‘ಕಾಂಗ್ರೆಸ್ ಪಕ್ಷದ ಒಳಗಡೆಯೇ ವಾತಾವರಣ ಸರಿ ಇಲ್ಲ. ಅವರಲ್ಲೇ ಮೂರು ಬಣಗಳಿವೆ. ಸಿದ್ದರಾಮಯ್ಯ ಅಧಿಕಾರ ಹಿಡಿಯುವ ಪ್ರಯತ್ನದ ಭಾಗವಾಗಿಯೇ ಮತ್ತೊಮ್ಮೆ ಹೋರಾಟಕ್ಕೆ ಧುಮುಕುತ್ತಿದ್ದಾರೆ. ಆದರೆ, ಅವರ ಸರ್ಕಾರ ಇದ್ದಂತಹ ಸಂದರ್ಭದಲ್ಲಿ ಹಿಂದುಳಿದವರಿಗೆ ಏನು ಮಾಡಿದ್ದಾರೆ ಎಂಬುದರ ಬಗ್ಗೆಯೂ ಆಲೋಚಿಸಬೇಕು’ ಎಂದು ಕುಟುಕಿದರು.