<p><strong>ಗದಗ:</strong> ಮುಂಡರಗಿ ತಾಲ್ಲೂಕಿನ ಗಂಗಾಪುರದಲ್ಲಿ ಇತ್ತೀಚೆಗೆ ಹತ್ಯೆಗೀಡಾಗಿದ್ದ ಸೆಕ್ಯುರಿಟಿ ಗಾರ್ಡ್ ಫಕೀರಪ್ಪ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಮುಂಡರಗಿ ತಾಲ್ಲೂಕಿನ ಶಿರನಹಳ್ಳಿ ಗ್ರಾಮದ ನಿವಾಸಿರಂಗಪ್ಪ ಬಂಧಿತ ಆರೋಪಿ.</p>.<p>ಕೊಲೆಯಾದ ವ್ಯಕ್ತಿ ಫಕೀರಪ್ಪ ಆರೋಪಿ ರಂಗಸ್ವಾಮಿಗೆ ದೂರದ ಸಂಬಂಧಿ. ಫಕೀರಪ್ಪ ತಳವಾರ ಶಿಂಗಟಾಲೂರು ಗ್ರಾಮದವನಾಗಿದ್ದು, ಗಂಗಾಪೂರ ಶುಗರ್ ಫ್ಯಾಕ್ಟರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ನ.12ರಂದು ರಾತ್ರಿ ಫ್ಯಾಕ್ಟರಿಯ ಗೊಬ್ಬರ ತಯಾರಿಸುವ ಬ್ಯಾರಕ್ನಲ್ಲಿ ಮಲಗಿದ್ದಾಗ ಆರೋಪಿ ರಂಗಪ್ಪ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಎಂದು ಪ್ರಕರಣ ದಾಖಲಾಗಿದೆ.</p>.<p>‘ಆರೋಪಿ ರಂಗಪ್ಪ ಅಲಿಯಾಸ್ ರಂಗಸ್ವಾಮಿ ಗೌಂಡಿ ಕೆಲಸಗಾರ. ತನ್ನ ಹೆಂಡತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕಾಗಿ ಫಕೀರಪ್ಪನನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾನೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>’ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ನಡೆಯುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಮುಂಡರಗಿ ತಾಲ್ಲೂಕಿನ ಗಂಗಾಪುರದಲ್ಲಿ ಇತ್ತೀಚೆಗೆ ಹತ್ಯೆಗೀಡಾಗಿದ್ದ ಸೆಕ್ಯುರಿಟಿ ಗಾರ್ಡ್ ಫಕೀರಪ್ಪ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಮುಂಡರಗಿ ತಾಲ್ಲೂಕಿನ ಶಿರನಹಳ್ಳಿ ಗ್ರಾಮದ ನಿವಾಸಿರಂಗಪ್ಪ ಬಂಧಿತ ಆರೋಪಿ.</p>.<p>ಕೊಲೆಯಾದ ವ್ಯಕ್ತಿ ಫಕೀರಪ್ಪ ಆರೋಪಿ ರಂಗಸ್ವಾಮಿಗೆ ದೂರದ ಸಂಬಂಧಿ. ಫಕೀರಪ್ಪ ತಳವಾರ ಶಿಂಗಟಾಲೂರು ಗ್ರಾಮದವನಾಗಿದ್ದು, ಗಂಗಾಪೂರ ಶುಗರ್ ಫ್ಯಾಕ್ಟರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ನ.12ರಂದು ರಾತ್ರಿ ಫ್ಯಾಕ್ಟರಿಯ ಗೊಬ್ಬರ ತಯಾರಿಸುವ ಬ್ಯಾರಕ್ನಲ್ಲಿ ಮಲಗಿದ್ದಾಗ ಆರೋಪಿ ರಂಗಪ್ಪ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಎಂದು ಪ್ರಕರಣ ದಾಖಲಾಗಿದೆ.</p>.<p>‘ಆರೋಪಿ ರಂಗಪ್ಪ ಅಲಿಯಾಸ್ ರಂಗಸ್ವಾಮಿ ಗೌಂಡಿ ಕೆಲಸಗಾರ. ತನ್ನ ಹೆಂಡತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕಾಗಿ ಫಕೀರಪ್ಪನನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾನೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>’ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ನಡೆಯುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>