<p><strong>ಗದಗ:</strong> ‘ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಕಳೆದ ಬಾರಿಗಿಂತ ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಆಗಿರಬಹುದು. ಆದರೆ ಮಕ್ಕಳಿಗೆ ನಕಲು ಮಾಡಲು ಬಿಟ್ಟುಕೊಟ್ಟಿಲ್ಲ. ಶಿಕ್ಷಕರ ಮೂಲಕ ಮಕ್ಕಳಿಗೆ ಮೇಲಿಂದ ಮೇಲೆ ಪರೀಕ್ಷೆಗಳನ್ನು ನಡೆಸಿ, ಮಕ್ಕಳು ಸ್ವಂತ ಬಲದಿಂದ ಬರೆಯುವಂತೆ ನೋಡಿಕೊಳ್ಳಲಾಯಿತು. ಹಾಗಾಗಿ ಫಲಿತಾಂಶ ಕಡಿಮೆ ಬಂದರೂ ಉತ್ತಮ ಪ್ರಕ್ರಿಯೆ ನಡೆದಿದೆ’ ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. </p><p>ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. </p><p>ವಸತಿ ಶಾಲೆ, ವಸತಿ ಮತ್ತು ಶೈಕ್ಷಣಿಕ ಕೊಠಡಿ ಒಂದೇ ಆಗಿದ್ದು, ಮೂಲಸೌಕರ್ಯ ಇಲ್ಲದಿರುವ ಶಾಲೆಗಳ ಬಗ್ಗೆ ಗಮನಕ್ಕೆ ತರಬೇಕು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.</p><p>ಈ ಸಂದರ್ಭದಲ್ಲಿ ಲಕ್ಷ್ಮೇಶ್ವರ ತಾಲ್ಲೂಕಿನ ಗೊಜನೂರು ಕಸ್ತೂರಬಾ ವಸತಿ ಶಾಲೆ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ ನಡೆಯಿತು.</p><p>‘ಈ ಬಗ್ಗೆ ಬೆಂಗಳೂರಿನಲ್ಲಿ ಗುರುವಾರ ಸಭೆ ನಡೆಸಿ ಅಗತ್ಯ ಸೌಲಭ್ಯ ಒದಗಿಸಿ ಕೊಡಲಾಗುವುದು. ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಬೆಂಗಳೂರಿಗೆ ಬನ್ನಿ’ ಎಂದು ಡಿಡಿಪಿಐಗೆ ಸೂಚಿಸಿದರು.</p>.<p>‘ರಾಜ್ಯದಲ್ಲಿ ಸರ್ಕಾರದಿಂದ ಎಲ್ಕೆಜಿ, ಯುಕೆಜಿ ಆರಂಭಿಸಲಾಗಿದೆ. ಕಳೆದ ವರ್ಷ ಕಲ್ಯಾಣ ಕರ್ನಾಟಕದಲ್ಲಿ ಆರಂಭಿಸಲಾಗಿತ್ತು. ಈ ಬಾರಿ ರಾಜ್ಯದ ಉಳಿದ ಭಾಗಗಳಲ್ಲಿ ನಾಲ್ಕು ಸಾವಿರ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಗದಗ ಜಿಲ್ಲೆಯಲ್ಲಿ 65 ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿಗೆ ಅನುಮೋದನೆ ನೀಡಲಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, ‘ಶಾಲಾ ಶೌಚಾಲಯಗಳ ಲಘು ದುರಸ್ತಿಗೆ ₹5 ಕೋಟಿಗೂ ಅಧಿಕ ಹಣ ಬೇಕು. ಪೂರ್ಣ ದುರಸ್ತಿಗೆ ₹26 ಕೋಟಿ ಅಗತ್ಯವಿದೆ. ಹಾಗಾಗಿ, ಶೌಚಾಲಯಗಳ ದುರಸ್ತಿಗೆ ಶೇ 50ರಷ್ಟು ಅನುದಾನ ನೀಡಬೇಕು ಎಂದರು.</p>.<p>‘ಪ್ರತಿ ವರ್ಷ ಶಾಲಾ ಆರಂಭಕ್ಕೂ ಮೊದಲು ಲೋಕೋಯೋಗಿ ಇಲಾಖೆ ಎಂಜಿನಿಯರ್ಗಳು ಶಾಲಾ ಕಟ್ಟಡಗಳ ಪರಿಶೀಲಿಸಿ, ಬಳಕೆಗೆ ಯೋಗ್ಯವಾಗಿರುವ ಕುರಿತು ವರದಿ ನೀಡಬೇಕು. ಈ ವರ್ಷ ಈಗಾಗಲೇ ಶಾಲೆಗಳು ಆರಂಭವಾಗಿದ್ದು ಜಿಲ್ಲೆಯಲ್ಲಿ ಆಗಸ್ಟ್ 15ರೊಳಗಾಗಿ ಶಾಲಾ ಕೊಠಡಿಗಳು ಬಳಕೆಗೆ ಯೋಗ್ಯವಾಗಿರುವ ಕುರಿತು ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.</p>.<p>ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ‘ಆದ್ರಳ್ಳಿಯಲ್ಲಿರುವ ಶಾಲೆಯಲ್ಲಿ 650ಕ್ಕೂ ಹೆಚ್ಚು ಅಧಿಕ ಮಕ್ಕಳ ದಾಖಲಾತಿ ಇದೆ. ಆದಕಾರಣ ಆ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಡಿಡಿಪಿಐ ಆರ್.ಎಸ್.ಬುರುಡಿ ಮಾತನಾಡಿ, ‘2025-26ನೇ ಸಾಲಿಗೆ ಜಿಲ್ಲೆಯಲ್ಲಿ ಒಟ್ಟು 1,120 ಶಾಲೆಗಳಿವೆ. ಆ ಪೈಕಿ ಶಿಕ್ಷಣ ಇಲಾಖೆಯ 698, ಸಮಾಜ ಕಲ್ಯಾಣ ಇಲಾಖೆಯ 22, ಸ್ಥಳೀಯ ಸಂಸ್ಥೆಗಳಿಗೆ ಸೇರಿದವು 2 ಹಾಗೂ 148 ಅನುದಾನಿತ, 242 ಅನುದಾನರಹಿತ, 7 ಇತರೆ, 1 ಕೇಂದ್ರ ಸರ್ಕಾರದ ಶಾಲೆ ಹೀಗೆ ಒಟ್ಟು 1,120 ಶಾಲೆಗಳಿವೆ’ ಎಂದು ಮಾಹಿತಿ ನೀಡಿದರು.</p>.<p>‘ಜುಲೈ 5ರವರೆಗೆ ಇದ್ದಂತೆ ಒಟ್ಟು 1,67,255 ಮಕ್ಕಳು ದಾಖಲಾತಿ ಪಡೆದಿದ್ದಾರೆ. ಜಿಲ್ಲೆಯಲ್ಲಿರುವ ಕೆಪಿಎಸ್ ಶಾಲೆಗಳಲ್ಲಿ 2,681 ಮಕ್ಕಳ ದಾಖಲಾತಿ ಇದೆ’ ಎಂದರು.<br><br>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್., ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ, ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು. </p>.<p>Highlights - ಮೂಲಸೌಕರ್ಯಗಳ ಕೊರತೆ: ಮಾಹಿತಿ ಕೊಡಿ ಶಾಲಾ ಕಟ್ಟಡ ನಿಯಮಿತವಾಗಿ ಪರಿಶೀಲಿಸಿ ಕರ್ನಾಟಕ ಪ್ಲಬಿಕ್ ಶಾಲೆಗಳಿಗೆ ಆದ್ಯತೆ </p>.<p>Quote - ಎಲ್ಲ ಶಾಲೆಗಳಲ್ಲಿಯೂ ಮಕ್ಕಳು ಸಂವಿಧಾನ ಪೀಠಿಕೆ ಓದುವಂತೆ ನೋಡಿಕೊಳ್ಳಬೇಕು. ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಸಮವಸ್ತ್ರ ವಿತರಣೆ ಆಗಿರುವ ಕುರಿತು ನಿಗಾ ವಹಿಸಬೇಕು ಮಧು ಬಂಗಾರಪ್ಪ ಸಚಿವ </p>.<p>Quote - ಜಿಲ್ಲೆಯಲ್ಲಿ ಓದಿನ ಮನೆ ಮೂಲಕ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕ್ರಮ ವಹಿಸಿದೆ. ಅದೇರೀತಿ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಪಿಂಕ್ ಟಾಯ್ಲೆಟ್ ಯೋಜನೆ ಜಾರಿಗೊಳಿಸಲಾಗಿದೆ. ಇವುಗಳನ್ನು ರಾಜ್ಯದಾದ್ಯಂತ ವಿಸ್ತರಿಸಬೇಕು ಎಚ್.ಕೆ.ಪಾಟೀಲ ಸಚಿವ </p>.<p>Cut-off box - ‘ಫಲಿತಾಂಶ ಸುಧಾರಣೆಗೆ ಒತ್ತು ನೀಡಿ’ ಜಿಲ್ಲೆಯಲ್ಲಿನ ಹಳೆಯ ಶಾಲಾ ಕಟ್ಟಡಗಳಿಗೆ ಕಾಯಕಲ್ಪ ಆಗಬೇಕಿದೆ. ಜಿಲ್ಲೆ ಶೈಕ್ಷಣಿಕ ಸಾಧನೆಯಲ್ಲಿ ಹಿಂದೆ ಇರುವುದು ಬೇಸರದ ಸಂಗತಿಯಾಗಿದ್ದು ಫಲಿತಾಂಶ ಸುಧಾರಣೆಗೆ ಒತ್ತುನೀಡಬೇಕಿದೆ ಎಂದು ಶಾಸಕ ಜಿ.ಎಸ್.ಪಾಟೀಲ ಹೇಳಿದರು. ಮುಂಡರಗಿ ತಾಲ್ಲೂಕು ಕೇಂದ್ರದಲ್ಲಿ ಸರ್ಕಾರಿ ಪ್ರೌಢಶಾಲೆ ಈವರೆಗೂ ಸ್ಥಾಪನೆಯಾಗಿಲ್ಲ. ಶಿಕ್ಷಣ ಸಚಿವರು ಈ ಕುರಿತು ಗಮನ ಹರಿಸಬೇಕು. ದ್ವಿಭಾಷಾ ನೀತಿ ಸ್ವಾಗತಾರ್ಹ. ಇದು ಸರ್ಕಾರದ ಉತ್ತಮ ನಿರ್ಧಾರವಾಗಿದೆ ಎಂದರು.</p>.<p>Cut-off box - ಆದೇಶ ತಕ್ಷಣ ಹಿಂಪಡೆಯಿರಿ: ಸಂಕನೂರ ಆಗ್ರಹ ‘ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲಾ ಶಿಕ್ಷಕರಿಗೆ ನೋಟಿಸ್ ನೀಡುವ ಅವರ ಬಡ್ತಿ ಡಿಎ ಸೇರಿದಂತೆ ಮುಂತಾದ ಸೌಲಭ್ಯ ತಡೆಹಿಡಿಯುವ ಸರ್ಕಾರದ ಆದೇಶವನ್ನು ತಕ್ಷಣದಿಂದಲೇ ತಡೆ ಹಿಡಿಯಬೇಕು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಆಗ್ರಹಿಸಿದರು. ಅನೇಕ ಕಾರಣಗಳಿಂದ ಶಾಲಾ ಫಲಿತಾಂಶ ಕಡಿಮೆ ಆಗುತ್ತದೆ. ಅದಕ್ಕೆ ಶಿಕ್ಷಕರನ್ನು ದೂಷಿಸುವುದು ಸರಿಯಲ್ಲ. ಸರ್ಕಾರ ತಮ್ಮ ನಿರ್ಧಾರ ಬದಲಿಸಬೇಕು ಎಂದು ಆಗ್ರಹಿಸಿದರು. ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿ ‘ಬುಧವಾರ ಬೆಂಗಳೂರಿನಲ್ಲಿ ಸಭೆ ಸೇರಿ ಈ ಬಗ್ಗೆ ನಿರ್ಣಯ ಕೈಗೊಳ್ಳುತ್ತೇವೆ. ನೀವು ಸಭೆಗೆ ಹಾಜರಿರಬೇಕು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಕಳೆದ ಬಾರಿಗಿಂತ ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಆಗಿರಬಹುದು. ಆದರೆ ಮಕ್ಕಳಿಗೆ ನಕಲು ಮಾಡಲು ಬಿಟ್ಟುಕೊಟ್ಟಿಲ್ಲ. ಶಿಕ್ಷಕರ ಮೂಲಕ ಮಕ್ಕಳಿಗೆ ಮೇಲಿಂದ ಮೇಲೆ ಪರೀಕ್ಷೆಗಳನ್ನು ನಡೆಸಿ, ಮಕ್ಕಳು ಸ್ವಂತ ಬಲದಿಂದ ಬರೆಯುವಂತೆ ನೋಡಿಕೊಳ್ಳಲಾಯಿತು. ಹಾಗಾಗಿ ಫಲಿತಾಂಶ ಕಡಿಮೆ ಬಂದರೂ ಉತ್ತಮ ಪ್ರಕ್ರಿಯೆ ನಡೆದಿದೆ’ ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. </p><p>ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. </p><p>ವಸತಿ ಶಾಲೆ, ವಸತಿ ಮತ್ತು ಶೈಕ್ಷಣಿಕ ಕೊಠಡಿ ಒಂದೇ ಆಗಿದ್ದು, ಮೂಲಸೌಕರ್ಯ ಇಲ್ಲದಿರುವ ಶಾಲೆಗಳ ಬಗ್ಗೆ ಗಮನಕ್ಕೆ ತರಬೇಕು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.</p><p>ಈ ಸಂದರ್ಭದಲ್ಲಿ ಲಕ್ಷ್ಮೇಶ್ವರ ತಾಲ್ಲೂಕಿನ ಗೊಜನೂರು ಕಸ್ತೂರಬಾ ವಸತಿ ಶಾಲೆ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ ನಡೆಯಿತು.</p><p>‘ಈ ಬಗ್ಗೆ ಬೆಂಗಳೂರಿನಲ್ಲಿ ಗುರುವಾರ ಸಭೆ ನಡೆಸಿ ಅಗತ್ಯ ಸೌಲಭ್ಯ ಒದಗಿಸಿ ಕೊಡಲಾಗುವುದು. ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಬೆಂಗಳೂರಿಗೆ ಬನ್ನಿ’ ಎಂದು ಡಿಡಿಪಿಐಗೆ ಸೂಚಿಸಿದರು.</p>.<p>‘ರಾಜ್ಯದಲ್ಲಿ ಸರ್ಕಾರದಿಂದ ಎಲ್ಕೆಜಿ, ಯುಕೆಜಿ ಆರಂಭಿಸಲಾಗಿದೆ. ಕಳೆದ ವರ್ಷ ಕಲ್ಯಾಣ ಕರ್ನಾಟಕದಲ್ಲಿ ಆರಂಭಿಸಲಾಗಿತ್ತು. ಈ ಬಾರಿ ರಾಜ್ಯದ ಉಳಿದ ಭಾಗಗಳಲ್ಲಿ ನಾಲ್ಕು ಸಾವಿರ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಗದಗ ಜಿಲ್ಲೆಯಲ್ಲಿ 65 ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿಗೆ ಅನುಮೋದನೆ ನೀಡಲಾಗಿದೆ’ ಎಂದು ಹೇಳಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, ‘ಶಾಲಾ ಶೌಚಾಲಯಗಳ ಲಘು ದುರಸ್ತಿಗೆ ₹5 ಕೋಟಿಗೂ ಅಧಿಕ ಹಣ ಬೇಕು. ಪೂರ್ಣ ದುರಸ್ತಿಗೆ ₹26 ಕೋಟಿ ಅಗತ್ಯವಿದೆ. ಹಾಗಾಗಿ, ಶೌಚಾಲಯಗಳ ದುರಸ್ತಿಗೆ ಶೇ 50ರಷ್ಟು ಅನುದಾನ ನೀಡಬೇಕು ಎಂದರು.</p>.<p>‘ಪ್ರತಿ ವರ್ಷ ಶಾಲಾ ಆರಂಭಕ್ಕೂ ಮೊದಲು ಲೋಕೋಯೋಗಿ ಇಲಾಖೆ ಎಂಜಿನಿಯರ್ಗಳು ಶಾಲಾ ಕಟ್ಟಡಗಳ ಪರಿಶೀಲಿಸಿ, ಬಳಕೆಗೆ ಯೋಗ್ಯವಾಗಿರುವ ಕುರಿತು ವರದಿ ನೀಡಬೇಕು. ಈ ವರ್ಷ ಈಗಾಗಲೇ ಶಾಲೆಗಳು ಆರಂಭವಾಗಿದ್ದು ಜಿಲ್ಲೆಯಲ್ಲಿ ಆಗಸ್ಟ್ 15ರೊಳಗಾಗಿ ಶಾಲಾ ಕೊಠಡಿಗಳು ಬಳಕೆಗೆ ಯೋಗ್ಯವಾಗಿರುವ ಕುರಿತು ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.</p>.<p>ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ‘ಆದ್ರಳ್ಳಿಯಲ್ಲಿರುವ ಶಾಲೆಯಲ್ಲಿ 650ಕ್ಕೂ ಹೆಚ್ಚು ಅಧಿಕ ಮಕ್ಕಳ ದಾಖಲಾತಿ ಇದೆ. ಆದಕಾರಣ ಆ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಡಿಡಿಪಿಐ ಆರ್.ಎಸ್.ಬುರುಡಿ ಮಾತನಾಡಿ, ‘2025-26ನೇ ಸಾಲಿಗೆ ಜಿಲ್ಲೆಯಲ್ಲಿ ಒಟ್ಟು 1,120 ಶಾಲೆಗಳಿವೆ. ಆ ಪೈಕಿ ಶಿಕ್ಷಣ ಇಲಾಖೆಯ 698, ಸಮಾಜ ಕಲ್ಯಾಣ ಇಲಾಖೆಯ 22, ಸ್ಥಳೀಯ ಸಂಸ್ಥೆಗಳಿಗೆ ಸೇರಿದವು 2 ಹಾಗೂ 148 ಅನುದಾನಿತ, 242 ಅನುದಾನರಹಿತ, 7 ಇತರೆ, 1 ಕೇಂದ್ರ ಸರ್ಕಾರದ ಶಾಲೆ ಹೀಗೆ ಒಟ್ಟು 1,120 ಶಾಲೆಗಳಿವೆ’ ಎಂದು ಮಾಹಿತಿ ನೀಡಿದರು.</p>.<p>‘ಜುಲೈ 5ರವರೆಗೆ ಇದ್ದಂತೆ ಒಟ್ಟು 1,67,255 ಮಕ್ಕಳು ದಾಖಲಾತಿ ಪಡೆದಿದ್ದಾರೆ. ಜಿಲ್ಲೆಯಲ್ಲಿರುವ ಕೆಪಿಎಸ್ ಶಾಲೆಗಳಲ್ಲಿ 2,681 ಮಕ್ಕಳ ದಾಖಲಾತಿ ಇದೆ’ ಎಂದರು.<br><br>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್., ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ, ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು. </p>.<p>Highlights - ಮೂಲಸೌಕರ್ಯಗಳ ಕೊರತೆ: ಮಾಹಿತಿ ಕೊಡಿ ಶಾಲಾ ಕಟ್ಟಡ ನಿಯಮಿತವಾಗಿ ಪರಿಶೀಲಿಸಿ ಕರ್ನಾಟಕ ಪ್ಲಬಿಕ್ ಶಾಲೆಗಳಿಗೆ ಆದ್ಯತೆ </p>.<p>Quote - ಎಲ್ಲ ಶಾಲೆಗಳಲ್ಲಿಯೂ ಮಕ್ಕಳು ಸಂವಿಧಾನ ಪೀಠಿಕೆ ಓದುವಂತೆ ನೋಡಿಕೊಳ್ಳಬೇಕು. ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಸಮವಸ್ತ್ರ ವಿತರಣೆ ಆಗಿರುವ ಕುರಿತು ನಿಗಾ ವಹಿಸಬೇಕು ಮಧು ಬಂಗಾರಪ್ಪ ಸಚಿವ </p>.<p>Quote - ಜಿಲ್ಲೆಯಲ್ಲಿ ಓದಿನ ಮನೆ ಮೂಲಕ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕ್ರಮ ವಹಿಸಿದೆ. ಅದೇರೀತಿ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಪಿಂಕ್ ಟಾಯ್ಲೆಟ್ ಯೋಜನೆ ಜಾರಿಗೊಳಿಸಲಾಗಿದೆ. ಇವುಗಳನ್ನು ರಾಜ್ಯದಾದ್ಯಂತ ವಿಸ್ತರಿಸಬೇಕು ಎಚ್.ಕೆ.ಪಾಟೀಲ ಸಚಿವ </p>.<p>Cut-off box - ‘ಫಲಿತಾಂಶ ಸುಧಾರಣೆಗೆ ಒತ್ತು ನೀಡಿ’ ಜಿಲ್ಲೆಯಲ್ಲಿನ ಹಳೆಯ ಶಾಲಾ ಕಟ್ಟಡಗಳಿಗೆ ಕಾಯಕಲ್ಪ ಆಗಬೇಕಿದೆ. ಜಿಲ್ಲೆ ಶೈಕ್ಷಣಿಕ ಸಾಧನೆಯಲ್ಲಿ ಹಿಂದೆ ಇರುವುದು ಬೇಸರದ ಸಂಗತಿಯಾಗಿದ್ದು ಫಲಿತಾಂಶ ಸುಧಾರಣೆಗೆ ಒತ್ತುನೀಡಬೇಕಿದೆ ಎಂದು ಶಾಸಕ ಜಿ.ಎಸ್.ಪಾಟೀಲ ಹೇಳಿದರು. ಮುಂಡರಗಿ ತಾಲ್ಲೂಕು ಕೇಂದ್ರದಲ್ಲಿ ಸರ್ಕಾರಿ ಪ್ರೌಢಶಾಲೆ ಈವರೆಗೂ ಸ್ಥಾಪನೆಯಾಗಿಲ್ಲ. ಶಿಕ್ಷಣ ಸಚಿವರು ಈ ಕುರಿತು ಗಮನ ಹರಿಸಬೇಕು. ದ್ವಿಭಾಷಾ ನೀತಿ ಸ್ವಾಗತಾರ್ಹ. ಇದು ಸರ್ಕಾರದ ಉತ್ತಮ ನಿರ್ಧಾರವಾಗಿದೆ ಎಂದರು.</p>.<p>Cut-off box - ಆದೇಶ ತಕ್ಷಣ ಹಿಂಪಡೆಯಿರಿ: ಸಂಕನೂರ ಆಗ್ರಹ ‘ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲಾ ಶಿಕ್ಷಕರಿಗೆ ನೋಟಿಸ್ ನೀಡುವ ಅವರ ಬಡ್ತಿ ಡಿಎ ಸೇರಿದಂತೆ ಮುಂತಾದ ಸೌಲಭ್ಯ ತಡೆಹಿಡಿಯುವ ಸರ್ಕಾರದ ಆದೇಶವನ್ನು ತಕ್ಷಣದಿಂದಲೇ ತಡೆ ಹಿಡಿಯಬೇಕು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಆಗ್ರಹಿಸಿದರು. ಅನೇಕ ಕಾರಣಗಳಿಂದ ಶಾಲಾ ಫಲಿತಾಂಶ ಕಡಿಮೆ ಆಗುತ್ತದೆ. ಅದಕ್ಕೆ ಶಿಕ್ಷಕರನ್ನು ದೂಷಿಸುವುದು ಸರಿಯಲ್ಲ. ಸರ್ಕಾರ ತಮ್ಮ ನಿರ್ಧಾರ ಬದಲಿಸಬೇಕು ಎಂದು ಆಗ್ರಹಿಸಿದರು. ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿ ‘ಬುಧವಾರ ಬೆಂಗಳೂರಿನಲ್ಲಿ ಸಭೆ ಸೇರಿ ಈ ಬಗ್ಗೆ ನಿರ್ಣಯ ಕೈಗೊಳ್ಳುತ್ತೇವೆ. ನೀವು ಸಭೆಗೆ ಹಾಜರಿರಬೇಕು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>