<p><strong>ಗದಗ</strong>: ರಾಜ್ಯ ಸರ್ಕಾರ ಬಳ್ಳಾರಿ ಪೊಲೀಸರಿಗೊಂದು ನ್ಯಾಯ; ಗದಗ ಜಿಲ್ಲೆಯ ಪೊಲೀಸರಿಗೊಂದು ನ್ಯಾಯ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಹಿಂದೂ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ರಾಜು ಖಾನಪ್ಪನವರ ಆರೋಪಿಸಿದರು.</p>.<p>ರಾಜ್ಯ ಸರ್ಕಾರ ಆಡಳಿತ ನಡೆಸುವಲ್ಲಿ ವೈಫಲ್ಯ ಕಂಡಿದೆ ಹಾಗೂ ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಗದಗ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲ, ರಾಷ್ಟ್ರಪತಿಗೆ ಮನವಿ ಸಲ್ಲಿಸಿ ಮಾತನಾಡಿದರು.</p>.<p>‘ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಡಳಿತದ ಎಲ್ಲ ರಂಗಗಳಲ್ಲಿಯೂ ವಿಫಲವಾಗಿದೆ. ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಕೆಲವೆಡೆ ಅಧಿಕಾರಿಗಳು ಆಡಿದ್ದೇ ಆಟ ಎನ್ನುವಂತಾಗಿದೆ. ಕೆಲವೆಡೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಂತೆ ನಾಟಕವಾಡಿ, ತನ್ನ ವೈಫಲ್ಯ ಮರೆ ಮಾಚುತ್ತಿದೆ’ ಎಂದು ಆರೋಪಿಸಿದರು.</p>.<p>‘ಗಣಿನಾಡು ಬಳ್ಳಾರಿ ಪ್ರಕರಣದಲ್ಲಿ ಎಸ್ಪಿಯನ್ನು ಅಮಾನತುಗೊಳಿಸಿ, ಬಳ್ಳಾರಿ ಶಾಸಕ ನಾ.ರಾ. ಭರತ್ರೆಡ್ಡಿ ಅವರನ್ನು ಸಂತುಷ್ಟಗೊಳಿಸಲು ಸರ್ಕಾರ ಪ್ರಯತ್ನಿಸಿದೆ’ ಎಂದು ಆರೋಪಿಸಿದರು.</p>.<p>‘ಶಿರಹಟ್ಟಿ ಠಾಣೆಯ ಪಿಎಸ್ಐ ಈರಣ್ಣ ರಿತ್ತಿ ಪರಿಶಿಷ್ಟ ಜಾತಿಯ ರೈತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ₹32 ಸಾವಿರ ಲೂಟಿ ಮಾಡಿದ್ದಾರೆ’ ಎಂದು ಆರೋಪ ಮಾಡಿದ ಅವರು, ‘ಸರ್ಕಾರ ಕೂಡಲೇ ಅವರನ್ನು ಅಮಾನತುಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಈ ಸಂದರ್ಭದಲ್ಲಿ ಮಹೇಶ್ ರೋಖಡೆ, ಹುಲಿಗೆಪ್ಪ ವಾಲ್ಮೀಕಿ, ಬಸವರಾಜ್ ಕುರ್ತಕೋಟಿ, ಈಶ್ವರ್ ಕಾಟವಾ, ಕುಮಾರ್ ನಡಗೇರಿ, ವೆಂಕಟೇಶ್ ದೊಡ್ಡಮನಿ, ಭರತ ಲದ್ದಿ, ಈರಣ್ಣ ಪೂಜಾರ ಸೇರಿದಂತೆ ಹಲವರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ರಾಜ್ಯ ಸರ್ಕಾರ ಬಳ್ಳಾರಿ ಪೊಲೀಸರಿಗೊಂದು ನ್ಯಾಯ; ಗದಗ ಜಿಲ್ಲೆಯ ಪೊಲೀಸರಿಗೊಂದು ನ್ಯಾಯ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಹಿಂದೂ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ರಾಜು ಖಾನಪ್ಪನವರ ಆರೋಪಿಸಿದರು.</p>.<p>ರಾಜ್ಯ ಸರ್ಕಾರ ಆಡಳಿತ ನಡೆಸುವಲ್ಲಿ ವೈಫಲ್ಯ ಕಂಡಿದೆ ಹಾಗೂ ಇಬ್ಬಗೆಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಗದಗ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲ, ರಾಷ್ಟ್ರಪತಿಗೆ ಮನವಿ ಸಲ್ಲಿಸಿ ಮಾತನಾಡಿದರು.</p>.<p>‘ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆಡಳಿತದ ಎಲ್ಲ ರಂಗಗಳಲ್ಲಿಯೂ ವಿಫಲವಾಗಿದೆ. ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಕೆಲವೆಡೆ ಅಧಿಕಾರಿಗಳು ಆಡಿದ್ದೇ ಆಟ ಎನ್ನುವಂತಾಗಿದೆ. ಕೆಲವೆಡೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಂತೆ ನಾಟಕವಾಡಿ, ತನ್ನ ವೈಫಲ್ಯ ಮರೆ ಮಾಚುತ್ತಿದೆ’ ಎಂದು ಆರೋಪಿಸಿದರು.</p>.<p>‘ಗಣಿನಾಡು ಬಳ್ಳಾರಿ ಪ್ರಕರಣದಲ್ಲಿ ಎಸ್ಪಿಯನ್ನು ಅಮಾನತುಗೊಳಿಸಿ, ಬಳ್ಳಾರಿ ಶಾಸಕ ನಾ.ರಾ. ಭರತ್ರೆಡ್ಡಿ ಅವರನ್ನು ಸಂತುಷ್ಟಗೊಳಿಸಲು ಸರ್ಕಾರ ಪ್ರಯತ್ನಿಸಿದೆ’ ಎಂದು ಆರೋಪಿಸಿದರು.</p>.<p>‘ಶಿರಹಟ್ಟಿ ಠಾಣೆಯ ಪಿಎಸ್ಐ ಈರಣ್ಣ ರಿತ್ತಿ ಪರಿಶಿಷ್ಟ ಜಾತಿಯ ರೈತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ₹32 ಸಾವಿರ ಲೂಟಿ ಮಾಡಿದ್ದಾರೆ’ ಎಂದು ಆರೋಪ ಮಾಡಿದ ಅವರು, ‘ಸರ್ಕಾರ ಕೂಡಲೇ ಅವರನ್ನು ಅಮಾನತುಗೊಳಿಸಬೇಕು’ ಎಂದು ಆಗ್ರಹಿಸಿದರು.</p>.<p>ಈ ಸಂದರ್ಭದಲ್ಲಿ ಮಹೇಶ್ ರೋಖಡೆ, ಹುಲಿಗೆಪ್ಪ ವಾಲ್ಮೀಕಿ, ಬಸವರಾಜ್ ಕುರ್ತಕೋಟಿ, ಈಶ್ವರ್ ಕಾಟವಾ, ಕುಮಾರ್ ನಡಗೇರಿ, ವೆಂಕಟೇಶ್ ದೊಡ್ಡಮನಿ, ಭರತ ಲದ್ದಿ, ಈರಣ್ಣ ಪೂಜಾರ ಸೇರಿದಂತೆ ಹಲವರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>