ಸೆ. 14ರಂದು ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನಮಠದಲ್ಲಿ ಹಾನಗಲ್ಲಿನ ಗುರುಕುಮಾರೇಶ್ವರರ 157ನೇ ಜಯಂತ್ಯುತ್ಸವ ನಡೆಯಲಿದೆ. ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ 10 ದಿನಗಳ ಕಾಲ ಹಲವು ಧಾರ್ಮಿಕ ಸಾಂಸ್ಕೃತಿಕ ಸಾಮಾಜಿಕ ಕಾರ್ಯಕ್ರಮಗಳು ನಡೆಯಲಿವೆ. ನೂರಾರು ಮಠಾಧೀಶರು ಸಚಿವರು ಸಂಸದರು ಶಾಸಕರು ಹಾಗೂ ನಾಡಿನ ವಿವಿಧ ಭಾಗಗಳ ಗಣ್ಯರು ಚಿಂತಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.