<p><strong>ಗದಗ</strong>: ‘ಕರ್ತವ್ಯವನ್ನು ಒತ್ತಡರಹಿತವಾಗಿ ನಿರ್ವಹಿಸಲು ಕ್ರೀಡಾಕೂಟಗಳು ಅತ್ಯವಶ್ಯಕ’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.</p>.<p>ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗದಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.</p>.<p>‘ಕ್ರೀಡಾಕೂಟಗಳಿಂದ ಗೆಲ್ಲುವ ಹಠ, ಛಲ, ತಂಡ ಸ್ಫೂರ್ತಿ ಸಿಗುತ್ತದೆ. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವ ಸುಸಂದರ್ಭ ಲಭ್ಯವಾಗುತ್ತದೆ. ದಿನನಿತ್ಯದ ಕೆಲಸದ ನಡುವೆ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಹೊಸ ಚೈತನ್ಯ ಬರುತ್ತದೆ’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ‘ಪೊಲೀಸ್ ಸಿಬ್ಬಂದಿಯ ಒತ್ತಡದ ಕೆಲಸದ ನಡುವೆ ಉತ್ತಮ ಆರೋಗ್ಯಕ್ಕಾಗಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ’ ಎಂದರು.</p>.<p>‘ನಮ್ಮ ತಂಡ ಗೆಲ್ಲಿಸುವ ಮೂಲಕ ನಮ್ಮ ಜಿಲ್ಲೆಯನ್ನು ಗೆಲ್ಲಿಸುವ ಉದ್ದೇಶ ಹೊಂದಲಾಗಿದ್ದು, ಎಲ್ಲ ಸಿಬ್ಬಂದಿ ಕ್ರೀಡಾಸ್ಫೂರ್ತಿಯಿಂದ ಆಟ ಆಡಬೇಕು’ ಎಂದು ಹೇಳಿದರು.</p>.<p>ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಡಿಎಆರ್, ಗದಗ ಶಹರ, ಬೆಟಗೇರಿ ವೃತ್ತ, ಗದಗ ಗ್ರಾಮೀಣ, ಮುಳಗುಂದ, ರೋಣ, ನರಗುಂದ, ಮುಂಡರಗಿ, ಶಿರಹಟ್ಟಿ ತಂಡಗಳನ್ನು ಎಸ್ಪಿ ರೋಹನ್ ಜಗದೀಶ್ ಅವರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಪರಿಚಯಿಸಿದರು.</p>.<p>2024ರ ಪೊಲೀಸ್ ಕ್ರೀಡಾಕೂಟದ ವೈಯಕ್ತಿಕ ಚಾಂಪಿಯನ್ ಅನಿಲ ಬನ್ನಿಕೊಪ್ಪ ಅವರು ಕ್ರೀಡಾಜ್ಯೋತಿ ಬೆಳಗಿಸಿದರು.</p>.<p>ಡಿವೈಎಸ್ಪಿಗಳಾದ ಪ್ರಭುಗೌಡ, ಮುರ್ತುಜಾ ಖಾದ್ರಿ, ಮಹಾಂತೇಶ ಸಜ್ಜನರ, ವಿದ್ಯಾನಂದ ನಾಯಕ್ ಸೇರಿದಂತೆ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><blockquote>ಕ್ರೀಡೆಯಲ್ಲಿ ಗೆಲುವು-ಸೋಲು ಇದ್ದೇ ಇರುತ್ತದೆ. ಇದರ ಹೊರತಾಗಿ ಕ್ರೀಡೆಗಳಲ್ಲಿ ಖುಷಿಯಿಂದ ಭಾಗವಹಿಸಬೇಕು. ಪ್ರತಿಜ್ಞಾವಿಧಿ ಸ್ವೀಕರಿಸಿದಂತೆ ಎಲ್ಲರೂ ಮುಕ್ತ ಮನಸ್ಸಿನಿಂದ ಆಟದಲ್ಲಿ ಭಾಗವಹಿಸಬೇಕು </blockquote><span class="attribution">ಸಿ.ಎನ್. ಶ್ರೀಧರ್ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಕರ್ತವ್ಯವನ್ನು ಒತ್ತಡರಹಿತವಾಗಿ ನಿರ್ವಹಿಸಲು ಕ್ರೀಡಾಕೂಟಗಳು ಅತ್ಯವಶ್ಯಕ’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.</p>.<p>ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗದಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.</p>.<p>‘ಕ್ರೀಡಾಕೂಟಗಳಿಂದ ಗೆಲ್ಲುವ ಹಠ, ಛಲ, ತಂಡ ಸ್ಫೂರ್ತಿ ಸಿಗುತ್ತದೆ. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವ ಸುಸಂದರ್ಭ ಲಭ್ಯವಾಗುತ್ತದೆ. ದಿನನಿತ್ಯದ ಕೆಲಸದ ನಡುವೆ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಹೊಸ ಚೈತನ್ಯ ಬರುತ್ತದೆ’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ‘ಪೊಲೀಸ್ ಸಿಬ್ಬಂದಿಯ ಒತ್ತಡದ ಕೆಲಸದ ನಡುವೆ ಉತ್ತಮ ಆರೋಗ್ಯಕ್ಕಾಗಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ’ ಎಂದರು.</p>.<p>‘ನಮ್ಮ ತಂಡ ಗೆಲ್ಲಿಸುವ ಮೂಲಕ ನಮ್ಮ ಜಿಲ್ಲೆಯನ್ನು ಗೆಲ್ಲಿಸುವ ಉದ್ದೇಶ ಹೊಂದಲಾಗಿದ್ದು, ಎಲ್ಲ ಸಿಬ್ಬಂದಿ ಕ್ರೀಡಾಸ್ಫೂರ್ತಿಯಿಂದ ಆಟ ಆಡಬೇಕು’ ಎಂದು ಹೇಳಿದರು.</p>.<p>ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಡಿಎಆರ್, ಗದಗ ಶಹರ, ಬೆಟಗೇರಿ ವೃತ್ತ, ಗದಗ ಗ್ರಾಮೀಣ, ಮುಳಗುಂದ, ರೋಣ, ನರಗುಂದ, ಮುಂಡರಗಿ, ಶಿರಹಟ್ಟಿ ತಂಡಗಳನ್ನು ಎಸ್ಪಿ ರೋಹನ್ ಜಗದೀಶ್ ಅವರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಪರಿಚಯಿಸಿದರು.</p>.<p>2024ರ ಪೊಲೀಸ್ ಕ್ರೀಡಾಕೂಟದ ವೈಯಕ್ತಿಕ ಚಾಂಪಿಯನ್ ಅನಿಲ ಬನ್ನಿಕೊಪ್ಪ ಅವರು ಕ್ರೀಡಾಜ್ಯೋತಿ ಬೆಳಗಿಸಿದರು.</p>.<p>ಡಿವೈಎಸ್ಪಿಗಳಾದ ಪ್ರಭುಗೌಡ, ಮುರ್ತುಜಾ ಖಾದ್ರಿ, ಮಹಾಂತೇಶ ಸಜ್ಜನರ, ವಿದ್ಯಾನಂದ ನಾಯಕ್ ಸೇರಿದಂತೆ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><blockquote>ಕ್ರೀಡೆಯಲ್ಲಿ ಗೆಲುವು-ಸೋಲು ಇದ್ದೇ ಇರುತ್ತದೆ. ಇದರ ಹೊರತಾಗಿ ಕ್ರೀಡೆಗಳಲ್ಲಿ ಖುಷಿಯಿಂದ ಭಾಗವಹಿಸಬೇಕು. ಪ್ರತಿಜ್ಞಾವಿಧಿ ಸ್ವೀಕರಿಸಿದಂತೆ ಎಲ್ಲರೂ ಮುಕ್ತ ಮನಸ್ಸಿನಿಂದ ಆಟದಲ್ಲಿ ಭಾಗವಹಿಸಬೇಕು </blockquote><span class="attribution">ಸಿ.ಎನ್. ಶ್ರೀಧರ್ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>