<p><strong>ಗದಗ:</strong> ಶಹರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಬಸವೇಶ್ವರ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಆಶ್ರಯದಲ್ಲಿ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಪ್ರೌಢಶಾಲೆಗಳ ‘ಎ’ ಗ್ರುಪ್ ಮಟ್ಟದ ಕ್ರೀಡಾಕೂಟ ನಡೆಯಿತು.</p>.<p>ಕ್ರೀಡಾಕೂಟ ಉದ್ಘಾಟಿಸಿದ ಬಿಇಒ ಆರ್.ಎಸ್.ಬುರಡಿ, ‘ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಅತ್ಯಂತ ಮಹತ್ವದ್ದು. ನಮ್ಮ ಸದೃಢ ದೇಹಕ್ಕಾಗಿ ಕ್ರೀಡೆ ಅವಶ್ಯಕ’ ಎಂದು ತಿಳಿಸಿದರು.</p>.<p>ಶಾಲಾ ಸಂಸ್ಥೆಯ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ‘ಸೋಲದೇ ಗೆದ್ದರೆ ಮಂದಹಾಸ, ಸೋತು ಗೆದ್ದರೆ ಇತಿಹಾಸ. ಹಾಗಾಗಿ ಕ್ರೀಡಾಪಟುಗಳು ಕ್ರೀಡೆಗಳಲ್ಲಿನ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು’ ಎಂದು ಹೇಳಿದರು.</p>.<p>ಮುಖ್ಯ ಶಿಕ್ಷಕ ಎಂ.ಕೆ. ಬಂಡಿಹಾಳ ಮಾತನಾಡಿದರು. ಕ್ರೀಡಾಕೂಟದಲ್ಲಿ 12 ಪ್ರೌಢಶಾಲೆಗಳ ಕ್ರೀಡಾಪಟುಗಳು ಭಾಗವಹಿಸಿದ್ದರು. ಅರಟಾಳ ರುದ್ರಗೌಡ, ಡಿ.ಇಡಿ. ಕಾಲೇಜಿನ ಪ್ರಾಚಾರ್ಯ ಎಸ್.ಎಚ್. ರಾಮದುರ್ಗ, ಶಿಕ್ಷಕರಾದ ನಿಂಬನಗೌಡರ, ಕ್ರೀಡಾಕೂಟದ ನಿರ್ಣಾಯಕರು ಇದ್ದರು.</p>.<p>ವಿದ್ಯಾರ್ಥಿನಿಯರಾದ ವೇದಾ ಮತ್ತು ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಕೆ.ಬಿ. ಜಾಲವಾಡಗಿ ನಿರೂಪಿಸಿದರು. ಶಿಕ್ಷಕಿ ಪ್ರಿಯಾ ನಾಗಲೋಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶಯನಾಜ್ ಬಚನಳ್ಳಿ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸುಧಾರಾಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಶಹರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಬಸವೇಶ್ವರ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಆಶ್ರಯದಲ್ಲಿ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಪ್ರೌಢಶಾಲೆಗಳ ‘ಎ’ ಗ್ರುಪ್ ಮಟ್ಟದ ಕ್ರೀಡಾಕೂಟ ನಡೆಯಿತು.</p>.<p>ಕ್ರೀಡಾಕೂಟ ಉದ್ಘಾಟಿಸಿದ ಬಿಇಒ ಆರ್.ಎಸ್.ಬುರಡಿ, ‘ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಅತ್ಯಂತ ಮಹತ್ವದ್ದು. ನಮ್ಮ ಸದೃಢ ದೇಹಕ್ಕಾಗಿ ಕ್ರೀಡೆ ಅವಶ್ಯಕ’ ಎಂದು ತಿಳಿಸಿದರು.</p>.<p>ಶಾಲಾ ಸಂಸ್ಥೆಯ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ‘ಸೋಲದೇ ಗೆದ್ದರೆ ಮಂದಹಾಸ, ಸೋತು ಗೆದ್ದರೆ ಇತಿಹಾಸ. ಹಾಗಾಗಿ ಕ್ರೀಡಾಪಟುಗಳು ಕ್ರೀಡೆಗಳಲ್ಲಿನ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು’ ಎಂದು ಹೇಳಿದರು.</p>.<p>ಮುಖ್ಯ ಶಿಕ್ಷಕ ಎಂ.ಕೆ. ಬಂಡಿಹಾಳ ಮಾತನಾಡಿದರು. ಕ್ರೀಡಾಕೂಟದಲ್ಲಿ 12 ಪ್ರೌಢಶಾಲೆಗಳ ಕ್ರೀಡಾಪಟುಗಳು ಭಾಗವಹಿಸಿದ್ದರು. ಅರಟಾಳ ರುದ್ರಗೌಡ, ಡಿ.ಇಡಿ. ಕಾಲೇಜಿನ ಪ್ರಾಚಾರ್ಯ ಎಸ್.ಎಚ್. ರಾಮದುರ್ಗ, ಶಿಕ್ಷಕರಾದ ನಿಂಬನಗೌಡರ, ಕ್ರೀಡಾಕೂಟದ ನಿರ್ಣಾಯಕರು ಇದ್ದರು.</p>.<p>ವಿದ್ಯಾರ್ಥಿನಿಯರಾದ ವೇದಾ ಮತ್ತು ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಕೆ.ಬಿ. ಜಾಲವಾಡಗಿ ನಿರೂಪಿಸಿದರು. ಶಿಕ್ಷಕಿ ಪ್ರಿಯಾ ನಾಗಲೋಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶಯನಾಜ್ ಬಚನಳ್ಳಿ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸುಧಾರಾಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>