<p>ನರಗುಂದ: ತಾಲ್ಲೂಕಿನ ಸಿದ್ದಾಪೂರ ಗ್ರಾಮಕ್ಕೆ ನರಗುಂದದಿಂದ ಸರಿಯಾದ ಬಸ್ಗಳ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಗ್ರಾಮದ ವಿದ್ಯಾರ್ಥಿಗಳು ಪಟ್ಟಣದ ಬಸ್ ನಿಲ್ದಾಣದಲ್ಲಿ ಬುಧವಾರ ದಿಢೀರ್ ಬಸ್ ತಡೆದು ಪ್ರತಿಭಟಿಸಿದರು.</p>.<p>ಬಸ್ ನಿಲ್ದಾಣದ ಸಮೀಪ ಇರುವ ಹುಬ್ಬಳ್ಳಿ -ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆದು ಕೆಎಸ್ಆರ್ಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿಗಳು, ‘ನಿತ್ಯ ಹೆಚ್ಚಿನ ಬಸ್ ಓಡಿಸುತ್ತಿದ್ದರು. ಆದರೆ, ಬುಧವಾರ ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಂದು ಬಸ್ ಹೋಗುತ್ತಿಲ್ಲ. ಹೀಗಾದರೆ ನಾವು ಮನೆ ತಲುಪುವುದು ಯಾವಾಗ ? ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ಸಾರಿಗೆ ನಿಯಂತ್ರಣ ಅಧಿಕಾರಿ ಆರ್.ಐ. ಪತ್ತಾರ ಹಾಗೂ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಮನವೊಲಿಸಲು ಮುಂದಾದರು.</p>.<p>ಆರ್.ಐ. ಪತ್ತಾರ ಮಾತನಾಡಿ, ‘ನಿಮ್ಮ ಗ್ರಾಮಕ್ಕೆ ಸಂಚರಿಸುವ ಬಸ್ ಪಂಚರ್ ಆಗಿದ್ದರಿಂದ ತೊಂದರೆ ಆಗಿದೆ. ತಕ್ಷಣ 2 ಬಸ್ಗಳನ್ನು ಬಿಡುತ್ತೇವೆ. ಮುಂದೆ ಈ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು’ ಎಂದಾಗ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟರು.</p>.<p>ಸಿದ್ದಾಪುರ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಗುಂದ: ತಾಲ್ಲೂಕಿನ ಸಿದ್ದಾಪೂರ ಗ್ರಾಮಕ್ಕೆ ನರಗುಂದದಿಂದ ಸರಿಯಾದ ಬಸ್ಗಳ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಗ್ರಾಮದ ವಿದ್ಯಾರ್ಥಿಗಳು ಪಟ್ಟಣದ ಬಸ್ ನಿಲ್ದಾಣದಲ್ಲಿ ಬುಧವಾರ ದಿಢೀರ್ ಬಸ್ ತಡೆದು ಪ್ರತಿಭಟಿಸಿದರು.</p>.<p>ಬಸ್ ನಿಲ್ದಾಣದ ಸಮೀಪ ಇರುವ ಹುಬ್ಬಳ್ಳಿ -ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆದು ಕೆಎಸ್ಆರ್ಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿಗಳು, ‘ನಿತ್ಯ ಹೆಚ್ಚಿನ ಬಸ್ ಓಡಿಸುತ್ತಿದ್ದರು. ಆದರೆ, ಬುಧವಾರ ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಂದು ಬಸ್ ಹೋಗುತ್ತಿಲ್ಲ. ಹೀಗಾದರೆ ನಾವು ಮನೆ ತಲುಪುವುದು ಯಾವಾಗ ? ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ಸಾರಿಗೆ ನಿಯಂತ್ರಣ ಅಧಿಕಾರಿ ಆರ್.ಐ. ಪತ್ತಾರ ಹಾಗೂ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಮನವೊಲಿಸಲು ಮುಂದಾದರು.</p>.<p>ಆರ್.ಐ. ಪತ್ತಾರ ಮಾತನಾಡಿ, ‘ನಿಮ್ಮ ಗ್ರಾಮಕ್ಕೆ ಸಂಚರಿಸುವ ಬಸ್ ಪಂಚರ್ ಆಗಿದ್ದರಿಂದ ತೊಂದರೆ ಆಗಿದೆ. ತಕ್ಷಣ 2 ಬಸ್ಗಳನ್ನು ಬಿಡುತ್ತೇವೆ. ಮುಂದೆ ಈ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು’ ಎಂದಾಗ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟರು.</p>.<p>ಸಿದ್ದಾಪುರ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>