<p><strong>ಗದಗ</strong>: ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸುವ ದಿಸೆಯಲ್ಲಿ ಶಾಲೆ ಹಾಗೂ ಮನೆ ಭೇಟಿ ಕಾರ್ಯಕ್ರಮ ಮಹತ್ವದ ಹೆಜ್ಜೆಯಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕ ಜಿ.ಎಂ.ಮುಂದಿನಮನಿ ಹೇಳಿದರು.</p>.<p>ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ ಮತ್ತು ಕಲಿಕೆಯಲ್ಲಿ ನಿಧಾನಗತಿಯ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಗದಗ ಜಿಲ್ಲಾ ಉಪ ನಿರ್ದೇಶಕರು ಹಾಗೂ ಅಭಿವೃದ್ಧಿ ತಂಡವು ಹಾತಲಗೇರಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದರು.</p>.<p>‘ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಉಳಿದ 44 ದಿನಗಳನ್ನು ಕ್ರಿಯಾ ಯೋಜನೆಯಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಟಿವಿ ಮತ್ತು ಮೊಬೈಲ್ ಬಳಕೆ ನಿಯಂತ್ರಿಸಿ, ಜಾತ್ರೆ–ಹಬ್ಬಗಳಲ್ಲಿ ಕಾಲಹರಣ ಮಾಡದೆ ವೇಳಾಪಟ್ಟಿಯಂತೆ ಅಭ್ಯಾಸ ನಡೆಸಬೇಕು ಎಂದು ತಿಳಿಸಿದರು.</p>.<p>ಶಿಕ್ಷಕರಾದ ಎಸ್.ಆರ್.ನದಾಫ, ಜಿ.ಡಿ.ದಾಸರ, ವೈ.ಕೆ.ಹಂದ್ರಾಳ, ಸುಧಾ ಬನ್ನಿಕಲ್ ಹಾಗೂ ಹಿರಿಯ ಉಪನ್ಯಾಸಕ ಬಿ.ಎಫ್. ಅರವಟಗಿ ಉಪಸ್ಥಿತರಿದ್ದು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.</p>.<p>ಪ್ರಶ್ನೋತ್ತರಗಳ ಮೂಲಕ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಿ, ಪರೀಕ್ಷೆಗೆ ಸಜ್ಜಾಗುವಂತೆ ಪ್ರೇರೆಪಿಸಿದರು.</p>.<p>ಮನೆವಾರ್ಷಿಕ ಪರೀಕ್ಷೆಯನ್ನು ನಿರ್ಭಯವಾಗಿ ಎದುರಿಸಿ, ‘40+’ ಗುರಿ ಸಾಧಿಸುವಂತೆ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲಾಯಿತು. ರಾಜ್ಯ ಮಟ್ಟದ ಮೂರನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಗಂಭೀರವಾಗಿ ತಯಾರಿ ನಡೆಸುವಂತೆ ಮಾರ್ಗದರ್ಶನ ನೀಡಲಾಯಿತು.</p>.<p>ನಂತರ ತಂಡವು ಊರಿನ ಹಿರಿಯರು ಮತ್ತು ಶಿಕ್ಷಣ ಪ್ರೇಮಿಗಳೊಂದಿಗೆ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ, ಮಕ್ಕಳ ಶೈಕ್ಷಣಿಕ ಪ್ರಗತಿ ಕುರಿತು ಪಾಲಕರೊಂದಿಗೆ ಚರ್ಚಿಸಿತು.</p>.<p>ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖ್ಯಶಿಕ್ಷಕರು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸುವ ದಿಸೆಯಲ್ಲಿ ಶಾಲೆ ಹಾಗೂ ಮನೆ ಭೇಟಿ ಕಾರ್ಯಕ್ರಮ ಮಹತ್ವದ ಹೆಜ್ಜೆಯಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕ ಜಿ.ಎಂ.ಮುಂದಿನಮನಿ ಹೇಳಿದರು.</p>.<p>ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ ಮತ್ತು ಕಲಿಕೆಯಲ್ಲಿ ನಿಧಾನಗತಿಯ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಗದಗ ಜಿಲ್ಲಾ ಉಪ ನಿರ್ದೇಶಕರು ಹಾಗೂ ಅಭಿವೃದ್ಧಿ ತಂಡವು ಹಾತಲಗೇರಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದರು.</p>.<p>‘ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳಬೇಕು. ಉಳಿದ 44 ದಿನಗಳನ್ನು ಕ್ರಿಯಾ ಯೋಜನೆಯಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಟಿವಿ ಮತ್ತು ಮೊಬೈಲ್ ಬಳಕೆ ನಿಯಂತ್ರಿಸಿ, ಜಾತ್ರೆ–ಹಬ್ಬಗಳಲ್ಲಿ ಕಾಲಹರಣ ಮಾಡದೆ ವೇಳಾಪಟ್ಟಿಯಂತೆ ಅಭ್ಯಾಸ ನಡೆಸಬೇಕು ಎಂದು ತಿಳಿಸಿದರು.</p>.<p>ಶಿಕ್ಷಕರಾದ ಎಸ್.ಆರ್.ನದಾಫ, ಜಿ.ಡಿ.ದಾಸರ, ವೈ.ಕೆ.ಹಂದ್ರಾಳ, ಸುಧಾ ಬನ್ನಿಕಲ್ ಹಾಗೂ ಹಿರಿಯ ಉಪನ್ಯಾಸಕ ಬಿ.ಎಫ್. ಅರವಟಗಿ ಉಪಸ್ಥಿತರಿದ್ದು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.</p>.<p>ಪ್ರಶ್ನೋತ್ತರಗಳ ಮೂಲಕ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಿ, ಪರೀಕ್ಷೆಗೆ ಸಜ್ಜಾಗುವಂತೆ ಪ್ರೇರೆಪಿಸಿದರು.</p>.<p>ಮನೆವಾರ್ಷಿಕ ಪರೀಕ್ಷೆಯನ್ನು ನಿರ್ಭಯವಾಗಿ ಎದುರಿಸಿ, ‘40+’ ಗುರಿ ಸಾಧಿಸುವಂತೆ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲಾಯಿತು. ರಾಜ್ಯ ಮಟ್ಟದ ಮೂರನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಗಂಭೀರವಾಗಿ ತಯಾರಿ ನಡೆಸುವಂತೆ ಮಾರ್ಗದರ್ಶನ ನೀಡಲಾಯಿತು.</p>.<p>ನಂತರ ತಂಡವು ಊರಿನ ಹಿರಿಯರು ಮತ್ತು ಶಿಕ್ಷಣ ಪ್ರೇಮಿಗಳೊಂದಿಗೆ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ, ಮಕ್ಕಳ ಶೈಕ್ಷಣಿಕ ಪ್ರಗತಿ ಕುರಿತು ಪಾಲಕರೊಂದಿಗೆ ಚರ್ಚಿಸಿತು.</p>.<p>ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖ್ಯಶಿಕ್ಷಕರು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>