂಡ ರಚಿಸುವ ಸ್ಥಳಕ್ಕೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಿದ್ಧಲಿಂಗೇಶ್ವರ ಪಾಟೀಲ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಐತಿಹಾಸಿಕ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದಿರುವ ಉತ್ಖನನದಲ್ಲಿ ಭಾನುವಾರ ಸರ್ಪದ ಚಿತ್ರವಿರುವ ಪ್ರಾಚ್ಯಾವಶೇಷ, ತಾಮ್ರದ ಘಂಟೆ, ಮಣ್ಣಿನ ಧೂಪದಾರತಿ ಗೋಚರಿಸಿದೆ.</p>.<p>ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ರಾಜ್ಯ ಪುರಾತತ್ವ ಇಲಾಖೆ ಅಧಿಕಾರಿ ಎ. ದೇವರಾಜ್., ಉಪವಿಭಾಗಾಧಿಕಾರಿ ಎಂ. ಗಂಗಪ್ಪ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.</p>.<p>ಭಾನುವಾರ 38 ಮಂದಿ ಕಾರ್ಮಿಕರು ಉತ್ಖನನದಲ್ಲಿ ಭಾಗವಹಿಸಿದ್ದರು. ಉತ್ಖನನ ನಡೆಯುವ ಸ್ಥಳದಲ್ಲಿ, 'ಈ ಸ್ಥಳದಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಲಾಗಿದೆ' ಎಂಬ ನಾಮಫಲಕವನ್ನು ಭಾನುವಾರ ಹಾಕಲಾಗಿತ್ತು. ಇದರಿಂದ ಆತಂಕಗೊಂಡ ಕೋಟೆ ವೀರಭದ್ರೇಶ್ವರ ಜಾತ್ರಾ ಕಮಿಟಿಯ ಸದಸ್ಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ವೀರಭದ್ರೇಶ್ವರ ಜಾತ್ರೆಗೆ ಅಡ್ಡಿಯಾದರೆ ನಾವು ಉತ್ಖನನ ಕಾರ್ಯಕ್ಕೆ ವಿರೋಧ ಮಾಡುವೆವು ಎಂದು ಜಾತ್ರೆ ಕಮಿಟಿಯ ಅಶೋಕ ಬೂದಿಹಾಳ, ಕೊಟ್ರಯ್ಯ ಎಚ್ಚರಿಸಿದರು.</p>.<p>ಐತಿಹಾಸಿಕ ಕೋಟೆ ವೀರಭದ್ರೇಶ್ವರ ಜಾತ್ರೆಗೆ ಯಾವುದೇ ಅಡ್ಡಿಯಾಗದಂತೆ ಉತ್ಖನನ ಕಾರ್ಯ ನಡೆಯುತ್ತಿದೆ. ಜಾತ್ರೆಯ ಎರಡನೇ ದಿನದ ಅಗ್ನಿಕುಂಡ ರಚಿಸುವ ಸ್ಥಳಕ್ಕೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಿದ್ಧಲಿಂಗೇಶ್ವರ ಪಾಟೀಲ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>