<p><strong>ಗದಗ</strong>: ‘ಕರ್ನಾಟಕ ರಾಜ್ಯ ರೈತ ಸಂಘವು ಇತರೆ ಸಂಘಟನೆಗಳ ಜತೆಗೂಡಿ ಸೋಮವಾರ ಕರ್ನಾಟಕ ಬಂದ್ಗೆ ಕರೆಕೊಟ್ಟಿದ್ದು, ಬಂದ್ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ವತಿಯಿಂದ ಸಾಕಷ್ಟು ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಹೇಳಿದರು.</p>.<p>‘ಬಂದ್ಗೆ ಕರೆಕೊಟ್ಟಿರುವ ಸಂಘಟನೆಗಳ ನಾಯಕರ ಜತೆಗೆ ಸಭೆ ನಡೆಸಲಾಗಿದ್ದು, ಬಂದ್ ಸಮಯದಲ್ಲಿ ಯಾವ ರೀತಿ ವರ್ತಿಸಬೇಕು ಎಂಬುದರ ಬಗ್ಗೆ ಅವರಿಗೆ ಅರಿವು ಮೂಡಿಸಲಾಗಿದೆ. ಶಾಂತಿಯುತವಾಗಿ ಬಂದ್ ಆಚರಿಸುವಂತೆ ಸೂಚಿಸಲಾಗಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪ್ರತಿಭಟನೆ ವೇಳೆ ಪ್ರತಿಭಟನಕಾರರು ಯಾವುದೇ ಕಾರಣಕ್ಕೂ ಒತ್ತಾಯ ಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ. ಆ ರೀತಿ ಮಾಡಿದ್ದು ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಕರ್ನಾಟಕ ರಾಜ್ಯ ರೈತ ಸಂಘವು ಇತರೆ ಸಂಘಟನೆಗಳ ಜತೆಗೂಡಿ ಸೋಮವಾರ ಕರ್ನಾಟಕ ಬಂದ್ಗೆ ಕರೆಕೊಟ್ಟಿದ್ದು, ಬಂದ್ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ವತಿಯಿಂದ ಸಾಕಷ್ಟು ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಹೇಳಿದರು.</p>.<p>‘ಬಂದ್ಗೆ ಕರೆಕೊಟ್ಟಿರುವ ಸಂಘಟನೆಗಳ ನಾಯಕರ ಜತೆಗೆ ಸಭೆ ನಡೆಸಲಾಗಿದ್ದು, ಬಂದ್ ಸಮಯದಲ್ಲಿ ಯಾವ ರೀತಿ ವರ್ತಿಸಬೇಕು ಎಂಬುದರ ಬಗ್ಗೆ ಅವರಿಗೆ ಅರಿವು ಮೂಡಿಸಲಾಗಿದೆ. ಶಾಂತಿಯುತವಾಗಿ ಬಂದ್ ಆಚರಿಸುವಂತೆ ಸೂಚಿಸಲಾಗಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪ್ರತಿಭಟನೆ ವೇಳೆ ಪ್ರತಿಭಟನಕಾರರು ಯಾವುದೇ ಕಾರಣಕ್ಕೂ ಒತ್ತಾಯ ಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ. ಆ ರೀತಿ ಮಾಡಿದ್ದು ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>