ಮೇವುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರದೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಜಿಲ್ಲಾಡಳಿತದ ನಡೆ ಹಳ್ಳಿಯಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಪೌಷ್ಟಿಕ ಮಕ್ಕಳ ಕುರಿತು ಮಾಹಿತಿ ಪಡೆದರು. ಅಂಗನವಾಡಿ ಫಲಾನುಭವಿಗಳಿಗೆ ವಿತರಿಸಲಾಗುವ ಪೌಷ್ಟಿಕ ಆಹಾರ ಬಗ್ಗೆ ಪರಿಶೀಲಿಸಿ ಮಾಹಿತಿ ಪಡೆದರು. ಎಸ್ಸಿ ಕಾಲೂನಿಗೆ ಭೇಟಿ ನೀಡಿ ಆಶ್ರಯ ಯೋಜನೆಯಡಿ ಸೂರು ರಹಿತರಿಗೆ ಮನೆ ಒದಗಿಸಲು ಆದ್ಯತೆ ನೀಡುವಂತೆ ಪಿಡಿಒಗೆ ತಿಳಿಸಿದರು.