<p><strong>ಗದಗ</strong>: ಇಂದಿನ ಸ್ಪರ್ಧಾತ್ಮಕ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಕ್ರಮದ ಜತೆಗೆ ಸಹಪಠ್ಯ ಚಟುವಟಿಕೆಗಳಿಗೂ ಸಮಾನ ಪ್ರಾಮುಖ್ಯತೆ ನೀಡುವುದು ಅವಶ್ಯಕ ಎಂದು ಪ್ರಾಂಶುಪಾಲ ಎ.ಕೆ.ಮಠ ತಿಳಿಸಿದರು.</p>.<p>ನಗರದ ಕೆಎಲ್ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆ ಜತೆಗೆ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ವ್ಯಕ್ತಿತ್ವ ವಿಕಸನಕ್ಕೂ ಕ್ರೀಡೆಗಳು ಮಹತ್ವದ ಪಾತ್ರವಹಿಸುತ್ತವೆ’ ಎಂದರು.</p>.<p>ಸೋಲನ್ನು ಸಹಜವಾಗಿ ಸ್ವೀಕರಿಸುವ ಮನೋಭಾವ ಹಾಗೂ ಜಯವನ್ನು ವಿನಯದಿಂದ ಆಚರಿಸುವ ಗುಣ ಕ್ರೀಡಾಂಗಣದಿಂದಲೇ ಬೆಳೆದು ಬರುತ್ತದೆ ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞೆ ಬೋಧಿಸಿದ ಅವರು, ನಿಯಮಪಾಲನೆ, ಶಿಸ್ತು ಹಾಗೂ ತಂಡಭಾವನೆಗಳ ಮಹತ್ವವನ್ನು ಮನದಟ್ಟು ಮಾಡಿದರು.</p>.<p>ಕ್ರೀಡಾ ಸಂಘದ ಅಧ್ಯಕ್ಷ ಪ್ರೊ. ರಾಜು ಯಲಬುರ್ಗಿ ಅವರು ಕ್ರೀಡಾ ಸಾಮಗ್ರಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ ನೀಡಿದರು.</p>.<p>ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ವೀರಣ್ಣ ಬಡಿಗೇರ ಉಪಸ್ಥಿತರಿದ್ದರು.</p>.<p>ಸಭಾ ಕಾರ್ಯಕ್ರಮದ ನಂತರ ಹೊರಾಂಗಣ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. </p>
<p><strong>ಗದಗ</strong>: ಇಂದಿನ ಸ್ಪರ್ಧಾತ್ಮಕ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಕ್ರಮದ ಜತೆಗೆ ಸಹಪಠ್ಯ ಚಟುವಟಿಕೆಗಳಿಗೂ ಸಮಾನ ಪ್ರಾಮುಖ್ಯತೆ ನೀಡುವುದು ಅವಶ್ಯಕ ಎಂದು ಪ್ರಾಂಶುಪಾಲ ಎ.ಕೆ.ಮಠ ತಿಳಿಸಿದರು.</p>.<p>ನಗರದ ಕೆಎಲ್ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆ ಜತೆಗೆ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ವ್ಯಕ್ತಿತ್ವ ವಿಕಸನಕ್ಕೂ ಕ್ರೀಡೆಗಳು ಮಹತ್ವದ ಪಾತ್ರವಹಿಸುತ್ತವೆ’ ಎಂದರು.</p>.<p>ಸೋಲನ್ನು ಸಹಜವಾಗಿ ಸ್ವೀಕರಿಸುವ ಮನೋಭಾವ ಹಾಗೂ ಜಯವನ್ನು ವಿನಯದಿಂದ ಆಚರಿಸುವ ಗುಣ ಕ್ರೀಡಾಂಗಣದಿಂದಲೇ ಬೆಳೆದು ಬರುತ್ತದೆ ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞೆ ಬೋಧಿಸಿದ ಅವರು, ನಿಯಮಪಾಲನೆ, ಶಿಸ್ತು ಹಾಗೂ ತಂಡಭಾವನೆಗಳ ಮಹತ್ವವನ್ನು ಮನದಟ್ಟು ಮಾಡಿದರು.</p>.<p>ಕ್ರೀಡಾ ಸಂಘದ ಅಧ್ಯಕ್ಷ ಪ್ರೊ. ರಾಜು ಯಲಬುರ್ಗಿ ಅವರು ಕ್ರೀಡಾ ಸಾಮಗ್ರಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ ನೀಡಿದರು.</p>.<p>ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ವೀರಣ್ಣ ಬಡಿಗೇರ ಉಪಸ್ಥಿತರಿದ್ದರು.</p>.<p>ಸಭಾ ಕಾರ್ಯಕ್ರಮದ ನಂತರ ಹೊರಾಂಗಣ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. </p>