ಕೊಲೆಯಾದ ವ್ಯಕ್ತಿ ಫಕೀರಪ್ಪ ಆರೋಪಿ ರಂಗಸ್ವಾಮಿಗೆ ದೂರದ ಸಂಬಂಧಿ. ಫಕೀರಪ್ಪ ತಳವಾರ ಶಿಂಗಟಾಲೂರು ಗ್ರಾಮದವನಾಗಿದ್ದು, ಗಂಗಾಪೂರ ಶುಗರ್ ಫ್ಯಾಕ್ಟರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ನ.12ರಂದು ರಾತ್ರಿ ಫ್ಯಾಕ್ಟರಿಯ ಗೊಬ್ಬರ ತಯಾರಿಸುವ ಬ್ಯಾರಕ್ನಲ್ಲಿ ಮಲಗಿದ್ದಾಗ ಆರೋಪಿ ರಂಗಪ್ಪ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಎಂದು ಪ್ರಕರಣ ದಾಖಲಾಗಿದೆ.